Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ಹೊಳೆಯುವ ಸೇಬು, ಕಾಂಗ್ರೆಸ್ ಕೊಳೆತ...

ಮೋದಿ ಹೊಳೆಯುವ ಸೇಬು, ಕಾಂಗ್ರೆಸ್ ಕೊಳೆತ ಮಾವಿನ ಹಣ್ಣಿನಂತೆ: ಸಚಿವ ಈಶ್ವರಪ್ಪ ಟೀಕೆ

ವಾರ್ತಾಭಾರತಿವಾರ್ತಾಭಾರತಿ26 Jan 2022 8:25 PM IST
share
ಮೋದಿ ಹೊಳೆಯುವ ಸೇಬು, ಕಾಂಗ್ರೆಸ್ ಕೊಳೆತ ಮಾವಿನ ಹಣ್ಣಿನಂತೆ: ಸಚಿವ ಈಶ್ವರಪ್ಪ ಟೀಕೆ

ಚಿಕ್ಕಮಗಳೂರು, ಜ.26: ಕಾಂಗ್ರೆಸ್ ಪಕ್ಷ ಕೊಳೆತ ಮಾವಿನಹಣ್ಣು, ಗೆದ್ದಲು ತಿಂದ ಮರದಂತಾಗಿದೆ. ಅಂತಹ ಪಕ್ಷವನ್ನು ಯಾರುತಾನೆ ಸೇರಲು ಬಯಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು. 

ಬುಧವಾರ ನಗರದಲ್ಲಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿ ಕ್ರಿಯಿಸಿದ ಅವರು, ಮೋದಿ ಹೊಳೆಯುವ ಸೇಬಿನ ಹಣ್ಣಿನಂತೆ. ಆ ಹಣ್ಣನ್ನು ಹುಡುಕಿಕೊಂಡು ವಿವಿಧ ಪಕ್ಷಗಳ ಮುಖಂಡರು ಬಿಜೆಪಿಯತ್ತ ಬರುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಓರ್ವ ಶಾಸಕನ ಹೆಸರನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೇಳಲಿ ಎಂದು ಸವಾಲು ಹಾಕಿದರು.

ಸಿದ್ಧರಾಮಯ್ಯ ಅವರಿಗೆ ಸಿಎಂ ಸ್ಥಾನ, ವಿರೋಧ ಪಕ್ಷದ ಸ್ಥಾನ ಬಿಟ್ಟರೇ ಪಕ್ಷಕ್ಕಾಗಿ ದುಡಿಯುವ ಮನಸ್ಸಿಲ್ಲ, ಸೋನಿಯಾಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆದರೂ ಅವರು ಸಿಎಂ ಸ್ಥಾನಕ್ಕಾಗಿ ಇಲ್ಲಿಯೇ ಉಳಿದಿದ್ದಾರೆ. ಬಿಜೆಪಿ ಪಕ್ಷದ ಸಿ.ಟಿ.ರವಿ ಪಕ್ಷ ಸಂಘಟನೆಗಾಗಿ ಮಂತ್ರಿ ಸ್ಥಾನ ತೊರೆದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದ ಅವರು, ಅಧಿಕಾರವಿಲ್ಲದೇ ಹತಾಶರಾಗಿರುವ ಸಿದ್ದರಾಮಯ್ಯ, ಡಿಕೆಶಿ ಅಧಿಕಾರಕ್ಕಾಗಿ ಮೇಕೆದಾಟು ಪಾದಯಾತ್ರೆ ನಾಟಕ ಆಡಿದರು. ಈಗ ಮಹಾದಾಯಿ ಪಾದಯಾತ್ರೆ ಎನ್ನುತ್ತಿದ್ದಾರೆ ಎಂದರು. 

ನಾನು ನೀರಾವರಿ ಮಂತ್ರಿಯಾಗಿದ್ದಾಗ ಖರ್ಗೆ, ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್ ಅವರು ದಿಲ್ಲಿಯಲ್ಲಿ ಸೋನಿಯಾಗಾಂಧಿ ಭೇಟಿಮಾಡಿ ಕಳಸ ಬಂಡೂರಿ ಯೋಜನೆಗೆ ಗೋವಾ ರಾಜ್ಯ ಬೆಂಬಲ ನೀಡಲಿದೆ ಹೇಳಿದ್ದರು. ಗೋವಾ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ಸೋನಿಯಾಗಾಂಧಿ ಕರ್ನಾಟಕಕ್ಕೆ ಒಂದು ಹನಿನೀರೂ ಕೊಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಇದು ಸುಳ್ಳೆಂದು ಸಾಭೀತು ಪಡಿಸಿದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಉತ್ತರಪ್ರದೇಶದಲ್ಲಿ ಬಿಜೆಪಿಯಿಂದ ಬೇರೆ ಪಕ್ಷಕ್ಕೆ ಸಚಿವರು ಹೋಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಬಿಜೆಪಿ ಟಿಕೆಟ್ ನೀಡಲು ಜರಡಿ ಹಿಡಿಯುತ್ತಿರುವುದರಿಂದ ಟಿಕೆಟ್ ಸಿಗುವುದಿಲ್ಲವೆಂದು ತಿಳಿದವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಹಾಗೆಯೇ ಬೇರೆ ಪಕ್ಷದವರು ಬಿಜೆಪಿ ಸೇರುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಕತೆ ಮುಗಿದಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಲ್ಲಿ ಕಾಂಗ್ರೆಸ್ ಕತೆ ಮುಗಿಸುತ್ತಾರೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X