Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ,...

ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ, ಮಾಧ್ಯಮಗಳಿಂದ ನೂತನ ಐಟಿ ನಿಯಮಗಳಡಿ ಮಾಹಿತಿ ಕೇಳಿರುವ ಕೇಂದ್ರ ಸಚಿವಾಲಯ

ಆರ್ಟಿಐ ಕಾಯ್ದೆಯಡಿ ಪಡೆದ ಉತ್ತರದಿಂದ ಮಾಹಿತಿ ಬಯಲು

ವಾರ್ತಾಭಾರತಿವಾರ್ತಾಭಾರತಿ26 Jan 2022 10:17 PM IST
share
ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ, ಮಾಧ್ಯಮಗಳಿಂದ ನೂತನ ಐಟಿ ನಿಯಮಗಳಡಿ ಮಾಹಿತಿ ಕೇಳಿರುವ ಕೇಂದ್ರ ಸಚಿವಾಲಯ

ಹೊಸದಿಲ್ಲಿ,ಜ.26: ನೂತನ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ನಿಯಮಾವಳಿಗಳ ನಿರ್ದಿಷ್ಟ ನಿಯಮಗಳಿಗೆ ಉಚ್ಚ ನ್ಯಾಯಾಲಯಗಳು ತಡೆಯಾಜ್ಞೆ ನೀಡಿದ್ದರೂ ಅವುಗಳಡಿ ಮಾಹಿತಿಗಳನ್ನು ಸಲ್ಲಿಸುವಂತೆ ವಾರ್ತಾ ಮತ್ತು ಪ್ರಸಾರ (ಐ ಆ್ಯಂಡ್ ಬಿ) ಸಚಿವಾಲಯವು ಮಾಧ್ಯಮಗಳ ಪ್ರಕಾಶಕರಿಗೆ ನೋಟಿಸ್ಗಳನ್ನು ಜಾರಿಗೊಳಿಸಿರುವುದು ಇಂಟರ್ನೆಟ್ ಫ್ರೀಡಂ ಫೌಂಡೇಷನ್ (ಐಎಫ್ಎಫ್) ಆರ್ಟಿಐ ಕಾಯ್ದೆಯಡಿ ಪಡೆದುಕೊಂಡಿರುವ ಉತ್ತರದಿಂದ ಬೆಳಕಿಗೆ ಬಂದಿದೆ. 2021,ಆ.14 ಮತ್ತು 2021,ಸೆಪ್ಟಂಬರ್ 16ರಂದು ಅನುಕ್ರಮವಾಗಿ ಬಾಂಬೆ ಮತ್ತು ಮದ್ರಾಸ್ ಉಚ್ಚ ನ್ಯಾಯಾಲಯಗಳು ಹೊರಡಿಸಿದ್ದ ಆದೇಶಗಳಲ್ಲಿ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ)ನಿಯಮಗಳು,2021ರ ಎರಡು ಉಪನಿಯಮಗಳನ್ನು ತಡೆಹಿಡಿಯಲಾಗಿತ್ತು.

ಐಟಿ ನಿಯಮಗಳ ವಿರುದ್ಧ ಸಲ್ಲಿಸಲಾಗಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ್ದ ಮದ್ರಾಸ್ ಉಚ್ಚ ನ್ಯಾಯಾಲಯವು ದೇಶದ ಮಾಧ್ಯಮಗಳ ಸ್ವಾತಂತ್ರವನ್ನು ಕಿತ್ತುಕೊಳ್ಳುತ್ತಿವೆ ಎಂಬ ಕಾರಣ ನೀಡಿ 9(1) ಮತ್ತು 9(3) ಉಪನಿಯಮಗಳಿಗೆ ತಡೆಯಾಜ್ಞೆಯನ್ನು ನೀಡಿತ್ತು. ಇದಕ್ಕೂ ಮುನ್ನ ಇಂತಹುದೇ ಅರ್ಜಿಗಳ ವಿಚಾರಣೆಯ ಬಳಿಕ ಬಾಂಬೆ ನ್ಯಾಯಾಲಯವೂ ಈ ಉಪನಿಯಮಗಳನ್ನು ತಡೆಹಿಡಿದಿತ್ತು.

ನಿಯಮ 9 ಸಂಹಿತೆಯ ಅನುಸರಣೆ ಮತ್ತು ಅವಲೋಕನಕ್ಕೆ ಸಂಬಂಧಿಸಿದ್ದು,ನೀತಿ ಸಂಹಿತೆಯ ಅನುಸರಣೆಯನ್ನು ಮತ್ತು ಪ್ರಕಾಶಕರ ಯಾವುದೇ ಕುಂದುಕೊರತೆಗಳಿಗೆ ಪರಿಹಾರವನ್ನು ಖಚಿತಪಡಿಸಲು ಕೇಂದ್ರ ಸರಕಾರವು ಮೂರು ಸ್ತರಗಳ ಮೇಲ್ವಿಚಾರಣೆ ಕಾರ್ಯವಿಧಾನವನ್ನು ರೂಪಿಸುತ್ತದೆ.

ಇದನ್ನೂ ಓದಿ: ಐಟಿ ಕಾಯ್ದೆಯ ಸೆಕ್ಷನ್ 66 ಎ ಬಳಕೆ  ಮುಂದುವರಿಕೆ: ರಾಜ್ಯಗಳಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

ಐಟಿ ನಿಯಮಗಳಡಿ ತಮ್ಮ ಬಗ್ಗೆ ಮಾಹಿತಿಗಳನ್ನು ಸಲ್ಲಿಸುವಂತೆ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ತಮಗೆ ನೋಟಿಸ್ಗಳನ್ನು ನೀಡಿದೆ ಎಂದು ಡಿಜಿಟಲ್ ಸುದ್ದಿ ಪ್ರಕಾಶಕರು ತಿಳಿಸಿರುವುದನ್ನು ಐಎಫ್ಎಫ್ ತನ್ನ ಇತ್ತೀಚಿನ ವರದಿಯಲ್ಲಿ ಉಲ್ಲೇಖಿಸಿದೆ.

 ಈ ಬಗ್ಗೆ ಐಎಫ್ಎಫ್ ಜ.3ರಂದು ಆರ್ಟಿಐ ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಜ.14ರಂದು ಉತ್ತರ ನೀಡಿದೆ. 2021,ಮೇ 26 ಮತ್ತು 2021,ಸೆ.9ರಂದು ತಾನು ಪ್ರಕಾಶಕರಿಗೆ ನೋಟಿಸ್ಗಳನ್ನು ಹೊರಡಿಸಿದ್ದನ್ನು ಸಚಿವಾಲಯವು ತನ್ನ ಉತ್ತರದಲ್ಲಿ ಒಪ್ಪಿಕೊಂಡಿದೆ. ಸೆ.9ರ ನೋಟಿಸ್ಗಳನ್ನು ಆ.14ರ ಬಾಂಬೆ ಉಚ್ಚ ನ್ಯಾಯಾಲಯದ ಆದೇಶದ ಬಳಿಕ ಹೊರಡಿಸಲಾಗಿತ್ತು ಎನ್ನುವುದನ್ನು ಇಲ್ಲಿ ಗಮನಿಸಬೇಕು. 2,100ಕ್ಕೂ ಅಧಿಕ ಸುದ್ದಿ ಮಾಧ್ಯಮಗಳ ಪ್ರಕಾಶಕರು ಮತ್ತು ಒಟಿಟಿ ಪ್ಲಾಟ್‌ಫಾರ್ಮ್ ಗಳು ಈಗಾಗಲೇ ವಿವರಗಳನ್ನು ಒದಗಿಸಿದ್ದಾರೆ ಎಂದೂ ಸಚಿವಾಲಯವು ಉತ್ತರದಲ್ಲಿ ಒಪ್ಪಿಕೊಂಡಿದೆ.

ಈ ಪೈಕಿ ಎಷ್ಟು ಪ್ರಕಾಶಕರು 2021,ಆ.14ರ (ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪಿನ ದಿನಾಂಕ) ನಂತರ ತಮ್ಮ ವಿವರಗಳನ್ನು ಸಲ್ಲಿಸಿದ್ದರು ಎಂಬ ಪ್ರಶ್ನೆಗೆ ಇಂತಹ ಯಾವುದೇ ಮಾಹಿತಿ ತನ್ನ ಬಳಿಯಲ್ಲಿಲ್ಲ ಎಂದು ಸಚಿವಾಲಯವು ಉತ್ತರಿಸಿದೆ.

ಈ ನೋಟಿಸ್ಗಳನ್ನು ಹೊರಡಿಸಲು ಯಾವ ಕಾನೂನು ಅಧಿಕಾರ ನೀಡಿತ್ತು ಎಂಬ ಪ್ರಶ್ನೆಗೆ ಸಚಿವಾಲಯವು, ಕೋರಿದ ಮಾಹಿತಿಯು ಆರ್ಟಿಐ ಕಾಯ್ದೆಯ ಕಲಂ 2(ಎಫ್)ನ ವ್ಯಾಖ್ಯೆಯಿಂದ ಹೊರತಾಗಿದೆ ಎಂದು ಉತ್ತರಿಸಿದೆ.

ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಎರಡು ಉಚ್ಚ ನ್ಯಾಯಾಲಯಗಳ ತೀರ್ಪುಗಳನ್ನು ಕಡೆಗಣಿಸಿ 2021,ಸೆ.9ರಂದು ನೋಟಿಸ್ಗಳನ್ನು ಹೊರಡಿಸಿದ್ದು ಅಚ್ಚರಿದಾಯಕವಾಗಿದೆ. ಆದರೆ ಈ ನೋಟಿಸ್ಗಳನ್ನು ಹೊರಡಿಸಲು ಕಾನೂನಿನ ಬೆಂಬಲದ ಬಗ್ಗೆ ನಮ್ಮ ಪ್ರಶ್ನೆಯನ್ನು ಅದು ಕಡೆಗಣಿಸಿದೆ ಎಂದು ಐಎಫ್ಎಫ್ ಹೇಳಿದೆ.

ನೋಟಿಸ್ಗಳನ್ನು ಜಾರಿಗೊಳಿಸಲಾಗಿದ್ದ ಮತ್ತು ಅವುಗಳಿಗೆ ಉತ್ತರಿಸಿದ್ದ ಪ್ರಕಾಶಕರ ಪಟ್ಟಿಗಳಂತಹ (ಅವರ ವಿವರಗಳ ಸಹಿತ)ಐಎಫ್ಐಫ್ ನ ಇತರ ಪ್ರಶ್ನೆಗಳನ್ನೂ ಸಚಿವಾಲಯವು ಕಡೆಗಣಿಸಿದೆ.

 ಬಾಂಬೆ ಮತ್ತು ಮದ್ರಾಸ್ ಉಚ್ಚ ನ್ಯಾಯಾಲಯಗಳು ಮಾತ್ರವಲ್ಲ, ದೇಶಾದ್ಯಂತದ ಹೈಕೋರ್ಟ್ಗಳಲ್ಲಿಯೂ ನೂತನ ಐಟಿ ನಿಯಮಗಳು ಸಂವಿಧಾನ ಮತ್ತು ಐಟಿ ಕಾಯ್ದೆಯನ್ನು ಉಲ್ಲಂಘಿಸಿವೆ ಎಂದು ಆರೋಪಿಸಿ ಹಲವಾರು ಮಾಧ್ಯಮ ಸಂಸ್ಥೆಗಳು ಅರ್ಜಿಗಳನ್ನು ಸಲ್ಲಿಸಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X