Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಹೊಸ ಹೊಸ ಯೋಜನೆಗಳ ಮೂಲಕ...

ಶಿವಮೊಗ್ಗ: ಹೊಸ ಹೊಸ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ; ಸಚಿವ ನಾರಾಯಣ ಗೌಡ

ಜಿಲ್ಲಾಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Jan 2022 10:47 PM IST
share
ಶಿವಮೊಗ್ಗ: ಹೊಸ ಹೊಸ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ; ಸಚಿವ ನಾರಾಯಣ ಗೌಡ

ಶಿವಮೊಗ್ಗ , ಜ.26: ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ಸರ್ಕಾರ ನಂಬಿಕೆಯಿರಿಸಿದ್ದು, ಹಲವು ಹೊಸ ಯೋಜನೆಗಳ ಮೂಲಕ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಯುವ ಸಬಲೀಕರಣ, ನೀರಾವರಿ ಇನ್ನಿತರ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ ಎಂದು ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಎಂದು ಹೇಳಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ರಾಜ್ಯ ಸಾಗುತ್ತಿದೆ ಎಂದ ಅವರು, ಇಂದು ಇಡೀ ದೇಶದಲ್ಲಿ ಕೊರೊನಾ ಆತಂಕದ ನಡುವೆಯೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.  ಕೊರೋನಾ ನಿರ್ವಹಣೆಗೆ ರಾಜ್ಯ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ರೈತಾಪಿ ಕುಟುಂಬದ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಯೋಜನೆ, 58ಕ್ಕೂ ಅಧಿಕ ನಾಗರಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಜನಸೇವಕ ಎಂಬ ವಿನೂತನ ಕಾರ್ಯಕ್ರಮ, ಸುಮಾರು 800ರಷ್ಟು ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ-ಒನ್ ಎಂಬ ವಿಶೇಷ ಯೋಜನೆ, 33 ಇಲಾಖೆಗಳ ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆಗಳ ನಿವಾರಣೆಗೆ ಜನಸ್ಪಂದನ ವ್ಯವಸ್ಥೆ, ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ ಎಂದರು.

ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಸಂಪರ್ಕ ರಸ್ತೆಗಳು, ಸೇತುವೆಗಳು, ನೂತನ ರೈಲು ಮಾರ್ಗ ಸಂಪರ್ಕ, ಮೇಲ್ಸೇತುವೆಗಳು, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವ ಪಣ ತೊಡಲಾಗಿದೆ. ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯ 6 ತಾಲೂಕುಗಳಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್  ಟ್ರ್ಯಾಕ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಪಟುಗಳಿಗಾಗಿ ಹಾಸ್ಟೆಲ್‌ಗಳನ್ನು ಈ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಇದರಿಂದಾಗಿ ಸ್ಥಳೀಯವಾಗಿ ಯುವ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು  ಹೇಳಿದರು.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಈಗಾಗಲೇ ಚಾಲನೆ ನೀಡಲಾಗಿದೆ.ಶಿವಮೊಗ್ಗ ಜಿಲ್ಲೆಯ  268 ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 257 ಕಸ ಸಂಗ್ರಹಿಸುವ ಟಿಪ್ಪರ್‌ಗಳನ್ನು ಒದಗಿಸಲಾಗಿದೆ. ಪ್ರಸ್ತುತ ಹಣಕಾಸು ಸಾಲಿನಲ್ಲಿ ಜಿಲ್ಲೆಯಲ್ಲಿ 4409 ಶೌಚಾಲಯಗಳನ್ನು ಪೂರ್ಣಗೊಳಿಸಲಾಗಿದ್ದು,ಇದಕ್ಕಾಗಿ 5.29ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ 104ಕೋಟಿ ರೂ. ವೆಚ್ಚದಲ್ಲಿ  ನಿರಂತರ ಕುಡಿಯುವ ನೀರು ಪೂರೈಸುವ ಕಲ್ಪಿಸುವ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಈಗಾಗಲೇ 32,900 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಶೇ.70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಒಂದು ವರ್ಷದೊಳಗೆ ಶಿವಮೊಗ್ಗ ನಗರದ 55,800 ಮನೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾನಗರಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು  ತಿಳಿಸಿದರು.

ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು.
ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಡಿಎಸ್ ಅರುಣ್, ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್ ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X