Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2006ರ ಕೋಝಿಕ್ಕೋಡ್ ಅವಳಿ ಸ್ಫೋಟ ಪ್ರಕರಣ:...

2006ರ ಕೋಝಿಕ್ಕೋಡ್ ಅವಳಿ ಸ್ಫೋಟ ಪ್ರಕರಣ: ಕೇರಳ ಹೈಕೋರ್ಟ್ ನಿಂದ ಆರೋಪಿಗಳಿಬ್ಬರ ಖುಲಾಸೆ

ಎನ್ಐಎಗೆ ಭಾರೀ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ27 Jan 2022 8:59 PM IST
share
2006ರ ಕೋಝಿಕ್ಕೋಡ್ ಅವಳಿ ಸ್ಫೋಟ ಪ್ರಕರಣ: ಕೇರಳ ಹೈಕೋರ್ಟ್ ನಿಂದ ಆರೋಪಿಗಳಿಬ್ಬರ ಖುಲಾಸೆ

ಕೊಚ್ಚಿ,ಜ.27: ಕೋಝಿಕ್ಕೋಡ್ ನಲ್ಲಿ 2006ರಲ್ಲಿ ಸಂಭವಿಸಿದ್ದ ಅವಳಿ ಸ್ಫೋಟಗಳ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಲ್ಪಟ್ಟಿದ್ದ ಲಷ್ಕರೆ ತೈಬಾದ ಸ್ವಘೋಷಿತ ದಕ್ಷಿಣ ಭಾರತ ಮುಖ್ಯಸ್ಥ ತಡಿಯಂತೆ ವಿಡಾ ನಾಸೀರ್ ಮತ್ತು ಆತನ ಸಂಬಂಧಿ ಶಫಾಝ್ ಅವರನ್ನು ಕೇರಳ ಉಚ್ಚ ನ್ಯಾಯಾಲಯವು ಗುರುವಾರ ಖುಲಾಸೆಗೊಳಿಸಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ಭಾರೀ ಹಿನ್ನಡೆಯನ್ನುಂಟು ಮಾಡಿದೆ. ಪ್ರಕರಣದಲ್ಲಿ ಅಬ್ದುಲ್ ಹಲೀಂ ಮತ್ತು ಅಬೂಬಕರ್ ಯೂಸುಫ್ ಅವರನ್ನು ಬಿಡುಗಡೆಗೊಳಿಸಿದ್ದನ್ನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಮೇಲ್ಮನವಿಯನ್ನೂ ನ್ಯಾಯಾಲಯವು ವಜಾಗೊಳಿಸಿದೆ.

ಎನ್ಐಎ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಾಸೀರ್ ಮತ್ತು ಶಫಾಝ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ವಿನೋದ ಚಂದ್ರನ್ ಮತ್ತು ಝಿಯಾದ್ ರಹ್ಮಾನ್ ಎ.ಎ.ಅವರನ್ನೊಳಗೊಂಡ ವಿಭಾಗೀಯ ಪೀಠವು ತೀರ್ಪನ್ನು ಪ್ರಕಟಿಸಿತು.

ಎರ್ನಾಕುಳಂನ ಎನ್ಐಎ ವಿಶೇಷ ನ್ಯಾಯಾಲಯವು ಮೊದಲ ಆರೋಪಿ ನಾಸೀರ್ ಮತ್ತು ನಾಲ್ಕನೇ ಆರೋಪಿ ಶಫಾಝ್ ಗೆ ಜೀವಾವಧಿ ಶಿಕ್ಷೆಯ ಜೊತೆಗೆ ಅನುಕ್ರಮವಾಗಿ 1.60 ಲ.ರೂ. ಮತ್ತು 1.10 ಲ.ರೂ.ದಂಡವನ್ನು ವಿಧಿಸಿತ್ತು. ನ್ಯಾಯಾಲಯವು ಮೂರನೇ ಆರೋಪಿ ಅಬ್ದುಲ್ ಹಲೀಂ ಮತ್ತು ಒಂಭತ್ತನೇ ಆರೋಪಿ ಅಬೂಬಕರ್ ಯೂಸಫ್ ಅವರನ್ನು ಬಿಡುಗಡೆಗೊಳಿಸಿತ್ತು. ನಾಲ್ವರು ಆರೋಪಿಗಳ ವಿರುದ್ಧ ವಿಚಾರಣೆ 2011,ಆ.11ರಂದು ಪೂರ್ಣಗೊಂಡಿತ್ತು. ವಿಚಾರಣೆಯ ಅವಧಿಯಲ್ಲಿ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿ ಮುಹಮ್ಮದ್ ಅಶರ್ ಮತ್ತು ಎಂಟನೇ ಆರೋಪಿ ಪಿ.ಪಿ.ಯೂಸಫ್ ಅವರನ್ನು ಎನ್ಐಎ 2019ರಲ್ಲಿ ಬಂಧಿಸಿತ್ತು. ಆರನೇ ಆರೋಪಿ ಫಾಯಿಝ್ ವಿಚಾರಣೆಯ ಸಂದರ್ಭದಲ್ಲಿ ಮೃತಪಟ್ಟಿದ್ದರೆ ಏಳನೇ ಆರೋಪಿ ಶಮ್ಮಿ ಫಿರೋಝ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಬದಲಾಗಿದ್ದ. ಐದನೇ ಆರೋಪಿ ಅಬ್ದುಲ್ ಜಲೀಲ್‌ನನ್ನು ಎನ್ಐಎ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಸೇರಿಸಿರಲಿಲ್ಲ.

"ನಾಸೀರ್ ಮತ್ತು ಇತರ ಆರೋಪಿಗಳು ಒಳಸಂಚು ರೂಪಿಸಿದ್ದರು ಮತ್ತು 2006,ಮಾ.3ರಂದು ಕೋಝಿಕ್ಕೋಡ್ ಕೆಎಸ್‌ಆರ್‌ಟಿಸಿ ಮತ್ತು ಗ್ರಾಮಾಂತರ ಬಸ್ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಿದ್ದರು. ಎರಡನೇ ಮಾರಾಡ್ ಕೋಮು ಹತ್ಯಾಕಾಂಡದಲ್ಲಿ ಮುಸ್ಲಿಂ ಆರೋಪಿಯ ಬಗ್ಗೆ ಕಾರ್ಯಾಂಗದ ಪಕ್ಷಪಾತದ ಧೋರಣೆ ಮತ್ತು ನ್ಯಾಯಾಂಗದಿಂದ ಜಾಮೀನು ನಿರಾಕರಣೆಯ ವಿರುದ್ಧ ಸೇಡಿನ ಕ್ರಮವಾಗಿ ಆರೋಪಿಗಳು ಬಾಂಬ್ ಸ್ಫೋಟಗಳನ್ನು ನಡೆಸಿದ್ದರು" ಎಂದು ಎನ್ಐಎ ದೋಷಾರೋಪ ಪಟ್ಟಿಯಲ್ಲಿ ಆರೋಪಿಸಿತ್ತು.

ಮಾ.3ರಂದು ಅಪರಾಹ್ನ 10 ನಿಮಿಷಗಳ ಅಂತರದಲ್ಲಿ ಮಾವೂರು ರೋಡ್ ನ ಎರಡು ಬಸ್ ನಿಲ್ದಾಣಗಳಲ್ಲಿ ಈ ಸ್ಫೋಟಗಳು ಸಂಭವಿಸಿದ್ದವು. ಬಾಂಬ್‌ಗಳನ್ನು ಸ್ಫೋಟಿಸಲು ಟೈಮರ್ ಸಾಧನಗಳನ್ನು ಬಳಸಲಾಗಿತ್ತು. ಓರ್ವ ಪೊಲೀಸ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆರಂಭದಲ್ಲಿ ವಿಶೇಷ ಪೊಲೀಸ್ ತಂಡವು ಪ್ರಕರಣದ ತನಿಖೆಯನ್ನು ನಡೆಸಿದ್ದು,ಬಳಿಕ ಕ್ರೈಂ ಬ್ರಾಂಚ್ ಗೆ ಹಸ್ತಾಂತರಿಸಲಾಗಿತ್ತು. 2009ರಲ್ಲಿ ಎನ್ಐಎ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು

ನಾಸೀರ್ ನನ್ನು 2009ರಲ್ಲಿ ಮೇಘಾಲಯದಲ್ಲಿ ಭಾರತ-ಬಾಂಗ್ಲಾದೇಶ ಗಡಿಯ ಬಳಿ ಬಂಧಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X