Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವುದು...

ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವುದು ಅಗತ್ಯ: ರವಿಕಿರಣ್ ಮುರ್ಡೇಶ್ವರ

ವಾರ್ತಾಭಾರತಿವಾರ್ತಾಭಾರತಿ28 Jan 2022 7:08 PM IST
share
ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವುದು ಅಗತ್ಯ: ರವಿಕಿರಣ್ ಮುರ್ಡೇಶ್ವರ

ಕುಂದಾಪುರ, ಜ.28: ನಾವೆಲ್ಲರೂ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳ ಬೇಕು. ನಮ್ಮೆಲ್ಲರ ಪವಿತ್ರ ಗ್ರಂಥ ಸಂವಿಧಾನ. ಈ ಸಂವಿಧಾನ ಪುಸ್ತಕವನ್ನು ಪ್ರಥಮ ಬಾರಿಗೆ ಮತದಾನ ಮಾಡುವ ವ್ಯಕ್ತಿಗೆ ಉಚಿತವಾಗಿ ಕೊಡುವಂತಹ ವ್ಯವಸ್ಥೆ ಆಗಬೇಕು ಎಂದು ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಹೇಳಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ರಾಜ್ಯ ಸಮಿತಿ ವತಿಯಿಂದ ತಲ್ಲೂರು ಸಮೀಪದ ಶೇಷ ಕೃಷ್ಣ ಸಭಾಭವನದಲ್ಲಿ ಬುಧವಾರ ಆಯೋಜಿಸಲಾದ ಸಂವಿಧಾನ ಅರ್ಪಣಾ ದಿನದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾವೆಲ್ಲರೂ ಯೋಗ್ಯ ಶಾಸಕರನ್ನು ಆಯ್ಕೆ ಮಾಡಬೇಕಾಗುತ್ತದೆ. ಒಮ್ಮೆ ನಾವು ಆಯ್ಕೆ ಮಾಡಿದ ನಂತರ ಅವರು ನಮ್ಮ ಹತೋಟಿಯಲ್ಲಿರುವುದಿಲ್ಲ. ಅವರು ಮಾಡಿದ್ದೇ ಕಾನೂನಾಗುತ್ತದೆ. ಹಾಗಾಗಬಾರದು ಎಂದರೆ ನಾವೆಲ್ಲರೂ ಸಂವಿಧಾನ ಪುಸ್ತಕವನ್ನು ಓದಿ ಅರ್ಥೈಸಿಕೊಳ್ಳುಬೇಕು ಎಂದರು.

ಈ ಸಂದರ್ಭದಲ್ಲಿ ಯುವಜನ ಸೇವಾ ಇಲಾಖೆಯ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಬ್ರಹ್ಮಾವರ ಉಪ ತಹಸೀಲ್ದಾರ ರಾಘವೇಂದ್ರ ನಾಯಕ್, ದಸಂಸ ಜಿಲ್ಲಾ ಸಂಚಾಲಕ ಚಂದ್ರ ಅಲ್ತಾರ್, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಾಯಕಿ ಪ್ರಜ್ವಲ, ರಾಜ್ಯ ನೀಲಿ ಸೇನೆಯ ಉಪಾಧ್ಯಕ್ಷ ಸದ್ದಾಂ ಹುಸೇನ್ ಅವರಿಗೆ ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಭೀಮರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಅಧ್ಯಕ್ಷತೆಯನ್ನು ದಸಂಸ ಭೀಮಘರ್ಜನೆಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು ವಹಿಸಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾದಿಕಾರಿ ಅರುಣ್ ಕುಮಾರ್ ಶಟ್ಟಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡಿದರು. ರಾಜ್ಯ ಸಂಘಟನಾ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ ಬುದ್ಧವಂದನೆಯನ್ನು ನೆರವೇರಿಸಿದರು. ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ ಗೌರವ ವಂದನೆಯನ್ನು ಸಲ್ಲಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸ ಲಾಯಿತು. ಭೀಮಘರ್ಜನೆ ಯುಟ್ಯೂಬ್ ಚಾನೆಲ್ ಲೋಕಾರ್ಪಣೆಗೊಳಿಸ ಲಾಯಿತು.

ಮುಖ್ಯ ಅತಿಥಿಗಳಾಗಿ ಕುಂದಾಪುರ ಸಮಾಜ ಕಲ್ಯಾಣ ಇಲಾಖೆಯ ರಾಘವೇಂದ್ರ ವರ್ಣೇಕರ್, ಗುಲ್ವಾಡಿ ಗ್ರಾಪಂ ಅಧ್ಯಕ್ಷ ಸುದೇಶ್ ಶೆಟ್ಟಿ, ತಲ್ಲೂರು ಗ್ರಾಪಂ ಉಪಾಧ್ಯಕ್ಷ ಗಿರೀಶ್ ನಾಯಕ್, ವಕೀಲರಾದ ಉದಯ್ ಮಣೂರು, ಗ್ರಾಪಂ ಸದಸ್ಯ ಸಂಜು ದೇವಾಡಿಗ, ಅಕ್ಷಯ, ರಾಧಕೃಷ್ಣ, ಕೃಷ್ಣ ಪೂಜಾರಿ, ಲಕ್ಷ್ಮಿ, ನಾಗರತ್ನ, ತೌಫಿಕ್ ಪಾರ್ಕರ್, ರಾಷ್ಟ್ರೀಯ ಮುಸ್ಲಿಂ ಮೊರ್ಚಾದ ರಾಜ್ಯಾಧ್ಯಕ್ಷ ನಜೀರ್ ಬೇಳುವಾಯಿ, ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ರಾಜು ತರಿಕರ್, ಜಿಲ್ಲಾ ಸಂಚಾಲಕ ಬಾಗಲಕೋಟ ಶಿವಶಂಕರ ಯಾದಗಿರಿ ಉಪಸ್ಥಿತರಿದ್ದರು.

ದಸಂಸ ವಸಂತ ವಂಡ್ಸೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಜುನಾಥ ಗುಡ್ಡೆಯಂಗಡಿ ಸ್ವಾಗತಿಸಿ, ವಿಜಯ್ ಕೆಎಸ್ ವಂದಿಸಿದರು. ಸುಮಾಲತಾ ಬಜಗೋಳಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X