Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾರ್ಚ್ ತಿಂಗಳಲ್ಲಿ ಎಪಿಎಂಸಿ ರೈಲ್ವೇ...

ಮಾರ್ಚ್ ತಿಂಗಳಲ್ಲಿ ಎಪಿಎಂಸಿ ರೈಲ್ವೇ ಕೆಳಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ: ದಿನೇಶ್ ಮೆದು

ಪುತ್ತೂರು ಎಪಿಎಂಸಿ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ29 Jan 2022 5:27 PM IST
share
ಮಾರ್ಚ್ ತಿಂಗಳಲ್ಲಿ ಎಪಿಎಂಸಿ ರೈಲ್ವೇ ಕೆಳಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ: ದಿನೇಶ್ ಮೆದು

ಪುತ್ತೂರು: ಪುತ್ತೂರಿನ ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿರುವ ಎಪಿಎಂಸಿ ರೈಲ್ವೇ ಕೆಳ ಸೇತುವೆ ನಿರ್ಮಾಣ ಕಾಮಗಾರಿಗೆ ಮಾರ್ಚ್ ತಿಂಗಳಿನಲ್ಲಿ ಶಿಲನ್ಯಾಸ ಕಾರ್ಯಕ್ರಮ ನಡೆಸಲಾಗುವುದು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜತೆ ಮಾತನಾಡಿ ಶಿಲನ್ಯಾಸಕ್ಕೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ತಿಳಿಸಿದ್ದಾರೆ. 

ಎಪಿಎಂಸಿ ಸಾಮಾನ್ಯ ಸಭೆಯು ಶನಿವಾರ ಅಧ್ಯಕ್ಷ ದಿನೇಶ್ ಮೆದು ಅವರ ಅಧ್ಯಕ್ಷತೆಯಲ್ಲಿ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. 

ಸಭೆಯಲ್ಲಿ 2022-23ನೇ ಆರ್ಥಿಕ ಸಾಲಿಗೆ ರೂ.2,81,45,000 ಆದಾಯ ನಿರೀಕ್ಷಿಸಲಾಗಿದ್ದು, ರೂ. 1,56,39,333 ಖರ್ಚುಗಳ ಬಜೆಟ್ ಮುಂಗಡಪತ್ರ ಮಂಡಿಸಲಾಯಿತು. ಮುಂಗಡಪತ್ರವನ್ನು  ಪ್ರಭಾರ ಕಾರ್ಯದರ್ಶಿ ರಾಮಚಂದ್ರ ಮಂಡಿಸಿ ಮುಂದಿನ ಹಣಕಾಸು ವರ್ಷದಲ್ಲಿ ಮಾರುಕಟ್ಟೆ ಶುಲ್ಕದ ಮೂಲಕ 2,40,00,000 ರೂ. ಆದಾಯ ನಿರೀಕ್ಷಿಸಲಾಗಿದೆ. ಅದೇ ರೀತಿ ಬಳಕೆದಾರರ ಶುಲ್ಕದ ಮೂಲಕ 40,000 ರೂ., ಪುಸ್ತಕ ಮತ್ತು ಫಾರಂ ಮಾರಾಟದಿಂದ 25,000 ರೂ., ಠೇವಣಿಗಳ ಮೇಲಿನ ಬಡ್ಡಿಯ ಮೂಲಕ 3 ಲಕ್ಷ ರೂ., ಕಟ್ಟಡಗಳ ಲೀವ್ ಆ್ಯಂಡ್ ಲೈಸೆನ್ಸ್ ಶುಲ್ಕದಿಂದ 35,00,000 ರೂ., ಕಟ್ಟಡಗಳ ಲೀವ್ ಆ್ಯಂಡ್ ಲೈಸೆನ್ಸ್ ಶುಲ್ಕದ ಮೇಲೆ ದಂಡದ ಮೂಲಕ 25,000 ರೂ., ಮಾರುಕಟ್ಟೆ ಶುಲ್ಕದ ಮೇಲೆ ದಂಡದ ಮೂಲಕ 2,00,000 ರೂ., ಗೋದಾಮು ನೋಂದಣಿ ಶುಲ್ಕದಿಂದ 3000 ರೂ. ಅಡಮಾನ ಸಾಲದ ಮೇಲಿನ ಬಡ್ಡಿಯಿಂದ 50,000 ರೂ. ಆದಾಯ ನಿರೀಕ್ಷಿಸಲಾಗಿದೆ ಎಂದು ವಿವರಿಸಿದರು. ಸಮಿತಿ ಸದಸ್ಯರು ಮುಂಗಡಪತ್ರಕ್ಕೆ ಒಪ್ಪಿಗೆ ನೀಡಿದರು.  

ಎಪಿಎಂಸಿ ಉಪಾಧ್ಯಕ್ಷ ಎನ್.ಎಸ್ ಮಂಜುನಾಥ್, ನಿರ್ದೇಶಕರಾದ ಅಬ್ದುಲ್ ಶಕೂರ್ ಹಾಜಿ, ಬೂಡಿಯಾರ್ ರಾಧಾಕೃಷ್ಣ ರೈ, ಪುಲಸ್ತ್ಯಾ ರೈ, ತ್ರಿವೇಣಿ ಪೆರ್ವೋಡಿ, ತೀರ್ಥಾನಂದ ದುಗ್ಗಲ, ಕೊರಗಪ್ಪ, ಕುಶಾಲಪ್ಪ ಗೌಡ, ಮೇದಪ್ಪ ಗೌಡ, ಕೃಷ್ಣಕುಮಾರ್ ರೈ, ನಾಮನಿರ್ದೇಶಿತ ಸದಸ್ಯರಾದ ಮೋಹನಾಂಗಿ, ಬಾಲಕೃಷ್ಣ ಜೋಯಿಸ ಉಪಸ್ಥಿತರಿದ್ದರು. ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಸ್ವಾಗತಿಸಿ, ಕಲಾಪ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X