Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹಲ್ಲುಗಳು ಬಿಳಿಯಾಗಬೇಕೇ?...

ಹಲ್ಲುಗಳು ಬಿಳಿಯಾಗಬೇಕೇ? ಆಯುರ್ವೇದದಲ್ಲಿದೆ ಉಪಾಯ

ವಾರ್ತಾಭಾರತಿವಾರ್ತಾಭಾರತಿ29 Jan 2022 6:36 PM IST
share
ಹಲ್ಲುಗಳು ಬಿಳಿಯಾಗಬೇಕೇ? ಆಯುರ್ವೇದದಲ್ಲಿದೆ ಉಪಾಯ

ನಾವೆಲ್ಲ ನಮ್ಮ ಚರ್ಮ ಮತ್ತು ಕೂದಲಿನ ಬಗ್ಗೆ ಹೆಚ್ಚಿನ ಮೋಹವನ್ನು ಹೊಂದಿದ್ದೇವೆ, ಆದರೆ ಹಲ್ಲುಗಳತ್ತ ಗಮನ ನೀಡುವುದಿಲ್ಲ ಮತ್ತು ತನ್ಮೂಲಕ ಹಲ್ಲುಗಳ ಆರೋಗ್ಯವನ್ನು ಕಡೆಗಣಿಸುತ್ತೇವೆ. ದಂತವೈದ್ಯರನ್ನು ನಿಯಮಿತವಾಗಿ ಭೇಟಿಯಾಗುವುದು ಎಷ್ಟು ಮುಖ್ಯವೋ ಮನೆಯಲ್ಲಿ ನಮ್ಮ ಹಲ್ಲುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದೂ ಅಷ್ಟೇ ಮುಖ್ಯವಾಗಿದೆ.

ಆಯುರ್ವೇದ ತಜ್ಞೆ ಡಾ.ದೀಕ್ಷಾ ಭಾವಸಾರ ಅವರು ಹಲ್ಲುಗಳ ನೈರ್ಮಲ್ಯಕ್ಕೆ ನೆರವಾಗಬಲ್ಲ ಕೆಲವು ಸರಳ ಪರಿಹಾರಗಳನ್ನು ತನ್ನ ಇನ್ಸ್ಟಾಗ್ರಾಂ ಪೋಸ್ಟ್ ನಲ್ಲಿ ಸೂಚಿಸಿದ್ದಾರೆ. ಬೋನಸ್: ಈ ಪರಿಹಾರಗಳು ಹಲ್ಲುಗಳನ್ನು ಬಿಳಿಯಾಗಿಸಲೂ ನೆರವಾಗುತ್ತವೆ.

ಐದು ಪರಿಣಾಮಕಾರಿ ನೈಸರ್ಗಿಕ ಆಯುರ್ವೇದ ಟಿಪ್ಸ್ ಇಲ್ಲಿವೆ:

►ಆಯಿಲ್ ಪುಲ್ಲಿಂಗ್ (Oil pulling): ಬಾಯಿಯಲ್ಲಿ ಎಣ್ಣೆಯನ್ನು ಹಾಕಿಕೊಂಡು ಮುಕ್ಕಳಿಸುವುದನ್ನು ಆಯಿಲ್ ಪುಲ್ಲಿಂಗ್ ಎಂದು ಕರೆಯಲಾಗುತ್ತದೆ. ಅದು ವಸಡುಗಳು ಮತ್ತು ಹಲ್ಲುಗಳಲ್ಲಿಯ ಸೂಕ್ಷ್ಮಾಣುಜೀವಿಗಳನ್ನು ನಿರ್ಮೂಲನಗೊಳಿಸುತ್ತದೆ. ಬಾಯಿ ಹುಣ್ಣುಗಳನ್ನು ಶಮನಗೊಳಿಸುವ ಜೊತೆಗೆ ಬಾಯಿಯ ಸ್ನಾಯುಗಳಿಗೆ ವ್ಯಾಯಾಮವನ್ನೂ ನೀಡುತ್ತದೆ ಮತ್ತು ಅವುಗಳನ್ನು ಬಲಗೊಳಿಸುತ್ತದೆ.

►ಬೇವಿನ ಮತ್ತು ಕರಿಜಾಲಿ ಕಡ್ಡಿಗಳಿಂದ ಹಲ್ಲುಜ್ಜಿ

ಬೇವು ಮತ್ತು ಕರಿಜಾಲಿ ಸೂಕ್ಷ್ಮಜೀವಿ ನಿಗ್ರಹ ಗುಣವನ್ನು ಹೊಂದಿವೆ. ಈ ಮರಗಳ ರೆಂಬೆಯಿಂದ ಕಡ್ಡಿಗಳನ್ನು ಮಾಡಿಕೊಂಡು ಅವುಗಳನ್ನು ಅಗಿಯುತ್ತ ಹಲ್ಲುಜ್ಜುತ್ತಿದ್ದರೆ ಬ್ಯಾಕ್ಟೀರಿಯಾ ನಿರೋಧಕ ರಾಸಾಯನಿಕಗಳು ಬಿಡುಗಡೆಗೊಳ್ಳುತ್ತವೆ ಮತ್ತು ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳಲು ನೆರವಾಗುತ್ತವೆ.

►ನಾಲಿಗೆಯ ಸ್ವಚ್ಛತೆ ಕಾಯ್ದುಕೊಳ್ಳಿ

ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳುವಲ್ಲಿ ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ. ಪಾಚಿ ಸಂಗ್ರಹಗೊಳ್ಳಲು ನೆರವಾಗುವ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಕಾರಣವಾಗುವ ಎಲ್ಲ ವಿಷವಸ್ತುಗಳನ್ನು ಟಂಗ್ ಕ್ಲೀನರ್ ಬಳಸುವ ಮೂಲಕ ನಿವಾರಿಸಬಹುದು.

►ಹರ್ಬಲ್ ರಿನ್ಸ್ ಬಳಸಿ

ಬಾಯಿಯನ್ನು ಸ್ವಚ್ಛವಾಗಿಟ್ಟುಕೊಳ್ಳಲು 'ಮೌತ್ ರಿನ್ಸ್'(mouth rinse) ಬಳಸುವಂತೆ ಹೆಚ್ಚಿನ ದಂತವೈದ್ಯರು ಸೂಚಿಸುತ್ತಾರೆ. ಡಾ. ಭಾವಸಾರ ಹೇಳುವಂತೆ ತ್ರಿಫಲ ಅಥವಾ ಯಷ್ಟಿಮಧುವಿನಿಂದ ತಯಾರಿಸಿದ ಕಷಾಯ ಅತ್ಯುತ್ತಮ ಮೌತ್ ರಿನ್ಸರ್ ಆಗಿದೆ. ಇದು ಬಾಯಿಯ ಆರೋಗ್ಯವನ್ನು ಕಾಯ್ದುಕೊಳ್ಳುವ ಜೊತೆಗೆ ಬಾಯಿಹುಣ್ಣುಗಳ ನಿವಾರಣೆಗೆ ನೆರವಾಗುತ್ತದೆ.

►ದಿನಕ್ಕೆರಡು ಬಾರಿ ಹಲ್ಲುಜ್ಜಿ

ಪ್ರತಿ ಊಟದ ನಂತರ,ವಿಶೇಷವಾಗಿ ಚಾಕೊಲೇಟ್ಗಳಂತಹ ಅಂಟು ಆಹಾರ ವಸ್ತುಗಳನ್ನು ಸೇವಿಸಿದ ಬಳಿಕ ಹಲ್ಲುಗಳನ್ನು ಕಡ್ಡಾಯವಾಗಿ ಉಜ್ಜಬೇಕು. ದಿನಕ್ಕೆ ನಾಲ್ಕೈದು ಸಲ ಹಲ್ಲುಗಳನ್ನು ಉಜ್ಜುವುದು ಕಾರ್ಯಸಾಧ್ಯವಲ್ಲ,ಹೀಗಾಗಿ ಬೆಳಿಗ್ಗೆ ಮತ್ತು ರಾತ್ರಿ ಮಲಗುವ ಮುನ್ನ,ಹೀಗೆ ಕನಿಷ್ಠ ಎರಡು ಸಲ ಹಲ್ಲುಗಳನ್ನು ಉಜ್ಜುವುದು ಸಮಸ್ಯೆಯೇನಲ್ಲ.

ಕೃಪೆ: indianexpress.com

View this post on Instagram

A post shared by Dr Dixa Bhavsar (@drdixa_healingsouls)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X