Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ಸರಕಾರದಿಂದ ಹಗಲು ದರೋಡೆ: ಶಾಸಕ...

ಬಿಜೆಪಿ ಸರಕಾರದಿಂದ ಹಗಲು ದರೋಡೆ: ಶಾಸಕ ಯು.ಟಿ. ಖಾದರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jan 2022 7:34 PM IST
share
ಬಿಜೆಪಿ ಸರಕಾರದಿಂದ ಹಗಲು ದರೋಡೆ: ಶಾಸಕ ಯು.ಟಿ. ಖಾದರ್ ಆರೋಪ

ಮಂಗಳೂರು, ಜ. 29: ಜನ ಸಾಮಾನ್ಯರಿಗೆ ಯಾವುದೇ ಮಾಹಿತಿಯನ್ನು ನೀಡದೆ ಜನರನ್ನು ಕತ್ತಲಲ್ಲಿಟ್ಟು ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡುವ ಮೂಲಕ ಕಿಸೆಗಳ್ಳತನದೊಂದಿಗೆ ಹಗಲು ದರೋಡೆ ಮಾಡುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ಆರೋಪ ಮಾಡಿದ ಅವರು, ನರಿಂಗಾನದಿಂದ ಮಂಗಳೂರಿಗೆ ಪ್ರಯಾಣದರವಾಗಿದ್ದ 16 ರೂ.ಗಳಿಂದ 23 ರೂ.ಗಳಿಗೆ, ದೇರಳಕಟ್ಟೆಯಿಂದ ಮಂಗಳೂರಿಗೆ 13 ರೂ.ಗಳಿದ್ದ ದರವನ್ನು 20 ರೂ.ಗಳಿಗೆ ಯಾವುದೇ ಮಾಹಿತಿ ನೀಡದೆ ಏರಿಕೆ ಮಾಡಲಾಗಿದೆ ಎಂದರು.

ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ ಜನರಿಂದ ತಿರಸ್ಕರಿಸ್ಪಡುವ ಭಯ ಎದುರಾದಾಗ ಅದನ್ನು ಎದುರಿಸಲಾಗದೆ ಮಾಹಿತಿಯನ್ನೇ ನೀಡದೆ ಈ ರೀತಿ ಹಗಲುದರೋಡೆಗೆ ಬಿಜೆಪಿ ಸರಕಾರ ಹೊರಟಿದೆ. ಜನರು ಸುಮ್ಮನಿದ್ದಾರೆ ಎಂದು ದಬ್ಬಾಳಿಕೆ ಮಾಡುವುದೇ ಎಂದು ಖಾದರ್ ಪ್ರಶ್ನಿಸಿದರು.

ಬಿಜೆಪಿ ಜನರಿಂದ ತಿರಸ್ಕರಿಸಲ್ಪಡುತ್ತಿರುವ ಪಕ್ಷ
ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಅದರಿಂದಾಗಿಯೇ ರಾಜ್ಯದಲ್ಲಿ ಆಡಳಿತದಲ್ಲಿದ್ದ ಸಂದರ್ಭ ಐದು ವರ್ಷಗಳ ಅವಧಿಗೆ ಒಬ್ಬ ಮುಖ್ಯಮಂತ್ರಿಯ ಮೂಲಕ ರಾಜ್ಯದಲ್ಲಿ ಸ್ಥಿರ ಆಡಳಿತ ನೀಡಲು ಸಾಧ್ಯವಾಗಿದೆ. ಆದರೆ ಬಿಜೆಪಿ ಜನರಿಂದ ತಿರಸ್ಕರಿಸಲ್ಪಡುತ್ತಿರುವ ಪಕ್ಷವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಬಿಜೆಪಿಯವರಿಗೆ ಸ್ಥಿರ ಇಲ್ಲ. ಇನ್ನು ಅವರು ಸ್ಥಿರ ಸರಕಾರ ನೀಡಲು ಹೇಗೆ ಸಾಧ್ಯ. ಪ್ರತಿಪಕ್ಷದಲ್ಲಿರುವ ಕಾಂಗ್ರೆಸ್‌ನಲ್ಲಿ ಗೊಂದಲ ಇದೆ ಎಂದು ಹೇಳುವುದರಲ್ಲೇನಿದೆ. ಆಡಳಿತ ನಡೆಸುತ್ತಿರುವವರು ಬಿಜೆಪಿಯವರು. ಜನತೆ ಅವರಿಗೆ ಅವಕಾಶ ನೀಡಿದ್ದಾರೆ. ಆದರೆ ಅವರಲ್ಲಿ ಒಗ್ಗಟ್ಟು ಇದ್ದಿದ್ದರೆ ಯಡಿಯೂರಪ್ಪನವರನ್ನು ಯಾಕೆ ಬದಲಿಸುತ್ತಿದ್ದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಜನರು ತಮ್ಮ ಕೆಲಸದ ಬಗ್ಗೆ ಚಿಂತಿತರಾಗಿದ್ದು, ಸರಕಾರ ಜನರ ಬಗ್ಗೆ ಆಲೋಚನೆ ಮಾಡುತ್ತಿತ್ತು. ಆದರೆ ಬಿಜೆಪಿ ಸರಕಾರ ನಡೆಸುತ್ತಿರುವಾಗ ಜನ ಸರಕಾರದ ಬಗ್ಗೆ ಯಾವಾಗ ಸರಕಾರ ಬೀಳುತ್ತದೋ, ಯಾರು ಮುಖ್ಯಮಂತ್ರಿ ಸ್ಥಾನದಿಂದ ಹೋಗುತ್ತಾರೋ ಎಂದು ದಿನಾ ಆಲೋಚಿಸುವಂತಾಗಿದೆ. ಕಾಂಗ್ರೆಸ್‌ನದ್ದು ಒಂದೇ ಗುಂಪು ಎಂದು ಖಾದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X