Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್‌ ʼಡೀಲ್‌ʼ ಕುರಿತು ಸುಪ್ರೀಂ...

ಪೆಗಾಸಸ್‌ ʼಡೀಲ್‌ʼ ಕುರಿತು ಸುಪ್ರೀಂ ಕೋರ್ಟ್‌ ತನಿಖಾ ಸಮಿತಿ ವರದಿಗೆ ನಿರೀಕ್ಷೆ: ಸರ್ಕಾರಿ ಮೂಲ

ವಾರ್ತಾಭಾರತಿವಾರ್ತಾಭಾರತಿ29 Jan 2022 8:47 PM IST
share
ಪೆಗಾಸಸ್‌ ʼಡೀಲ್‌ʼ ಕುರಿತು ಸುಪ್ರೀಂ ಕೋರ್ಟ್‌ ತನಿಖಾ ಸಮಿತಿ ವರದಿಗೆ ನಿರೀಕ್ಷೆ: ಸರ್ಕಾರಿ ಮೂಲ

ಹೊಸದಿಲ್ಲಿ: ಕಳೆದ ವರ್ಷ ಕೇಂದ್ರ ಸರ್ಕಾರದ ವಿರುದ್ಧ ಭಾರೀ ಅನುಮಾನ ಸೃಷ್ಟಿಸಿದ್ದ ಪೆಗಾಸಸ್‌ ಸಾಫ್ಟ್‌ವೇರ್‌ ಹಗರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಭಾರತ ಸರ್ಕಾರ 2017 ರಲ್ಲಿ ಪೆಗಾಸಸ್‌ ಸಾಫ್ಟವೇರ್‌ ಚಂದಾದಾರಿಕೆ ಮಾಡಿಕೊಂಡಿತ್ತು ಎಂಬ ನ್ಯೂಯಾರ್ಕ್‌ ಟೈಮ್ಸ್‌ ವರದಿ ಬೆನ್ನಲ್ಲೇ, ಕೇಂದ್ರ ಸರ್ಕಾರದ ಮೂಲಗಳು, ಸುಪ್ರೀಂ ಕೋರ್ಟ್‌ ತನಿಖಾ ಸಮಿತಿಯು ಪೆಗಾಸಸ್‌ ಕುರಿತು ಕೂಲಂಕುಷವಾಗಿ ಗಮನಿಸುತ್ತಿದೆ, ಸಮಿತಿಯು ವರದಿಗೆ ಸರ್ಕಾರ ಕಾಯುತ್ತಿದೆ ಎಂದು ಹೇಳಿರುವುದಾಗಿ TOI ವರದಿ ಮಾಡಿದೆ.

ಇತ್ತೀಚೆಗಷ್ಟೇ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ಅವರ ನೇತೃತ್ವದ ತನಿಖಾ ಸಮಿತಿಯು, ಯಾರಿಗೆ ತಮ್ಮ ವಿರುದ್ಧ ಪೆಗಾಸಸ್‌ ದಾಳಿಯಾದ ಕುರಿತು ಅನುಮಾನಗಳಿವೆಯೋ ಅವರು ತಮ್ಮ ಫೋನ್ ಗಳನ್ನು ತನಿಖಾ ಸಮಿತಿ ಎದುರು ಒಪ್ಪಿಸಬೇಕೆಂದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿತ್ತು.

ಪೆಗಾಸಸ್‌ ಒಪ್ಪಂದದ ಕುರಿತು ನ್ಯೂಯಾರ್ಕ್‌ ಟೈಮ್ಸ್‌ ವರದಿ ಮುಂದಿಟ್ಟು ಪ್ರತಿಪಕ್ಷಗಳು ಕೇಂದ್ರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದೆ.

ನರೇಂದ್ರ ಮೋದಿ ಸರ್ಕಾರ ಈ ಸೈಬರ್ ಅಸ್ತ್ರವನ್ನು ಏಕೆ ಖರೀದಿಸಿದೆ, ಅದರ ಬಳಕೆಗೆ ಅನುಮತಿ ನೀಡಿದವರು ಯಾರು, ಗುರಿಗಳನ್ನು ಹೇಗೆ ಆಯ್ಕೆ ಮಾಡಲಾಗಿದೆ ಮತ್ತು ಈ ವರದಿಗಳನ್ನು ಯಾರು ಪಡೆದರು? ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ್‌ ಖರ್ಗೆ ಮೊದಲಾದ ಕಾಂಗ್ರೆಸ್‌ ನಾಯಕರೂ ಪೆಗಾಸಸ್‌ ಕುರಿತು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಪೆಗಾಸಸ್‌ ಬಳಸಿ ದೇಶದ ಪ್ರಜೆಗಳನ್ನು ಗೂಢಾಚಾರ ಮಾಡುವುದು ದೇಶದ್ರೋಹದ ಕೆಲಸ ಎಂದು ಮಲ್ಲಿಕಾರ್ಜುನ್‌ ಖರ್ಗೆ ಕಿಡಿ ಕಾರಿದ್ದಾರೆ.

ಪ್ರತಿಪಕ್ಷಗಳ ಟೀಕೆಗೆ ಕೇಂದ್ರವು ಪ್ರತಿಕ್ರಿಯಿಸಿದ್ದು, ಪೆಗಾಸಸ್‌ ಪ್ರಕರಣವು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿದೆ. ನ್ಯಾಯಾಲಯವು ನಿವೃತ್ತ ನ್ಯಾಯಾಧೀಶ ರವೀಂದ್ರನ್ ಅವರ ಮೇಲ್ವಿಚಾರಣೆಯಲ್ಲಿ ಸಮಿತಿಯನ್ನು ರಚಿಸಿದೆ. ಸಮಿತಿಯ ವರದಿ ಕಾಯುತ್ತಿದೆ" ಎಂದು ಸರ್ಕಾರದ ಮೂಲಗಳು ತಿಳಿಸಿದೆ.

ಏತನ್ಮಧ್ಯೆ, ಮುಂಬರುವ ಬಜೆಟ್ ಅಧಿವೇಶನದಲ್ಲಿ ಪೆಗಾಸಸ್ ವಿಷಯವನ್ನು ಪ್ರಸ್ತಾಪಿಸಲು ಕಾಂಗ್ರೆಸ್‌ ಉದ್ದೇಶಿಸಿದ್ದು, ಬಿಜೆಪಿ ಮತ್ತು ಪ್ರಧಾನಿ ಮೋದಿಯ ವಿರುದ್ಧ ಪ್ರಬಲ ಅಸ್ತ್ರವಾಗಿ ಪೆಗಾಸಸ್‌ ಹಗರಣವನ್ನು ಬಳಸುವ ಆಲೋಚನೆಯಲ್ಲಿದೆ.

ಈ ನಡುವೆ, ನ್ಯೂಯಾರ್ಕ್‌ ಟೈಮ್ಸ್ ವರದಿಯನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ವಿ ಕೆ ಸಿಂಗ್, ‌ ನ್ಯೂಯಾರ್ಕ್‌ ಟೈಮ್ಸ್‌ ಗೆ ಸುಪಾರಿ ಕೊಟ್ಟು ಯಾರು ಬೇಕಾದರೂ ವರದಿ ಬರೆಸಬಹುದು ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X