Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೌದಿ ಬಂಡುಗೋರರು ನೇಮಕ ಮಾಡಿಕೊಂಡಿದ್ದ...

ಹೌದಿ ಬಂಡುಗೋರರು ನೇಮಕ ಮಾಡಿಕೊಂಡಿದ್ದ 2000 ಯೆಮನ್ ಮಕ್ಕಳು ಹೋರಾಟದಲ್ಲಿ ಮೃತ್ಯು: ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ30 Jan 2022 11:32 PM IST
share
ಹೌದಿ ಬಂಡುಗೋರರು ನೇಮಕ ಮಾಡಿಕೊಂಡಿದ್ದ 2000 ಯೆಮನ್ ಮಕ್ಕಳು ಹೋರಾಟದಲ್ಲಿ ಮೃತ್ಯು: ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಜ.30: ಯೆಮನ್ ನ ಹೌದಿ ಬಂಡುಗೋರರು ನೇಮಕ ಮಾಡಿಕೊಂಡಿದ್ದ ಸುಮಾರು 2000 ಮಕ್ಕಳು 2020ರ ಜನವರಿಯಿಂದ 2021ರ ಮೇ ಅವಧಿಯಲ್ಲಿ ನಡೆದ ಹೋರಾಟದಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಇರಾನ್ ಬೆಂಬಲಿತ ಹೌದಿಗಳು ಯುವಕರನ್ನು ಹೋರಾಟಕ್ಕೆ ಸೇರಿಸಿಕೊಳ್ಳುವ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ ಎಂದು ವಿಶ್ವಸಂಸ್ಥೆ ತಜ್ಞರ ಸಮಿತಿ ವರದಿ ಹೇಳಿದೆ.

ಸಾಂಸ್ಕೃತಿಕ ತರಬೇತಿ ಕಾರ್ಯಕ್ರಮಕ್ಕೆ ದಾಖಲಾತಿ ಎಂದು ಹೇಳಿ ಮಕ್ಕಳನ್ನು ನೇಮಿಸಿಕೊಂಡು ಬಳಿಕ ಹೋರಾಟಕ್ಕೆ ಬಳಸಲಾಗುತ್ತಿರುವ 10 ಪ್ರಕರಣವನ್ನು ಸಮಿತಿ ದಾಖಲಿಸಿದೆ. ಮಕ್ಕಳು ಹೌದಿ ಜತೆಗಿನ ಯುದ್ಧದಲ್ಲಿ ಪಾಲ್ಗೊಂಡಿದ್ದಾರೆ ಎಂಬ ಕಾರಣಕ್ಕೆ ಅಥವಾ ಶಿಕ್ಷಕರು ಹೌದಿ ಪಠ್ಯಕ್ರಮ ಬೋಧಿಸುತ್ತಿದ್ದಾರೆ ಎಂಬ ಕಾರಣಕ್ಕೆ ಕುಟುಂಬಕ್ಕೆ ಮಾನವೀಯ ನೆರವು ನಿರಾಕರಿಸಲ್ಪಟ್ಟಿರುವ 9 ಪ್ರಕರಣ ದಾಖಲಿಸಲಾಗಿದೆ. ಮಿಲಿಟರಿ ತರಬೇತಿಯಲ್ಲಿ ಭಾಗಿಯಾಗಿದ್ದಾನೆ ಎಂಬ ಕಾರಣಕ್ಕೆ ಒಂದು ಮಗುವಿನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೆ ಸಮುದ್ರದ ಮೂಲಕ ಹಾಗೂ ವಾಯುಮಾರ್ಗದಿಂದ ಸೌದಿ ಅರೆಬಿಯಾದ ಮೇಲಿನ ದಾಳಿಯನ್ನು ಹೌದಿಗಳು ಮುಂದುವರಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೆಲವು ಶಾಲೆ ಹಾಗೂ ಮಸೀದಿಗಳಲ್ಲಿನ ಬೇಸಿಗೆ ತರಬೇತಿ ಶಿಬಿರದ ಚಟುವಟಿಕೆಯನ್ನು ಪರಿಶೀಲಿಸಿದಾಗ, ಅಲ್ಲಿ ಹೌದಿ ಬಂಡುಗೋರರು ತಮ್ಮ ಸಿದ್ಧಾಂತಗಳನ್ನು ಪ್ರಸಾರ ಮಾಡಿ ಮಕ್ಕಳನ್ನು ಯೆಮನ್ ನ  ಅಂತರಾಷ್ಟ್ರೀಯ ಮಾನ್ಯತೆ ಪಡೆದ ಸರಕಾರದ ವಿರುದ್ಧದ ಹೋರಾಟಕ್ಕೆ ಉತ್ತೇಜಿಸುತ್ತಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಗೆ ‘ಅಮೆರಿಕಕ್ಕೆ ಸಾವು, ಇಸ್ರೇಲ್‌ಗೆ ಸಾವು, ಯೆಹೂದಿಗಳನ್ನು ಶಪಿಸಿ, ಇಸ್ಲಾಮ್ ಗೆ ಗೆಲುವು’  ಎಂಬ ಹೌದಿಯ ಘೋಷಣೆಯನ್ನು ಕೂಗಲು ಸೂಚಿಸಲಾಗುತ್ತದೆ. ಒಂದು ಶಿಬಿರದಲ್ಲಿ 7 ವರ್ಷದ ಮಕ್ಕಳಿಗೆ ಬಂದೂಕು ಸ್ವಚ್ಛಗೊಳಿಸಲು, ರಾಕೆಟ್ ದಾಳಿಯಿಂದ ತಪ್ಪಿಸಿಕೊಳ್ಳಲು ಕಲಿಸಲಾಗುತ್ತಿತ್ತು ಎಂದು 4 ಸದಸ್ಯರ ತಜ್ಞರ ಸಮಿತಿ ಹೇಳಿದೆ.

ಹೌದಿಗಳು ನೇಮಕಗೊಳಿಸಿ 2020ರಲ್ಲಿ ಯುದ್ಧರಂಗದಲ್ಲಿ ಮೃತಪಟ್ಟ 1,406 ಮಕ್ಕಳು ಹಾಗೂ 2021ರ ಜನವರಿಯಿಂದ ಮೇ ಅವಧಿಯಲ್ಲಿ ಮೃತಪಟ್ಟ 562 ಮಕ್ಕಳ ಮಾಹಿತಿ ಲಭಿಸಿದೆ. ಇವರೆಲ್ಲಾ 10ರಿಂದ 17 ವರ್ಷದವರಾಗಿದ್ದರು. ಇವರಲ್ಲಿ ಹೆಚ್ಚಿನ ಮಕ್ಕಳು ಅರ್ಮಾನ್, ಧಮರ್, ಹಜ್ಜಾಹ್, ಹಡೀಬಾ, ಇಬಬ್, ಸಾದಾ ಮತ್ತು ಸನಾ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಮೃತಪಟ್ಟವರು ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X