ನಮ್ಮ ನಾಡ ಒಕ್ಕೂಟದಿಂದ ವೃತ್ತಿ ಮಾರ್ಗದರ್ಶನ ಕಾರ್ಯಗಾರ

ಬೈಂದೂರು, ಜ.31: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಘಟಕದ ಆಶ್ರಯದಲ್ಲಿ ಪ್ರೌಢ ಶಾಲೆ, ಪಿಯು ಮತ್ತು ಡಿಗ್ರಿ ಕಾಲೇಜು ವಿಧ್ಯಾರ್ಥಿಗಳಿಗೆ ಹಾಗೂ ನಿರುದ್ಯೊಗಿ ಯುವಕರಿಗೆ ‘ಪ್ರೇರಣೆ, ವೃತ್ತಿ ಮಾರ್ಗದರ್ಶನ ಹಾಗೂ ಸರಕಾರಿ ಉದ್ಯೋಗಗಳ ಜಾಗೃತಿ’ ಕುರಿತ ಕಾರ್ಯಗಾರವನ್ನು ಬೈಂದೂರಿನ ಅಂಬಿಕಾ ಇಂಟರ್ ನ್ಯಾಷನಲ್ ಹೋಟೆಲ್ನಲ್ಲಿ ರವಿವಾರ ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಸರ್ಫರಾಝ್ ಜೆ.ಹಾಷಿಮ್, ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ನ ನಿರ್ದೇಶಕ ಡಾ.ಸಯ್ಯದ್ ಅಮೀನ್ ಅಹ್ಮದ್, ಪ್ರೇರಕ ಭಾಷಣಕಾರ ಅಬ್ದುಲ್ ರಝಾಕ್ ಮತ್ತು ಅಹ್ಮದ್ ನೌಝಲ್ ಭಾಗವಹಿಸಿದ್ದರು.
ಕಾರ್ಯಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾಧ್ಯಕ್ಷ ಮುಶ್ತಾಕ್ ಅಹ್ಮದ್ ಬೆಳ್ವೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆಯಿಶಾ ಸಫಾ ನಾಗೂರು, ಡಾ.ಅರ್ಷಿಯಾ ನಾಝ್ ಪರಿ ಶಿರೂರು, ಡಾ.ಸಹಾನ ಶಿರೂರು, ಲೆಕ್ಕಪರಿಶೋಧಕ ಮುಹಮ್ಮದ್ ಆದಿಲ್ ಶಿರೂರು, ಪಿ.ಎಚ್.ಡಿ ವಿದ್ಯಾರ್ಥಿನಿ ಸಮ್ರೀನ್ ಶೇಖ್ ನಾಗೂರು ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಭಟ್ಕಳದ ತಂಝೀಮ್ನ ಪ್ರಧಾನ ಕಾರ್ಯದರ್ಶಿ ಮೌಲಾನ ಅಬ್ದುಲ್ ರಕೀಬ್ ನದ್ವಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌಲಾನ ಝಮೀರ್ ಅಹ್ಮದ್ ರಶಾದಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಹಬೀಬ್ ಶಿರೂರು ಮುಖ್ಯ ಅತಿಥಿಗಳಾಗಿದ್ದರು.
ಜಿಲ್ಲಾ ಉಪಾಧ್ಯಕ್ಷ ಮನ್ಸೂರ್ ಇಬ್ರಾಹಿಂ, ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಅಜ್ಮಲ್ ಶಿರೂರು, ಜಿಲ್ಲಾ ಸದಸ್ಯ ಝೈನುಲ್ ಅಬಿದಿನ್ ಹಳಗೇರಿ, ಪರಿ ಹುಸೈನ್ ಶಿರೂರು, ಭಟ್ಕಳ ತಾಲೂಕು ಘಟಕದ ಅಧ್ಯಕ್ಷ ಏ.ಎಂ.ಮುಲ್ಲಾ, ತಾಲೂಕು ಸದಸ್ಯ ಕಾವಾ ಸಯೀದ್ ಉಪಸ್ಥಿತರಿದ್ದರು.
ಮುಹಮ್ಮದ್ ಸಹೀಮ್ ಹಳಗೇರಿ ಕುರಾನ್ ಪಠಿಸಿದರು. ತಾಲೂಕು ಉಪಾಧ್ಯಕ್ಷ ಮಮ್ದು ಇಬ್ರಾಹಿಮ್ ಶಿರೂರು ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಅಬ್ದುಲ್ ಸಮೀ ಹಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಕಾರ್ಯದರ್ಶಿ ಅಲ್ತಾಫ್ ಮುಕ್ರಿ ವಂದಿಸಿದರು. ಮುಹಮ್ಮದ್ ತಾಹಾ ಶಿರೂರು ಕಾರ್ಯಕ್ರಮ ನಿರೂಪಿಸಿದರು. 200ಕ್ಕಿಂತಲೂ ಅಧಿಕ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.