Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ, ಹಿಂದುಳಿದ ಮಠಗಳಿಗೆ ಭೂಮಿ, ಅನುದಾನ...

ದಲಿತ, ಹಿಂದುಳಿದ ಮಠಗಳಿಗೆ ಭೂಮಿ, ಅನುದಾನ ಕೋರಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮಠಾಧೀಶರ ಮನವಿ

ವಾರ್ತಾಭಾರತಿವಾರ್ತಾಭಾರತಿ31 Jan 2022 6:26 PM IST
share
ದಲಿತ, ಹಿಂದುಳಿದ ಮಠಗಳಿಗೆ ಭೂಮಿ, ಅನುದಾನ ಕೋರಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮಠಾಧೀಶರ ಮನವಿ

ಬೆಂಗಳೂರು, ಜ. 31: ‘ರಾಜ್ಯದಲ್ಲಿನ ದಲಿತ ಮತ್ತು ಹಿಂದುಳಿದ ಮಠಗಳಿಗೆ ಬೆಂಗಳೂರಿನಲ್ಲಿ 5 ಎಕರೆ ಜಮೀನು ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ 5 ಕೋಟಿ ರೂ.ಅನುದಾನ ನೀಡಬೇಕು' ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸುವಂತೆ ಒತ್ತಾಯಿಸಿ ಹಿಂದುಳಿದ-ದಲಿತ ಮಠಾಧೀಶರ ಒಕ್ಕೂಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.

ಸೋಮವಾರ ಇಲ್ಲಿನ ರೇಸ್‍ಕೋರ್ಸ್ ರಸ್ತೆಯಲ್ಲಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಪುರುಷೋತ್ತಮಾನಂದಪುರಿ ಸ್ವಾಮಿ, ಸಂಚಾಲಕ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿ, ನಿರಂಜನಾನಂದ ಪುರಿ ಸ್ವಾಮಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿ ಸೇರಿದಂತೆ ವಿವಿಧ ಮಠಗಳ ಸುಮಾರು 20ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಭರವಸೆ: ‘ದಲಿತ-ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಮಠಾಧೀಶರ ನಿಯೋಗದ ಜೊತೆ ಯಾವುದೇ ಚರ್ಚೆ ನಡೆಸಿಲ್ಲ. ಆದರೆ, 2022ರ ಆಯವ್ಯಯದಲ್ಲಿ ದಲಿತ ಮತ್ತು ಹಿಂದುಳಿದವರ್ಗಗಳ ಶ್ರೇಯೋಭಿವೃದ್ದಿಗೆ ಅಗತ್ಯ ಯೋಜನೆ ರೂಪಿಸುತ್ತೇವೆ. ಅಲ್ಲದೆ, ಬಜೆಟ್‍ನಲ್ಲಿ ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ವಾಮೀಜಿಗಳಿಗೆ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಇದೇ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕಾಗಿನೆಲೆಯ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ 20ಕ್ಕೂ ಹೆಚ್ಚು ದಲಿತ-ಹಿಂದುಳಿದ ಮಠಗಳ ಮಠಾಧೀಶರು ತಮ್ಮನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ದಲಿತ, ಹಿಂದುಳಿದ ವರ್ಗಗಳ ಏಳಿಗೆಗಾಗಿ 2022ರ ಬಜೆಟ್‍ನಲ್ಲಿ ಕಾರ್ಯಕ್ರಮ ರೂಪಿಸಬೇಕು. ಸಮುದಾಯಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕೊಡಬೇಕು ಎಂದು ಚರ್ಚೆ ನಡೆಸಿದ್ದಾರೆಂದು ಮಾಹಿತಿ ನೀಡಿದರು.

ರಾಜ್ಯದಲ್ಲಿರುವ ಹಲವು ಮಠಗಳು ಬಡ ಮಕ್ಕಳಿಗೆ ಅನ್ನದಾಸೋಹ, ಶಿಕ್ಷಣ ದಾಸೋಹ ಮಾಡುತ್ತಿದ್ದು, ಶೈಕ್ಷಣಿಕ ಸಂಸ್ಥೆಗಳನ್ನು ಮುನ್ನಡೆಸುತ್ತಿವೆ. ಹೀಗಾಗಿ ಮಠಗಳಿಗೆ ಸಮುದಾಯ ಭವನ, ಹಾಸ್ಟೆಲ್ ಕಟ್ಟಡ ನಿರ್ಮಿಸಲು ಅಗತ್ಯವಿರುವ ಭೂಮಿ ಹಾಗೂ ಅನುದಾನ ನೀಡಲು ಮನವಿ ಮಾಡಿದ್ದು, ಆದ್ಯತೆ ಮೇಲೆ ಪರಿಗಣಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ದಲಿತ-ಹಿಂದುಳಿದ ಸಮುದಾಯದ ಯುವಕ-ಯುವತಿಯರಿಗೆ ವಿದ್ಯೆ, ಉದ್ಯೋಗ ನೀಡಬೇಕು. ಜೊತೆಗೆ ರಾಜಕೀಯವಾಗಿ ಆ ವರ್ಗಗಳಿಗೆ ಪ್ರಾತಿನಿಧ್ಯ ಕೊಡುವಂತೆ ಮನವಿ ಮಾಡಿದ್ದು, ಬೆಂಗಳೂರಲ್ಲಿ ಕಾರ್ಯ ಚಟುವಟಿಕೆ ಮಾಡಲು ಒಂದು ಸ್ಥಳ ಬೇಕೆಂಬ ಬೇಡಿಕೆ ಇತ್ತು. ಹಿಂದಿನ ಸರಕಾರ ಸ್ಥಳ ಮಂಜೂರು ಮಾಡಿದ್ದರೂ ಕಾನೂನಿನ ತೊಡಕಿನಿಂದ ಆ ಸ್ಥಳ ಸಿಕ್ಕಿಲ್ಲ. ಜಮೀನಿನ ಬಗ್ಗೆ ಕಡತ ತರಿಸಿ ಇದನ್ನು ಇತ್ಯರ್ಥ ಮಾಡಿ, ಜಮೀನು ಕೊಡಿಸಲು ಕೆಲಸ ಮಾಡುತ್ತೇನೆಂದು ತಿಳಿಸಿದ್ದೇನೆ ಎಂದರು.

ದಲಿತ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯೋಜನೆ ರೂಪಿಸುತ್ತೇವೆ. ಬಜೆಟ್‍ನಲ್ಲಿ ನಾನು ಏನು ಮಾಡುತ್ತೇನೆ ಎಂದು ಹೇಳಲ್ಲ. ಆದರೆ, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಗೆ ಯೋಜನೆ ರೂಪಿಸುತ್ತೇವೆ. ಆದರೆ, ಮೀಸಲಾತಿ ಬಗ್ಗೆ ಇಂದು ಯಾವುದೇ ಚರ್ಚೆ ಆಗಿಲ್ಲ ಎಂದು ಬಸವರಾಜ ಬೊಮ್ಮಾಯಿ ಇದೇ ವೇಳೆ ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X