ಅಭಿವೃದ್ಧಿರ ಅತ್ಮನಿರ್ಭರ ಬಜೆಟ್: ಉಡುಪಿ ಜಿಲ್ಲಾ ಬಿಜೆಪಿ
ಬಜೆಟ್ಗೆ ಪ್ರತಿಕ್ರಿಯೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ ದೂರದರ್ಶಿತ್ವದ ಚಿಂತನೆಯೊಂದಿಗೆ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್ ಆಗಿದೆ. ಉತ್ಪಾದಕತೆ, ಹಣಕಾಸು ಹೂಡಿಕೆ, ಹವಾಮಾನ ಕ್ರಮ ಮತ್ತು ಪಿಎಂ ಗತಿಶಕ್ತಿ ಯೋಜನೆ ಈ ನಾಲ್ಕು ಪ್ರಮುಖ ಆಯಾಮಗಳಲ್ಲಿ ರೂಪಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲಿದೆ. ರಸ್ತೆಗಳ ನಿರ್ಮಾಣಕ್ಕೆ ಒತ್ತು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ, ಕೈಗಾರಿಕೆ, ಸಾವಯವ ಕೃಷಿ, ಕೌಶಲ್ಯಾಭಿವೃದ್ಧಿ, ಮನೆಮನೆಗೆ ನಳ್ಳಿ ನೀರು, ದೇಶದ 5 ನದಿಗಳ ಜೋಡಣೆ, ಹೆಚ್ಚುವರಿ ರೈಲು, ರೈಲ್ವೇ ನಿಲ್ದಾಣದ ಉನ್ನತೀಕರಣ, ಡಿಜಿಟಲ್ ಆರ್ಥಿಕತೆ, ಕನಿಷ್ಠ ಬೆಂಬಲ ಬೆಲೆ, ಡಿಜಿಟಲ್ ಯೂನಿವರ್ಸಿಟಿ, ಒನ್ ನೇಷನ್ ಒನ್ ರಿಜಿಸ್ಟ್ರೇಷನ್, ವಿವಿಧ ಕ್ಷೇತ್ರಗಳ ಡಿಜಿಟಲೀಕರಣ, ಪಿಎಂ ಆವಾಜ್ ಯೋಜನೆ ಯಡಿ ಮನೆ ನಿರ್ಮಾಣ, ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ, ಇ-ಪಾಸ್ ಪೋರ್ಟ್, ಅಂಗನವಾಡಿಗಳ ಉನ್ನತೀಕರಣ, ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿವರೆಗೆ ಬಡ್ಡಿ ರಹಿತ ಸಾಲ, ಅಮೃತ ಸ್ಕೀಂ ಅಡಿಯಲ್ಲಿ ಗ್ರಾಪಂಗಳ ಅಭಿವೃದ್ಧಿ ಮುಂತಾದ ಸಕಾರಾತ್ಮಕ ಅಂಶಗಳು ಈ ಬಾರಿಯ ಕೇಂದ್ರ ಬಜೆಟ್ನ ವಿಶೇಷತೆಗಳು.
14 ಕ್ಷೇತ್ರಗಳಲ್ಲಿ ಉತ್ಪಾದಕತೆಗೆ ಪೂರಕ ಹೂಡಿಕೆ ಅವಕಾಶವು ಹೊಸ ಉದ್ಯೋಗ ಸೃಷ್ಟಿಯ ಜೊತೆಗೆ 30 ಲಕ್ಷ ಕೋಟಿ ರೂ. ಹೆಚ್ಚುವರಿ ಹೊಸ ಉತ್ಪಾದಕತೆಗೆ ಒತ್ತು ನೀಡಲಿದೆ. ಆರೋಗ್ಯ, ಶಿಕ್ಷಣ ಮತ್ತು ಕೃಷಿ ವಲಯಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಿರುವ ಜೊತೆಗೆ ಜಿಡಿಪಿಯ ಶೇ.35ನ್ನು ಮೂಲಸೌಕರ್ಯ ಕ್ಷೇತ್ರಕ್ಕೆ ಮೀಸಲಿರಿಸಿರುವುದು ಅಶಾದಾಯ ಬೆಳವಣಿಗೆ.
ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ