Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಫೆ.3ರಿಂದ ಆರ್‌ಟಿಓ ಕಚೇರಿಯಲ್ಲಿ...

ಉಡುಪಿ: ಫೆ.3ರಿಂದ ಆರ್‌ಟಿಓ ಕಚೇರಿಯಲ್ಲಿ ಸಂಪರ್ಕರಹಿತ ಸೇವೆಗಳು ಜಾರಿ

ವಾರ್ತಾಭಾರತಿವಾರ್ತಾಭಾರತಿ2 Feb 2022 8:10 PM IST
share
ಉಡುಪಿ: ಫೆ.3ರಿಂದ ಆರ್‌ಟಿಓ ಕಚೇರಿಯಲ್ಲಿ ಸಂಪರ್ಕರಹಿತ ಸೇವೆಗಳು ಜಾರಿ

ಉಡುಪಿ, ಫೆ.2: ಇನ್ನು ಮುಂದೆ ಸಾರ್ವಜನಿಕರು ಕಲಿಕಾ ಚಾಲನಾ ಅನುಜ್ಞಾ ಪತ್ರ(ಲರ್ನಿಂಗ್ ಲೈಸನ್ಸ್), ಲೈಸನ್ಸ್ ನವೀಕರಣಕ್ಕಾಗಿ ಆರ್‌ಟಿಓ ಕಚೇರಿಗೆ ಅಲೆ ದಾಡ ಬೇಕಾಗಿಲ್ಲ. ಎಲ್ಲವನ್ನು ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಿಯೇ ಪಡೆಯ ಬಹುದಾಗಿದೆ. ಅದರಂತೆ ಫೆ.3ರಿಂದ ಉಡುಪಿ ಆರ್‌ಟಿಓ ಕಚೇರಿಯಲ್ಲಿ ಸಂಪರ್ಕ ರಹಿತ ಮತ್ತು ಜನಸ್ನೇಹಿ ಸೇವೆಗಳು ಜಾರಿಯಾಗಲಿವೆ.

ಈ ಬಗ್ಗೆ ಮಾತನಾಡಿದ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ್, ಸಾರಿಗೆ ಇಲಾಖೆಯ ಸಾರಥಿ ಕೈ ಸಂಬಪಂಧಿತ ಐದು ಸೇವೆಗಳನ್ನು ಸಂಪರ್ಕರಹಿಕತವಾಗಿ www.parivahan.gov.in ರಲ್ಲಿ ಅನುಷ್ಠಾನ ಗೊಳಿಸಲಾಗಿದೆ. ಆದುದರಿಂದ ಸಾರ್ವಜನಿಕರು ನಾಳೆಯಿಂದ ಆರ್‌ಟಿಓ ಕಚೇರಿಗೆ ಭೇಟಿ ನೀಡದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಸಂಬಂಧ ದಾಖಲೆ ಗಳನ್ನು ಅಪ್‌ಲೋಡ್ ಮಾಡಿ ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಿ ಸೇವೆ ಗಳನ್ನು ಪಡೆಯಬಹುದು ಎಂದರು.

ಕಲಿಕಾ ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ ನವೀಕರಣ, ನಕಲು ಚಾಲನಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ ಮತ್ತು ಚಾಲನಾ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆಯ ಸೇವೆ ಗಳನ್ನು ಆನ್‌ಲೈನ್‌ನಲ್ಲಿ ಪಡೆಯಬಹುದೆಂದು ಅವರು ಮಾಹಿತಿ ನೀಡಿದರು.

ಹೊಸ ಪದ್ಧತಿಯಲ್ಲಿನ ಲೋಪ: ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದಿರುವ ಈ ಆನ್‌ಲೈನ್ ಸೇವೆಯಲ್ಲಿ ಹಲವು ಲೋಪಗಳಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಕಿವುಡರು, ಕುರುಡರು, ಜೈಲಿನಲ್ಲಿರುವವರು, ಹೊರದೇಶ, ರಾಜ್ಯ, ಜಿಲ್ಲೆಯಲ್ಲಿ ಇರುವ ಯಾರು ಬೇಕಾದರೂ ಇನ್ನು ತಮ್ಮ ಎಲ್‌ಎಲ್‌ಆರ್, ಲೈಸನ್ಸ್ ನವೀಕರಣ ಮಾಡಬಹುದಾಗಿದೆ.

ಈ ಹಿಂದೆ ಕಿವುಡರು, ಕುರುಡರು, ವಿಕಲಚೇತನರು ಕಚೇರಿಗೆ ಆಗಮಿಸಿ ಅರ್ಜಿ ಸಲ್ಲಿಸುತ್ತಿರುವುದರಿಂದ ಅವರ ಲೋಪಗಳನ್ನು ಅಧಿಕಾರಿಗಳು ಗುರುತಿ ಸಲು ಸಾಧ್ಯವಾಗುತ್ತಿತ್ತು. ಅವರಿಗೆ ಸಾಮಾನ್ಯ ಲೈಸೆನ್ಸ್ ಬದಲು ವಿಶೇಷ ಲೈಸನ್ಸ್ ಗಳನ್ನು ಮಂಜೂರು ಮಾಡಲಾಗುತ್ತಿತ್ತು. ವಿಶೇಷ ಲೈಸನ್ಸ್ ಪಡೆದವರು ತಮಗೆ ಸೂಚಿಸಿದ ವಾಹನಗಳನ್ನು ಮಾತ್ರ ಚಲಾಯಿಸಲು ಅವಕಾಶ ಇರುತ್ತದೆ. ಆದರೆ ಈ ಹೊಸ ಪದ್ಧತಿಯಲ್ಲಿ ಕಿವುಡತನ ಹಾಗೂ ಕುರುಡತನದ ಯಾವುದೇ ಅಂಗ ವೈಕಲ್ಯವನ್ನು ಗುರುತಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಾರೆ ಅಧಿಕಾರಿಗಳು.

ಈ ಬಗ್ಗೆ ಪ್ರತಿಕ್ರಿಯಿಸಿದ ಆರ್‌ಟಿಓ, ಈ ಸೇವೆಯಿಂದ ಯಾರು ಎಲ್ಲಿ ಕುಳಿತು ಆನ್‌ಲೈನ್ ಮೂಲಕ ಅರ್ಜಿ ಹಾಕಿದರೂ ನಮಗೆ ಗೊತ್ತಾಗುವುದಿಲ್ಲ. ಅಂಗ ವಿಕಲರು ಆನ್‌ಲೈನ್ ಮೂಲಕ ಲೈಸನ್ಸ್ ಪಡೆಯುವ ಸಾಧ್ಯತೆ ಇರುತ್ತದೆ. ಇದಕ್ಕೆ ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ. ಇದು ಸ್ವಲ್ಪಮಟ್ಟಿನ ತೊಡಕು ಆಗುವ ಸಾಧ್ಯತೆ ಇದೆ. ಆದುರದಿಂದ ಈ ಸೇವೆಯನ್ನು ಇನ್ನಷ್ಟು ಪರಿಷ್ಕರಿಸುವ ಅಗತ್ಯ ಇದೆ ಎಂದು ತಿಳಿಸಿದರು.

ಕುಂದಾಪುರ ಆರ್‌ಟಿಓ ಕಚೇರಿಗೆ ಪ್ರಸ್ತಾಪ

ಕುಂದಾಪುರದಲ್ಲಿ ಪ್ರತ್ಯೇಕ ಆರ್‌ಟಿಓ ಕಚೇರಿ ಸ್ಥಾಪಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ರಾಜ್ಯ ಸರಕಾರದಿಂದ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಆರ್‌ಟಿಓ ಜೆ.ಪಿ. ಗಂಗಾಧರ್ ತಿಳಿಸಿದ್ದಾರೆ.

ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಕಳೆದ ಡಿಸೆಂಬರ್‌ವರೆಗೆ ಒಟ್ಟು 1,29,900 ವಾಹನಗಳು ನೋಂದಾವಣೆಯಾಗಿದ್ದು, ವಾರ್ಷಿಕ ಸರಾಸರಿ 5413 ವಾಹನಗಳು ನೋಂದಾವಣೆಯಾಗುತ್ತಿದೆ. ಆದುದರಿಂದ ಪ್ರತ್ಯೇಕ ಆರ್‌ಟಿಓ ಕಚೇರಿ ಸ್ಥಾಪನೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.

811 ಇಲೆಕ್ಟ್ರೀಕ್ ವಾಹನ ನೋಂದಾಣಿ

ಜನವರಿ ತಿಂಗಳವರೆಗೆ ಉಡುಪಿಯಲ್ಲಿ ಒಟ್ಟು 777 ಇಲೆಕ್ಟ್ರೀಕ್ ದ್ವಿಚಕ್ರ ವಾಹನಗಳು, 33 ಇಲೆಕ್ಟ್ರಿಕ್ ಕಾರುಗಳು ಹಾಗೂ ಒಂದು ತ್ರಿಚಕ್ರ ವಾಹನ ನೊಂದಾವಣೆಯಾಗಿದೆ ಎಂದು ಆರ್‌ಟಿಓ ಜೆ.ಪಿ. ಗಂಗಾಧರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಕುಂದಾಪುರ, ಪ್ರತಿ ಗುರುವಾರ ಕಾರ್ಕಳ, ತಿಂಗಳ ಮೂರನೇ ಶನಿವಾರ ಪಡುಬಿದ್ರಿ, ಮೊದಲ ಶನಿವಾರ ಹೆಬ್ರಿಯಲ್ಲಿ ಆರ್‌ಟಿಓ ಶಿಬಿರಗಳನ್ನು ಮಾಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X