Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಗಾನಿಸ್ತಾನದಲ್ಲಿ ಅಭದ್ರತೆಯ ಮತ್ತು...

ಅಫ್ಗಾನಿಸ್ತಾನದಲ್ಲಿ ಅಭದ್ರತೆಯ ಮತ್ತು ಅನಿಶ್ಚಿತತೆಯ ಸ್ಥಿತಿಯಿದೆ: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ4 Feb 2022 11:03 PM IST
share
ಅಫ್ಗಾನಿಸ್ತಾನದಲ್ಲಿ ಅಭದ್ರತೆಯ ಮತ್ತು ಅನಿಶ್ಚಿತತೆಯ ಸ್ಥಿತಿಯಿದೆ: ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ, ಫೆ.4: ಸಂಘರ್ಷದಿಂದ ಜರ್ಝರಿತಗೊಂಡಿರುವ ಅಫ್ಗಾನಿಸ್ತಾನದಲ್ಲಿ ಬಹು ರಾಜಕೀಯ, ಸಾಮಾಜಿಕ-ಆರ್ಥಿಕ ಮತ್ತು ಮಾನವೀಯ ಆಘಾತಗಳು ಎಲ್ಲೆಡೆ ಪ್ರತಿಧ್ವನಿಸುತ್ತಿದ್ದು ಈಗ ಆ ದೇಶದಲ್ಲಿ ಅತ್ಯಂತ ಅಭದ್ರತೆಯ ಮತ್ತು ಅನಿಶ್ಚಿತತೆಯ ಪರಿಸ್ಥಿತಿ ನೆಲೆಸಿದೆ ಎಂದು ವಿಶ್ವಸಂಸ್ಥೆಯ ಪ್ರಧಾ ಕಾರ್ಯದರ್ಶಿ ವರದಿ ಮಾಡಿದ್ದಾರೆ. ‌

ತಾಲಿಬಾನ್ ಈ ಹಿಂದೆ ಅಧಿಕಾರದಲ್ಲಿದ್ದಾಗ ಅದನ್ನು ಅಂತರಾಷ್ಟ್ರೀಯ ಸಮುದಾಯ ಪ್ರತ್ಯೇಕವಾಗಿರಿಸಿತ್ತು. ಈಗ ಈ ರೀತಿ ಮಾಡದೆ ಇರುವುದು ಆ ದೇಶದ ಸ್ಥಿರತೆಯ ನಿಟ್ಟಿನಲ್ಲಿ ಅತ್ಯುತ್ತಮ ಉಪಕ್ರಮವಾಗಿದೆ ಎಂದು ‘ಅಫ್ಗಾನಿಸ್ತಾನದ ಪರಿಸ್ಥಿತಿ ಮತ್ತು ಅಂತರಾಷ್ಟ್ರೀಯ ಶಾಂತಿ ಮತ್ತು ಸ್ಥಿರತೆಯ ಮೇಲೆ ಅದರ ಪರಿಣಾಮ’ ಎಂಬ ಶೀರ್ಷಿಕೆಯ ವರದಿಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ತದರ್ಶಿ ಅಂಟೆನಿಯೊ ಗುಟೆರಸ್ ಉಲ್ಲೇಖಿಸಿದ್ದಾರೆ.
   
ಉಸ್ತುವಾರಿ ಸರಕಾರದ ರೀತಿಯಲ್ಲಿ ತನ್ನನ್ನು ಪ್ರಸ್ತುತಪಡಿಸಲು ತಾಲಿಬಾನ್ ಪ್ರಯತ್ನಿಸುತ್ತಿದೆ. ಆದರೆ ದೇಶದ ಜನಾಂಗೀಯ, ರಾಜಕೀಯ, ಭೌಗೋಳಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ, ಮಹಿಳೆಯರನ್ನೂ ಒಳಗೊಂಡಿರುವ ಸರಕಾರ ಇನ್ನೂ ರಚನೆಯಾಗಿಲ್ಲ. ಆರ್ಥಿಕ ಸಂಪನ್ಮೂಲ ಮತ್ತು ಸಾಮರ್ಥ್ಯದ ಕೊರತೆ, ಅಂತರಾಷ್ಟ್ರೀಯ ನಿಯಮದ ಆಡಳಿತಕ್ಕೆ ವಿರುದ್ಧವಾದ ಸಿದ್ಧಾಂತಗಳು ಇದಕ್ಕೆ ಅಡ್ಡಿಯಾಗಿವೆ. ತಾಲಿಬಾನ್ ಆಂತರಿಕ ಹೊಂದಾಣಿಕೆಯ ಸಮಸ್ಯೆ ಎದುರಿಸುತ್ತಿದೆ. ಆಡಳಿತ ನಡೆಸುವ ತನ್ನ ಸಾಮರ್ಥ್ಯದ ಬಗ್ಗೆ ದೇಶದ ಜನರ ವಿಶ್ವಾಸ ಗಳಿಸುವಲ್ಲಿ ಅವರು ವಿಫಲವಾಗಿರುವುದರಿಂದ ಹಲವಾರು ಮಂದಿ ದೇಶ ಬಿಟ್ಟು ತೆರಳಲು ಬಯಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಫ್ಗಾನ್ನ ವೈವಿಧ್ಯಮಯ ಸಮಾಜದ ಆಶಯ ಮತ್ತು ಆಸಕ್ತಿಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರತಿಫಲಿಸುವ, ಎಲ್ಲರನ್ನೂ ಒಳಗೊಂಡ ಸರಕಾರ ರಚನೆಯ ಪ್ರಕ್ರಿಯೆಗೆ ನೆರವಾಗುವ ರೀತಿಯ ಎಲ್ಲಾ ಪ್ರಯತ್ನಗಳನ್ನು ನಡೆಸುವುದು ಈಗಿನ ಅಗತ್ಯವಾಗಿದೆ ಎಂದವರು ವರದಿಯಲ್ಲಿ ಹೇಳಿದ್ದಾರೆ.
     
ಅಫ್ಗಾನಿಸ್ತಾನವು ವ್ಯಾಪಕ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ಆಡಳಿತ ವ್ಯವಸ್ಥೆಯಲ್ಲಿನ ಕೊರತೆ ಮತ್ತು ನೆರವು ಪೂರೈಕೆಯ ಸ್ಥಗಿತ, ನಿರ್ಬಂಧದಿಂದಾಗಿ ಸಂಕೀರ್ಣ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆ ಕುಸಿಯುತ್ತಿದೆ. ತಾಲಿಬಾನ್ನನ್ನು ಪ್ರತ್ಯೇಕವಾಗಿರಿಸದೆ, ಸಂಬಂಧ ಪಟ್ಟ ಪಕ್ಷಗಳು ಹಾಗೂ ಅಂತರಾಷ್ಟ್ರೀಯ ಸಮುದಾಯದ ಮಧ್ಯೆ ರಚನಾತ್ಮಕ ಮಾತುಕತೆಗೆ ಪ್ರೋತ್ಸಾಹ ನೀಡುವುದು ಈ ದೇಶದ ಸ್ಥಿರತೆಯನ್ನು ಉತ್ತೇಜಿಸುವ ಅತ್ಯುತ್ತಮ ಮಾರ್ಗವಾಗಿದೆ . ಈ ನಿಟ್ಟಿನಲ್ಲಿ ಕೈಗೊಂಡಿರುವ ಕೆಲವು ಧನಾತ್ಮಕ ಉಪಕ್ರಮಗಳನ್ನು ಗಮನಿಸಲಾಗಿದೆ. ಅಫ್ಗಾನ್ನ ಕುರಿತು ನಡೆಯುವ ಮಾತುಕತೆಯು ಅಂತರಾಷ್ಟ್ರೀಯ ಸಮುದಾಯದೊಂದಿಗೆ ಅಫ್ಗಾನ್ನ ಭವಿಷ್ಯದ ಸಂಬಂಧ, ದೇಶದ ಜನತೆಯ ಸಮೃದ್ಧಿ ಮತ್ತು ಭದ್ರತೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಮೂಲಭೂತ ಮಾನವ ಹಕ್ಕುಗಳು ಹಾಗೂ ಸ್ವಾತಂತ್ರ್ಯದ ಸಹಿತ ವ್ಯಾಪಕ ವಿಷಯಗಳನ್ನು ಒಳಗೊಂಡಿರಬೇಕು ಎಂದು ಗುಟೆರಸ್ ಅಭಿಪ್ರಾಯ ಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X