Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 25 `ಎ' ದರ್ಜೆ ದೇವಸ್ಥಾನಗಳ ಸಮಗ್ರ...

25 `ಎ' ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ `ದೈವ ಸಂಕಲ್ಪ' ಯೋಜನೆ: ಸಚಿವೆ ಶಶಿಕಲಾ ಜೊಲ್ಲೆ

ವಾರ್ತಾಭಾರತಿವಾರ್ತಾಭಾರತಿ4 Feb 2022 11:09 PM IST
share
25 `ಎ ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ `ದೈವ ಸಂಕಲ್ಪ ಯೋಜನೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು, ಫೆ. 4: `ಪ್ರಧಾನಿ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನ ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ `ದೈವ ಸಂಕಲ್ಪ'ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು' ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಪ್ರಧಾನಿ ಕಾಶಿಯನ್ನು ಅಭಿವೃದ್ಧಿಗೊಳಿಸಿದಂತೆ ರಾಜ್ಯದಲ್ಲಿ ಅತಿಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೊಳಿಸುವ ಯೋಜನೆ ಇದಾಗಲಿದೆ' ಎಂದು ಹೇಳಿದರು.

`ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಬೇಕು. ದೇವಸ್ಥಾನಕ್ಕೆ ಅವರು ನೀಡುವ ಕಾಣಿಕೆಗಳು ಪಾರದರ್ಶಕತೆಯಿಂದ ಸದುಪಯೋಗ ಆಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿಗೊಳಿಸುವುದು ನನ್ನ ಮಹತ್ವದ ಕನಸಾಗಿದ್ದು, ಈ ಯೋಜನೆಯ ಮೊದಲ ಹಂತದ ಅಂದಾಜು ವೆಚ್ಚ 1,140 ಕೋಟಿ ರೂ.ಗಳಾಗಿವೆ' ಎಂದು ಅವರು ವಿವರ ನೀಡಿದರು. 

1 ಸಾವಿರ `ಸಿ' ದರ್ಜೆಯ ದೇವಳಗಳ ಸಮಗ್ರ ಅಭಿವೃದ್ದಿ: `ಕಡಿಮೆ ಆದಾಯವಿರುವ `ಸಿ' ದರ್ಜೆಯ ದೇವಸ್ಥಾನಗಳ ಅಭಿವೃದ್ದಿ ಸರಿಯಾಗಿ ಆಗುತ್ತಿಲ್ಲ ಎನ್ನುವ ದೂರುಗಳು ಬಂದಿವೆ. ರಾಜ್ಯದಲ್ಲಿ 34,217 `ಸಿ' ದರ್ಜೆಯ ದೇವಸ್ಥಾನಗಳು ಇವೆ. ಪ್ರತಿವರ್ಷ ಇವುಗಳ ಅಭಿವೃದ್ಧಿಗೆ ಸರಕಾರದಿಂದ ಅನುದಾನ ನೀಡಲಾಗುತ್ತಿದೆ. ಆದರೂ, ಸಮಗ್ರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಪ್ರತಿವರ್ಷ 1ಸಾವಿರ `ಸಿ' ದರ್ಜೆಯ ದೇವಸ್ಥಾನಗಳನ್ನು ಸಮಗ್ರ ಅಭಿವೃದ್ಧಿಗೊಳಿಸಲು ಕ್ರಮಕೈಗೊಳ್ಳಲಿದ್ದೇವೆ. ಪ್ರತಿವರ್ಷ ಜಿಲ್ಲೆಯಲ್ಲಿ ಬೇರೆ-ಬೇರೇ ದೇವಸ್ಥಾನಗಳನ್ನು ಅಭಿವೃದ್ಧಿಗೆ ಆಯ್ಕೆ ಮಾಡಿಕೊಳ್ಳುವ ಮೂಲಕ ಎಲ್ಲ `ಸಿ' ದರ್ಜೆಯ ದೇವಸ್ಥಾನಗಳನ್ನು ಹಂತ ಹಂತವಾಗಿ ಅಭಿವೃದ್ಧಿಗೊಳಿಸುವುದು ನಮ್ಮ ಗುರಿ' ಎಂದು ಹೇಳಿದರು. 

ಅಭಿವೃದ್ಧಿಗೆ 168 ಕೋಟಿ ರೂ.ಅನುದಾನ: `ದೇವಾಲಯಗಳು ನಮ್ಮೊಂದಿಗೆ ಭಾವನಾತ್ಮಕವಾದ ಸಂಬಂಧ ಹೊಂದಿವೆ. ದೇವಾಲಯಗಳ ಅಭಿವೃದ್ಧಿಗೆ ವಿಶೇಷ ಕಾಳಜಿಯನ್ನ ಸರಕಾರ ವಹಿಸುತ್ತಿದೆ. ಈ ಬಾರಿಯ ಆಯವ್ಯಯದಲ್ಲಿ 119ಕೋಟಿ ರೂ.ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೇವಾಲಯಗಳ ಅಭಿವೃದ್ಧಿಗೆ 168 ಕೋಟಿ ರೂ.ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ರೂ.ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‍ನಲ್ಲಿ 60 ರಿಂದ 70 ಕೋಟಿ ರೂ.ಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಿದೆ ಎಂದರು.

ಶ್ರೀಶೈಲದಲ್ಲಿ ಕರ್ನಾಟಕ ಛತ್ರ ನಿರ್ಮಾಣ: `ಕರ್ನಾಟಕ ರಾಜ್ಯದಿಂದ ಬಹುಸಂಖ್ಯೆಯಲ್ಲಿ ಭಕ್ತರು ತೆರಳುವ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮುಜರಾಯಿ ಇಲಾಖೆ ಒಡೆತನದಲ್ಲಿರುವ ಭೂಮಿಯಲ್ಲಿ ಕರ್ನಾಟಕ ಛತ್ರ ನಿರ್ಮಿಸಲು 85 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಮುಖ್ಯಮಂತ್ರಿ ನೀಡಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಈ ಕಟ್ಟಡ ನಿರ್ಮಾಣ ಕಾರ್ಯ ನಡೆಯಲಿದೆ. 45 ಕೋಟಿ ರೂ.ವೆಚ್ಚದಲ್ಲಿ ಮೊದಲ ಹಂತದ ಯೋಜನೆ ಕೈಗೆತ್ತಿಕೊಳ್ಳುವಂತೆ ಸಿಎಂ ತಿಳಿಸಿದ್ದಾರೆ' ಎಂದು ಅವರು ಹೇಳಿದರು.

ಕಾಶಿ ಯಾತ್ರೆಗೆ ಪ್ರೋತ್ಸಾಹ  ಧನ: `ದೇಶದ ವಿವಿಧ ಭಾಗಗಳಲ್ಲಿರುವ 12 ಜ್ಯೋತಿರ್ಲಿಂಗ ಹಾಗೂ ಅಷ್ಟವಿನಾಯಕ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವುದು ಬಹಳ ಪುಣ್ಯವಾದ ಕೆಲಸ ಎನ್ನುವುದು ಹಿಂದೂಗಳ ನಂಬಿಕೆ. ಈ ನಿಟ್ಟಿನಲ್ಲಿ ಕೈಲಾಸ ಮಾನಸ ಸರೋವರ ಮತ್ತು ಚಾರ್‍ಧಾಮ್ ಯಾತ್ರೆಗೆ ನೀಡುವ ಪ್ರೋತ್ಸಾಹ  ಧನ ನೀಡುವ ಯೋಜನೆಯಂತೆ ಇವುಗಳಿಗೂ ಪ್ರೋತ್ಸಾಹ /ಸಹಾಯ ಧನ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗುವುದು. 12 ಜ್ಯೋತಿರ್ಲಿಂಗ ಯಾತ್ರೆ ಮತ್ತು ಅಷ್ಟವಿನಾಯಕ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧವಾಗಿದೆ. ಇನ್ನು ಕಾಶಿ ಯಾತ್ರೆಗೂ ಪ್ರತ್ಯೇಕವಾಗಿ ವಾರ್ಷಿಕವಾಗಿ ಎರಡು ಬಾರಿ ರೈಲಿನಲ್ಲಿ ಪ್ರವಾಸ ಏರ್ಪಡಿಸುವ ಅಥವಾ ಪ್ರೋತ್ಸಾಹ ಧನ ನೀಡುವ ಪ್ರಸ್ತಾವನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ' ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. 

ತಸ್ತಿಕ್ ಹಣ ಹೆಚ್ಚಳಕ್ಕೆ ಪ್ರಸ್ತಾವನೆ: `ರಾಜ್ಯದಲ್ಲಿರುವ `ಸಿ' ದರ್ಜೆಯ ದೇವಸ್ಥಾನಗಳಿಗೆ ವಾರ್ಷಿಕವಾಗಿ 48ಸಾವಿರ ರೂ.ಗಳ ತಸ್ತಿಕ್ ಹಣವನ್ನು ನೀಡಲಾಗುತ್ತಿದೆ. ಹೆಚ್ಚಿನ ಆದಾಯವಿಲ್ಲದ ದೇವಸ್ಥಾನಗಳ ಅರ್ಚಕರು ಹಾಗೂ ಮೋಕ್ತೇಸರರು ಹಲವಾರು ಬಾರಿ ಈ ಹಣವನ್ನು ಹೆಚ್ಚು ಮಾಡುವಂತೆ ಮನವಿ ಮಾಡಿದ್ದಾರೆ. ಇಂದಿನ ದಿನಮಾನದಲ್ಲಿ ಈ ಹಣ ಸಾಕಾಗುವುದಿಲ್ಲ ಎನ್ನುವುದು ಗಮನಕ್ಕೆ ಬಂದಿದ್ದು, ತಸ್ತಿಕ್ ಹಣವನ್ನು ಹೆಚ್ಚಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. 

ಅಯೋಧ್ಯೆಯಲ್ಲಿ ಕರ್ನಾಟಕದ ಛತ್ರ: `ಅಯೋಧ್ಯೆಯಲ್ಲಿ ಕರ್ನಾಟಕ ರಾಜ್ಯದ ಛತ್ರವನ್ನು ನಿರ್ಮಿಸಬೇಕು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಪತ್ರವ್ಯವಹಾರ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಆಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಪ್ರಮುಖ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ದೇವಸ್ಥಾನ-ವಕ್ಫ್ ಜಮೀನು ಸರ್ವೆ

`ರಾಜ್ಯದ ದೇವಸ್ಥಾನಗಳ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೇ ಕಾರ್ಯಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಡ್ರೋನ್ ಸರ್ವೇ ಕಾರ್ಯದಲ್ಲಿ ದೇವಾಲಯಗಳ ಹಾಗೂ ವಕ್ಫ್ ಜಮೀನಿನ ಸಮೀಕ್ಷೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ'

-ಶಶಿಕಲಾ ಜೊಲ್ಲೆ ಮುಜರಾಯಿ ಸಚಿವೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X