Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ತಾಲಿಬಾನ್ ಆಗಲು ಬಿಡಲ್ಲ ಎನ್ನುವವರಿಗೆ...

"ತಾಲಿಬಾನ್ ಆಗಲು ಬಿಡಲ್ಲ ಎನ್ನುವವರಿಗೆ ಅಫ್ಘಾನಿಸ್ತಾನಕ್ಕೆ 200 ಕೋ.ರೂ. ನೀಡುವ ಕೇಂದ್ರದ ಪ್ರಸ್ತಾಪದ ಮಾಹಿತಿ ಇಲ್ಲವೇ?

ಸಚಿವ ಸುನೀಲ್ ಕುಮಾರ್ ಹೇಳಿಕೆಗೆ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ5 Feb 2022 1:50 PM IST
share
ತಾಲಿಬಾನ್ ಆಗಲು ಬಿಡಲ್ಲ ಎನ್ನುವವರಿಗೆ ಅಫ್ಘಾನಿಸ್ತಾನಕ್ಕೆ 200 ಕೋ.ರೂ. ನೀಡುವ ಕೇಂದ್ರದ ಪ್ರಸ್ತಾಪದ ಮಾಹಿತಿ ಇಲ್ಲವೇ?

ಬೆಂಗಳೂರು, ಫೆ.5: ಕರ್ನಾಟಕವನ್ನು ತಾಲಿಬಾನ್ ಆಗಲು ಬಿಡುವುದಿಲ್ಲ ಎಂದು ತಮಾಷೆಯಾಗಿ ಮಾತನಾಡುತ್ತಿರುವ ಸಚಿವ ಸುನೀಲ್ ಕುಮಾರ್ ಅವರಿಗೆ ಕೇಂದ್ರದಲ್ಲಿರುವ ತಮ್ಮದೇ ಪಕ್ಷದ ಸರಕಾರವು ತಾಲಿಬಾನಿ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ರೂಪಾಯಿಗಳನ್ನು ನೀಡುವ ಪ್ರಸ್ತಾಪ ಮಾಡಿರುವ ಬಗ್ಗೆ ಮಾಹಿತಿ ಇಲ್ಲವೇ ಎಂದು ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಡಾ.ಎಚ್.ಸಿ.ಮಹದೇವಪ್ಪ, ನಾನು ಯಾವಾಗಲೂ ಹೇಳುವಂತೆ ಬಿಜೆಪಿಗರು ತಾವು ಏನನ್ನು ಹೇಳುತ್ತಾರೋ ಅದಕ್ಕೆ ವಿರುದ್ಧವಾದ ಕೆಲಸವನ್ನೇ ಮಾಡುತ್ತಾರೆ. ಉದಾಹರಣೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂದು ಹೇಳಿ ವಿಪರೀತ ನಿರುದ್ಯೋಗ ಸೃಷ್ಟಿಸಿದರು. ಅಚ್ಚೇದಿನ್ ಎಂದು ಭಾರತವನ್ನು ಹಸಿವಿನ ರಾಷ್ಟ್ರವನ್ನಾಗಿಸಿದರು. ಡಾಲರ್ ಬೆಲೆ ಇಳಿಸುತ್ತೇವೆ ಎಂದು, ಡಾಲರ್ ಎದುರು ರೂಪಾಯಿ ಮೌಲ್ಯವು ಕುಸಿಯುವಂತೆ ಮಾಡಿದರು. ಬೇಟಿ ಬಚಾವ್ ಎಂದು ಹೇಳಿ, ಮಹಿಳೆಯರ ರಕ್ಷಣೆ ಮಾಡಲು ವಿಫಲವಾದರು. ಇದೀಗ ತಾಲಿಬಾನ್, ಪಾಕಿಸ್ತಾನ್ ಎನ್ನುತ್ತಾ ತಾಲಿಬಾನಿಗಳ ಆಡಳಿತವಿರುವ ಅಫ್ಘಾನಿಸ್ತಾನಕ್ಕೆ ಕೋಟಿಗಟ್ಟಲೇ ಸಹಾಯ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಅಚ್ಚರಿ ಎಂದರೆ ಯಾವೊಬ್ಬ ಹಿಂದುತ್ವದ ಪ್ರತಿಪಾದಕನೂ ಸಹ ಈ ಬಗ್ಗೆ ಪ್ರಶ್ನಿಸಿಲ್ಲ ಎಂದರೆ ಅವರ ಉದ್ದೇಶ ಏನು ಮತ್ತು ಅವರ ಬೆಂಬಲ ಯಾರ ಪರವಾಗಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬಹುದು. ಬಿಜೆಪಿಗರು ಏನು ಹೇಳುತ್ತಾರೋ ನಾವು ಅದಕ್ಕೆ ವಿರುದ್ಧವಾಗಿ ಯೋಚಿಸಿದರೆ ಅದೇ ಅವರ ನಿಜ ಸ್ವರೂಪವಾಗಿರುತ್ತದೆ ಎಂಬ ಸಂಗತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕು ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಕರ್ನಾಟಕವನ್ನು ತಾಲಿಬಾನ್ ಆಗಲು ಬಿಡುವುದಿಲ್ಲ ಎಂದು ತಮಾಷೆಯಾಗಿ ಮಾತನಾಡುತ್ತಿರುವ ಮಾನ್ಯ ಸಚಿವರಾದ @karkalasunil ಅವರಿಗೆ ತಮ್ಮದೇ ಪಕ್ಷ ಆಡಳಿತದಲ್ಲಿರುವ ಕೇಂದ್ರ @BJP4India ಸರ್ಕಾರವು ತಾಲಿಬಾನಿ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ರೂಪಾಯಿಗಳನ್ನು ನೀಡುವ ಪ್ರಸ್ತಾಪ ಮಾಡಿರುವ ಬಗ್ಗೆ ಮಾಹಿತಿ ಇಲ್ಲವೆಂದು ಕಾಣುತ್ತದೆ.

1/3

— Dr H.C.Mahadevappa (@CMahadevappa) February 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X