Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಜಾಬ್ ವಿವಾದ ಟೂಲ್‌ಕಿಟ್‌ನ ಭಾಗ: ಸಚಿವ...

ಹಿಜಾಬ್ ವಿವಾದ ಟೂಲ್‌ಕಿಟ್‌ನ ಭಾಗ: ಸಚಿವ ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ5 Feb 2022 6:16 PM IST
share
ಹಿಜಾಬ್ ವಿವಾದ ಟೂಲ್‌ಕಿಟ್‌ನ ಭಾಗ: ಸಚಿವ ಸುನಿಲ್ ಕುಮಾರ್

ಮಂಗಳೂರು, ಫೆ. 5: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ವಿವಾದದ ಹಿಂದೆ ಹಿಡನ್ ಅಜೆಂಡಾ ಅಡಗಿದೆ. ವಾದದ ಹಿಂದಿರುವುದು ಹಿಜಾಬ್ ಅಲ್ಲ. ವಿವಾದ, ಪಿತೂರಿ ಸೃಷ್ಟಿ ಮಾಡಬೇಕೆಂಬ ಉದ್ದೇಶ. ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಬೇಕೆಂಬ ಟೂಲ್ ಕಿಟ್‌ನ ಭಾಗ ಇದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಇಂದು ಸಂವಾದ ಕಾರ್ಯಕ್ರಮದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಈ ಪ್ರತಿಕ್ರಿಯೆ ನೀಡಿದರು.

ಶಾಲೆಗೆ ಶುಲ್ಕ ಕಟ್ಟಲು ತಯಾರಿಲ್ಲದ ಅದೇ ಸಮುದಾಯದವರಿಗೆ ಈಗ ಕೋರ್ಟಿಗೆ ಹೋಗಲು ದುಡ್ಡಿದೆಯೇ? ಶಾಲೆಗೆ ಕಟ್ಟಡ ಕಟ್ಟಲು ಶುಲ್ಕ ಕೊಡಿ ಎಂದರೆ ಅದು ಕೊಡಲು ಆಗುವುದಿಲ್ಲ. ಆದರೆ ಈ ವಿಷಯಕ್ಕೆ ಕೋರ್ಟಿಗೆ ಹೋಗುತ್ತಾರೆ. ಇದಕ್ಕೆ 50 ರಿಂದ 60 ಸಾವಿರ ಜನ ಟ್ವೀಟ್ ಮಾಡುತ್ತಾರೆಂದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಸ್ಪಷ್ಟ ಎಂದವರು ಹೇಳಿದರು.

ಈ ವಿಷಯಕ್ಕೆ ಸಂಬಂಧಿಸಿ ಈಗಾಗಲೇ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಕಾನೂನಿನ ಉಪ ಸಮಿತಿ ಮಾಡಿ ಸಮಿತಿ ನೀಡಿದ ವರದಿ ಮೇಲೆ ಸುತ್ತೋಲೆ ಮಾಡುವುದಾಗಿ ತಿಳಿಸಿದ್ದು, ಸುತ್ತೋಲೆಗೆ ಸುಮಾರು ಒಂದು ವಾರ ಕಾಲಾವಕಾಶ ಬೇಕಾಗಬಹುದು. ಈಗ ಸ್ಥಳೀಯ ಆಡಳಿತ ಮಂಡಳಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಇಲಾಖೆ ಸೂಚನೆ ನೀಡಿದ್ದು, ಅದನ್ನು ಅವರು ಮಾಡುತ್ತಿದ್ದಾರೆ. ಇದೀಗ ದಿಢೀರ್ ಎಂದು ಈ ಪಿತೂರಿ ಯಾಕೆ ಆರಂಭ ಆಗಿದ್ದು. ಕೆಲ ದಿನಗಳ ಹಿಂದಿನವರೆಗೂ ಹಿಜಾಬ್ ಅಥವಾ ಬುರ್ಖಾ ಧರಿಸಿ ಕಾಲೇಜಿಗೆ ಬರುತ್ತಿದ್ದು, ಬಳಿಕ ತೆಗೆದಿಟ್ಟು ತರಗತಿಗೆ ಹೋಗುತ್ತಿದ್ದರು. ಅಲ್ಲಿಯವರೆಗೂ ಯಾವುದೇ ಸಮಸ್ಯೆ ಇರಲಿಲ್ಲ. ಈಗಲೂ ಹಾಕಿಕೊಂಡು ಬಂದು ತರಗತಿ ಪ್ರವೇಶಿಸುವಾಗ ತೆಗೆದಿಟ್ಟು ಹೋಗಲು ಯಾರದ್ದೂ ವಿರೋಧ ಇಲ್ಲ. ಇದನ್ನು ಉದ್ದೇಶಪೂರ್ವಕವಾಗಿ ಹಠಕ್ಕೆ ಬಿದ್ದಂತೆ ಹಾಕಿಯೇ ಹಾಕುತ್ತೇನೆ ಎಂದರೆ ಆಗುತ್ತದೆಯಾ ? ಯೂನಿಫಾರಂ ಕಾನೂನು ಆಗಿ ಯಾಕೆ ಆಗಬೇಕು. ಅದು ಸಂಪ್ರದಾಯ. ಒಂದೇ ತರ ಕಾಣಬೇಕು. ಶಿಸ್ತು ಇರಬೇಕು ಎಂಬ ಕಾರಣಕ್ಕೆ ಮಾಡಿದ್ದು, ಅದಕ್ಕೆ ಕಾನೂನು ಚೌಕಟ್ಟು ಕೊಡಬೇಕೆಂಬುದರಲ್ಲಿ ಅರ್ಥವೇ ಇಲ್ಲ. ಅದು ಕೊಡಬೇಕೆಂದರೆ ಸರಕಾರ ಅದಕ್ಕೂ ಸಿದ್ಧವಿದೆ. ಅದು ಬಿಟ್ಟು ನಾನು ಹೇಗೆ ಬೇಕಾದರೂ ಬರುತ್ತೇನೆ ಎಂಬುದಕ್ಕೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ.

ಹಿಂದೆ ತರಗತಿಯಲ್ಲಿ ಹಿಜಾಬ್ ಹಾಕಿಕೊಂಡು ಕುಳಿತಿರುವ ಉದಾಹರಣೆ ಇದೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಆ ರೀತಿ ಕೂತಿರುವುದೂ ತಪ್ಪೇ. ಹಿಂದೆ ಸುಮ್ಮನೆ ವಿವಾದ ಯಾಕೆ ಎಂದು ಆಡಳಿತ ಮಂಡಳಿ ಸುಮ್ಮನೆ ಇದ್ದಿರಬಹುದು. ಈಗ ಇದ್ದಕ್ಕಿದ್ದಂತೆ ವಿವಾದ ಮಾಡುವುದೆಂದರೆ ಏನರ್ಥ. ಸರಕಾರ ತನ್ನ ಜವಾಬ್ದಾರಿ ನಿರ್ವಹಿಸಲಿದೆ. ಈ ಬಗ್ಗೆ ಕಾನೂನು ರೂಪಿಸಲಿದೆ. ವ್ಯಕ್ತಿ ಸ್ವಾತಂತ್ರದ ಬಗ್ಗೆ ಮಾತನಾಡುವವರು ಮಸೀದಿಯೊಳಗೂ ಮಹಿಳೆಯರಿಗೆ ಪ್ರವೇಶ ನೀಡಲಿ. ತ್ರಿಬಲ್ ತಲಾಕ್ ತೆಗೆದು ಮುಸ್ಲಿಂ ಮಹಿಳೆಯರಿಗೆ ಭದ್ರತೆ ನೀಡಿದ್ದು ಬಿಜೆಪಿ ಸರಕಾರ ಎಂದವರು ಹೇಳಿದರು.

ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುವ ಬಗ್ಗೆ ಪೋಷಕರು, ವಿವಾದ ಮಾಡುವವರು ಅರ್ಥ ಮಾಡಿಕೊಳ್ಳಬೇಕು. ಹಿಜಾಬ್‌ಗೆ ಪ್ರತಿಕ್ರಿಯೆಯಾಗಿ ಕೇಸರಿ ಶಾಲು ಪ್ರಕರಣ ಆಗಿದೆ. ದಿಢೀರ್ ಆಗಿ ಆರಂಭ ಆಗಿದ್ದಲ್ಲ. ಪ್ರಾಂಶುಪಾಲರ ನಡೆಯನ್ನು ನಾನು ಸಮರ್ಥಿಸುತ್ತೇನೆ. ಶಾಲೆಗಳಲ್ಲಿ ಶಿಸ್ತು ಅಗತ್ಯ. ಈವರೆಗೆ ಅಂತಹ ಶಿಸ್ತು ಇಲ್ಲವೆಂದಾದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಶಾಲೆಗಳಲ್ಲೂ ಪ್ರಾಂಶುಪಾಲರು ಈ ಕೆಲಸ ಮಾಡಬೇಕು.

ಶಾಲೆಗಳಲ್ಲಿ ನಡೆಯುವ ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಯಾಕೆ ಎಂಬ ಪ್ರಶ್ನೆಗೆ, ಇದನ್ನು ವಿವಾದ ಮಾಡಬೇಕಾದ ಅಗತ್ಯವೇ ಇಲ್ಲ. ನಾವು ಶಾಲೆಗೆ ಹೋಗುತ್ತಿದ್ದಾಗ ವಸ್ತ್ರ ಸಂಹಿತೆ ಜಾರಿಯಲ್ಲಿತ್ತು. ಈಗ ಯಾಕೆ ಸಮಸ್ಯೆ. ಈ ರಾಷ್ಟ್ರವನ್ನು ಹಿಂದೂರಾಷ್ಟ್ರ ಎಂದು ಕರೆಯುತ್ತಾರೆ. ಇದನ್ನು ತಾಲಿಬಾನ್, ಅಪ್ಘಾನಿಸ್ತಾನ ಮಾಡಲು ಸಾಧ್ಯವಿಲ್ಲ. ಬೇರೆ ದೇಶಗಳಲ್ಲಿ ಬುರ್ಖಾವನ್ನೇ ನಿಷೇಧ ಮಾಡಿದ್ದಾರೆ. ಅಲ್ಲಿ ಮಾತನಾಡಲು ಹೋಗದವರು ಇಲ್ಲಿ ಮಾತನಾಡುತ್ತಾರೆ. ಈ ದೇಶದ ಮಣ್ಣಿಗೆ ಗೌರವ ಕೊಡಬೇಕು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X