Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಕ್ಕು ಪತ್ರ ಪಡೆದವರಿಗೆ ನೋಂದಣಿಗೆ ಕ್ರಮ:...

ಹಕ್ಕು ಪತ್ರ ಪಡೆದವರಿಗೆ ನೋಂದಣಿಗೆ ಕ್ರಮ: ಕಂದಾಯ ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ5 Feb 2022 8:45 PM IST
share
ಹಕ್ಕು ಪತ್ರ ಪಡೆದವರಿಗೆ ನೋಂದಣಿಗೆ ಕ್ರಮ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, ಫೆ. 5: `ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಕಲಂ `94-ಸಿ' ಮತ್ತು `94 ಸಿಸಿ' ಅಡಿಯಲ್ಲಿ ಅರ್ಜಿ ಹಾಕಿರುವ ಬಡವರ ಹಕ್ಕುಪತ್ರಗಳನ್ನು ನೋಂದಾಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದ್ಯತೆಯ ಮೇಲೆ ಇದನ್ನು ಮಾಡಲಿದ್ದು, ಎಲ್ಲ ದಾಖಲೆಗಳು ಅವರಿಗೆ ಸಿಗುವಂತಾಗಬೇಕು' ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾತನಾಡಿದ ಅವರು, `ಬಡವರಿಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಸರಕಾರದಿಂದ ನಿವೇಶನ ನೀಡಲಾಗಿತ್ತು. ಲಕ್ಷಾಂತರ ಜನರಿಗೆ ಹಕ್ಕುಪತ್ರ ನೀಡಲಾಗಿತ್ತು. ಜನರಿಗೆ ನಿವೇಶನವನ್ನು ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಲು, ಕಾವೇರಿ ತಂತ್ರಾಂಶದಲ್ಲಿ `ಹಕ್ಕುಪತ್ರ' ಎಂದು ಆಯ್ಕೆ ಮಾಡಲು ಅವಕಾಶ ಇರಲಿಲ್ಲ. ಹಾಗಾಗಿ ನೋಂದಣಿ ಆಗದೇ ಇರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಆದುದರಿಂದ ಮೇಲ್ಕಂಡ ಕ್ರಮಕ್ಕೆ ಸೂಚಿಸಿದ್ದೇನೆ' ಎಂದರು. 

`ಸರಕಾರಿ ಜಮೀನಿನಲ್ಲಿ ಹಲವಾರು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರುಗಳ ಜಮೀನನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕೆಲವು ರೈತರು ನಮೂನೆ-50, ನಮೂನೆ-57ರಲ್ಲಿ ಅರ್ಜಿ ಸಲ್ಲಿಸದೇ ಇರುವವರಿಗೆ ಮತ್ತೊಂದು ಅವಕಾಶವನ್ನು ನೀಡಬೇಕೆಂದು ಮನವಿ ಬಂದಿದೆ. ಹಾಗಾಗಿ ಇನ್ನೂ ಒಂದು ವರ್ಷದ ಅವಧಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲು ಉದ್ದೇಶಿಸಲಾಗಿದೆ' ಎಂದು ಅಶೋಕ್ ಹೇಳಿದರು.

`ಈ ಹಿಂದೆ ಇದ್ದ ನಿಯಮ ಬದಲಾವಣೆ ಮಾಡಿ, ಕಠಿಣ ನಿಯಮ ಜಾರಿಗೆ ತರಲಾಗುತ್ತದೆ. ಸರಕಾರಿ ಜಮೀನು ಅರ್ಹರಿಗೆ ಸಿಗಬೇಕು. ಯಾವ ರೈತರು ಸಾಗುವಳಿ ಮಾಡುತ್ತಿದ್ದಾರೆ, ಆ ಜಮೀನು ಮುಟ್ಟುವಂತಿಲ್ಲ. ಸಾಗುವಳಿ ಮಾಡುತ್ತಿರುವ ರೈತರಿಗೇ ಅದನ್ನು ಕೊಡುವುದು. ಮಠ-ಮಾನ್ಯಗಳು, ಸಂಸ್ಥೆ, ಟ್ರಸ್ಟ್ ಇವುಗಳಿಗೆ ನೀಡುವಾಗ ಪರಾಮರ್ಶೆ ನಡೆಸಬೇಕು. ಟ್ರಸ್ಟ್ ನೋಂದಣಿಯಾಗಿ ಎಷ್ಟು ವರ್ಷ ಆಗಿರಬೇಕು, ಅದರ ಕೆಲಸ ಕಾರ್ಯಗಳೇನು, ಸಾಮಾಜಿಕ ಬದ್ಧತೆಯೊಂದಿಗೆ ಕೆಲಸ ಮಾಡುತ್ತಿದೆಯೆ ಈ ಎಲ್ಲ ವಿಚಾರ ತಿಳಿದು ಭೂಮಿ ನೀಡಬೇಕು. ಅನರ್ಹರಿಗೆ ಸರಕಾರಿ ಜಾಗ ಸಿಗದಂತೆ ನೀತಿ ನಿಯಮ ರೂಪಿಸುವುದು, ಬೆಲೆ ನಿಗದಿ ಮಾಡುವುದು ನಮ್ಮ ಸಮಿತಿಯ ಕೆಲಸ ಎಂದು ಅಶೋಕ್ ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X