Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಜಾಬ್ ವಿಚಾರ: ಮುಖ್ಯಮಂತ್ರಿ...

ಹಿಜಾಬ್ ವಿಚಾರ: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಪಿಯುಸಿಎಲ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Feb 2022 4:51 PM IST
share
ಹಿಜಾಬ್ ವಿಚಾರ: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಪಿಯುಸಿಎಲ್ ಆಗ್ರಹ

ಬೆಂಗಳೂರು, ಫೆ. 6: `ಕುಂದಾಪುರದ ಪಿಯು ಕಾಲೇಜು ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ `ಹಿಜಾಬ್' ಧರಿಸಿ ಕಾಲೇಜಿಗೆ ಹಾಜರಾಗುವ ಮುಸ್ಲಿಂ ವಿದ್ಯಾರ್ಥಿನಿಯರ ಹಕ್ಕಿನ ಮೇಲೆ ದಾಳಿ ನಡೆಸುತ್ತಾ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದ್ದರೂ, ತುರ್ತಾಗಿ ಮಧ್ಯಪ್ರವೇಶಿಸಿ, ಈ ವಿವಾದವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಯಾವ ಕ್ರಮವನ್ನೂ ಕೈಗೊಳ್ಳದಿರುವ ಶಿಕ್ಷಣ ಇಲಾಖೆ ಮತ್ತು ಈ ಬಗ್ಗೆ ರಾಜ್ಯ ಸರಕಾರವು ವಹಿಸಿರುವ ಜಾಣ ಮೌನ ವಹಿಸಿರುವುದನ್ನು `ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್'(ಪಿಯುಸಿಎಲ್) ಖಂಡಿಸಿದೆ.

ಈ ಸಂಬಂಧ ಪಿಯುಸಿಎಲ್‍ನ ಅಧ್ಯಕ್ಷ, ವಕೀಲ ಅರವಿಂದ್ ನರ್ರೈನ್ ಹಾಗೂ ಪ್ರಧಾನ ಕಾರ್ಯದರ್ಶಿ ರಾಬಿನ್ ಕ್ರಿಸ್ಟೋಫರ್ ಜೆ. ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದು, `ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕೂಡಲೇ ಮಧ್ಯಪ್ರವೇಶಿಸಿ, ಈ ಕಾಲೇಜುಗಳು ನೀಡಿರುವ ಅಸಾಂವಿಧಾನಿಕ ಮತ್ತು ಅನುಚಿತ ಆದೇಶಗಳನ್ನು ವಜಾಗೊಳಿಸಿ, ಈ ಹಿಂದಿನಂತೆ, ಎಲ್ಲ ವಿದ್ಯಾರ್ಥಿನಿಯರು ತಮ್ಮ ಕಾಲೇಜುಗಳಿಗೆ ಮತ್ತು ತರಗತಿಗಳಿಗೆ ಹಿಂದಿರುಗುವ ಅವಕಾಶವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

`ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜುಗಳ ಪ್ರಾಂಶುಪಾಲರು ಏಕಾಏಕಿ, ತಮ್ಮ ಸ್ವೆಚ್ಚಾನುಸಾರ ಈ ರೀತಿಯ ಅಸಾಂವಿಧಾನಿಕ ನಡೆಯನ್ನು ಏಕೆ ತೆಗೆದುಕೊಂಡರು ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ಈ ತನಿಖೆ ಕೊನೆಗೊಳ್ಳುವ ವರೆಗೂ ಈ ಕಾಲೇಜಿನ ಪ್ರಾಂಶುಪಾಲರನ್ನು ಅಮಾನತಿನಲ್ಲಿರಿಸಬೇಕು. ಸರಕಾರ ಜಾತ್ಯತೀತ ಮತ್ತು ತಾರತಮ್ಯ ರಹಿತವಾದ, ಎಲ್ಲ ವಿದ್ಯಾರ್ಥಿಗಳು ತಮ್ಮ ಧರ್ಮ ಮತ್ತು ವ್ಯಕ್ತಿತ್ವವನ್ನು ಸಂಪೂಣವಾಗಿ ವ್ಯಕ್ತಪಡಿಸಲಿಕ್ಕೆ ನಿರ್ಭೀತ ಮತ್ತು ಕಲಿಕೆಗೆ ಅನುಕೂಲಕರ ವಾತಾವರಣವನ್ನು ಶಾಲಾ-ಕಾಲೇಜುಗಳಲ್ಲಿ ಕಲ್ಪಿಸಬೇಕು ಮತ್ತು ಮುಂದೆಂದೂ ಈ ರೀತ್ಯ ಘಟನೆಗಳು ಸಂಭವಿಸದಂತೆ ಎಚ್ಚರವಹಿಸಬೇಕು' ಎಂದು ಒತ್ತಾಯಿಸಿದ್ದಾರೆ.

`ಮಾನವ ಹಕ್ಕುಗಳ ಆಯೋಗ ಮತ್ತು ಅಲ್ಪಸಂಖ್ಯಾತರ ಆಯೋಗವು ಸ್ವಯಂ ಪ್ರೇರಿತವಾಗಿ ಈ ಪ್ರಕರಣಗಳನ್ನು ಗಮನಿಸಿ, ಕಾಲೇಜುಗಳ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರವು ಈ ಪ್ರಕರಣಗಳಲ್ಲಿ ಮಧ್ಯಪ್ರವೇಶಿಸಿ, ಎಲ್ಲ ವಿದ್ಯಾರ್ಥಿಗಳ ಸಾಂವಿಧಾನಿಕ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕಾನೂನು ಸೇವೆಗಳನ್ನು ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ತಾವು ಸಂವಿಧಾನವನ್ನು ಉಳಿಸುವ ಮತ್ತು ರಕ್ಷಿಸುವ, ಜಾತ್ಯತೀತವಾಗಿ ಆಡಳಿತ ನಡೆಸುವ, ಮತ್ತು ಯಾವುದೇ ನಾಗರಿಕರನ್ನು ಧರ್ಮಾಧಾರಿತವಾಗಿ ಭೇದಮಾಡುವುದಿಲ್ಲ ಎಂದು ತೆಗೆದುಕೊಂಡಿರುವ ಪ್ರಮಾಣ ವಚನವನ್ನೂ ಅಲಕ್ಷಿಸಿ ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ಲಕ್ಷಿಸಿದ್ದಾರೆ. ಸರಕಾರವು ಸಾಂವಿಧಾನಿಕ ಮೌಲ್ಯಗಳನ್ನು ಗೌರವಿಸಿ ಅದಕ್ಕನುಗುಣವಾಗಿ ನಡೆದುಕೊಳ್ಳಬೇಕಿದ್ದು, ಯಾವುದೇ ಕಾರಣಕ್ಕೂ ದುರ್ಬಲ ಅಲ್ಪಸಂಖ್ಯಾತ ಸಮುದಾಯದ ಹಿನ್ನಲೆಯಿಂದ ಬರುವ ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ತಾರತಮ್ಯವೆಸಗಬಾರದು ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣದ ಹಕ್ಕನ್ನು ಪ್ರತಿಪಾದಿಸುತ್ತಿರುವ ಮತ್ತು ಶಿಕ್ಷಕರೊಬ್ಬರು ತಮ್ಮದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಗೇಟ್‍ಗಳನ್ನು ಮುಚ್ಚುವ ಮೂಲಕ ಅವರ ಶಿಕ್ಷಣದ ಹಕ್ಕನ್ನು ನಿರಾಕರಿಸುತ್ತಿರುವ ಚಿತ್ರವು ನಮ್ಮ ಸಮಾಜದ ಸಾಮೂಹಿಕ ಆತ್ಮಸಾಕ್ಷಿಯನ್ನೇ ಇರಿದಿದೆ. ತನ್ನ ಕಣ್ಣು ಮುಂದೆಯೇ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದ್ದರೂ, ಅಲ್ಲಿಯೇ, ಶಾಲಾ ಆವರಣದಲ್ಲೇ ನಿಂತು ನೋಡುತ್ತಿರುವ, ಮೌನವಹಿಸಿರುವ ಸರಕಾರವು ಈಗಲಾದರೂ ಎಚ್ಚೆದ್ದು ಈ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಪುನರ್ ಸ್ಥಾಪಿಸುವ ಮೂಲಕ, ಜನರು ಇರಿಸಿರುವ ಅಲ್ಪ ಭರವಸೆಯನ್ನಾದರೂ ಕಾಪಾಡಿಕೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X