ಹೊನ್ನಾಳ: ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ

ಬ್ರಹ್ಮಾವರ, ಫೆ.6: ಕರ್ನಾಟಕ ಮುಸ್ಲಿಂ ಜಮಾಅತ್ ಹಾರಾಡಿ ಗ್ರಾಮ ಸಮಿತಿ ವತಿಯಿಂದ ಉಡುಪಿ ಪ್ರಸಾದ್ ನೇತ್ರಾಲಯ, ಬ್ರಹ್ಮಾವರ ರೋಟರಿ ರೋಯಲ್, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಾಮಿಯಾ ಮಸೀದಿ, ಎಸ್ಸೆಸ್ಸೆಫ್ ಹೊನ್ನಾಳ ಇವುಗಳ ಸಹಯೋಗ ದೊಂದಿಗೆ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ, ಆಯ್ಯು ಷ್ಮಾನ್ ಕಾರ್ಡ್, ಈಶ್ರಮ್ ಕಾರ್ಡ್ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ವನ್ನು ಹೊನ್ನಾಳದ ಶಾದಿ ಮಹಲ್ನಲ್ಲಿ ಏರ್ಪಡಿಸಲಾಗಿತ್ತು.
ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹೊನ್ನಾಳ ಮಸೀದಿ ಪೇಶಿ ಇಮಾಮ್ ಮೌಲಾನಾ ಫಕ್ರುದ್ದೀನ್ ರಝ್ವಿ ಚಾಲನೆ ನೀಡಿದರು.
ಅಧ್ಯಕ್ಷತೆ ಯನ್ನು ಹಾರಾಡಿ ಗ್ರಾಮ ಮುಸ್ಲಿಂ ಜಮಾಅತ್ ಸಮಿತಿ ಅಧ್ಯಕ್ಷ ಇಮ್ರಾನ್ ಹೆನ್ನಾಬೈಲ್ ವಹಿಸಿದ್ದರು.
ಬ್ರಹ್ಮಾವರ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಜೆ.ಮುಷ್ತಾಕ್ ಅಹ್ಮದ್, ಡಾ.ಸೀಯೋಮ, ರಾಜರಾಮ ಶೆಟ್ಟಿ, ನಾಗರಾಜ ಶೆಟ್ಟಿ ಹೊನ್ನಾಳ, ಇಮಾಮ್ ಸಾಹೇಬ್ ಟಂಕಸಾಲಿ, ಮೋಹನ್ದಾಸ್ ಮಾತನಾಡಿದರು. ಆಪತ್ಭಾಂದವ ರಫೀಕ್ ದೊಡ್ಡಣ್ಣಗುಡ್ಡೆ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮುಸ್ಲಿಂ ಜಮಾಅತ್ ಕಾರ್ಯಾಧ್ಯಕ್ಷ ಸುಬ್ಹಾನ್ ಅಹ್ಮದ್ ಹೊನ್ನಾಳ ಸ್ವಾಗತಿಸಿದರು. ಇಮ್ತಿಯಾಝ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿದರು.