Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಗುಂಡು ಹಾರಿಸುವುದನ್ನು ನೋಡಿದ್ದ...

ನಾನು ಗುಂಡು ಹಾರಿಸುವುದನ್ನು ನೋಡಿದ್ದ ಉವೈಸಿ ಕೆಳಕ್ಕೆ ಬಗ್ಗಿದ್ದರು,ನಾನು ಕಾರಿನ ಕೆಳಭಾಗಕ್ಕೆ ಗುಂಡಿಕ್ಕಿದ್ದೆ: ಆರೋಪಿ

"ನಾನು ದೊಡ್ಡ ರಾಜಕಾರಣಿಯಾಗಲು ಬಯಸಿದ್ದೇನೆ, ನಾನೋರ್ವ ನೈಜ ದೇಶಭಕ್ತ"

ವಾರ್ತಾಭಾರತಿವಾರ್ತಾಭಾರತಿ6 Feb 2022 8:53 PM IST
share
ನಾನು ಗುಂಡು ಹಾರಿಸುವುದನ್ನು ನೋಡಿದ್ದ ಉವೈಸಿ ಕೆಳಕ್ಕೆ ಬಗ್ಗಿದ್ದರು,ನಾನು ಕಾರಿನ ಕೆಳಭಾಗಕ್ಕೆ ಗುಂಡಿಕ್ಕಿದ್ದೆ: ಆರೋಪಿ

ಹೊಸದಿಲ್ಲಿ,ಫೆ.6: ‘ಛಜರ್ಸಿ ಟೋಲ್ ಪ್ಲಾಝಾದ ಸಮೀಪ ಉವೈಸಿ ಪ್ರಯಾಣಿಸುತ್ತಿದ್ದ ಕಾರು ನಿಧಾನಗೊಂಡಿತ್ತು. ನಾನು ಮೊದಲ ಗುಂಡು ಹಾರಿಸಿದ್ದನ್ನು ಉವೈಸಿ ಕಂಡಿದ್ದರು ಮತ್ತು ತನ್ನ ಜೀವವನ್ನು ಉಳಿಸಿಕೊಳ್ಳಲು ಕೆಳಕ್ಕೆ ಬಗ್ಗಿದ್ದರು. ಆಗ ನಾನು ಕಾರಿನ ಕೆಳಭಾಗಕ್ಕೆ ಗುಂಡು ಹಾರಿಸಿದ್ದೆ. ಅವರು ಸತ್ತಿದ್ದಾರೆಂದು ನಾನು ಭಾವಿಸಿದ್ದೆ ’ ಎಂದು ಬಂಧಿತ ಇಬ್ಬರು ಆರೋಪಿಗಳಲ್ಲೋರ್ವನಾದ ಸಚಿನ್ ಶರ್ಮಾ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಲೋಕಸಭಾ ಸದಸ್ಯ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿಯವರು ಗುರುವಾರ ಸಂಜೆ ಉ.ಪ್ರದೇಶ ಚುನಾವಣಾ ಪ್ರಚಾರ ಮುಗಿಸಿಕೊಂಡು ಮೀರತ್ನಿಂದ ದಿಲ್ಲಿಗೆ ವಾಪಸಾಗುತ್ತಿದ್ದಾಗ ಹಾಪುರ್ ಜಿಲ್ಲೆಯ ಪಿಲ್ಖುವಾದ ಛಜರ್ಸಿ ಟೋಲ್ಪ್ಲಾಝಾದ ಬಳಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿರಲಿಲ್ಲ. ಆರೋಪಿಗಳಾದ ಸಚಿನ್ ಶರ್ಮಾ ಮತ್ತು ಶುಭಂ ಎನ್ನುವವರನ್ನು ಬಂಧಿಸಿರುವ ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಈ ಹಿಂದೆ ಮೂರು ಬಾರಿ ಉವೈಸಿ ಮೇಲೆ ದಾಳಿಗೆ ಪ್ರಯತ್ನಿಸಿದ್ದರಾದರೂ ಜನಸಂದಣಿಯಿಂದಾಗಿ ವಿಫಲಗೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾರಂಭದಲ್ಲಿ ಆರೋಪಿಗಳು ಪೊಲೀಸರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿರಲಿಲ್ಲ. ಆದರೆ ಘಟನೆಯ ದೃಶ್ಯ ಸಿಸಿಟಿವಿಯಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದಾಗ ಕ್ಷಮೆ ಯಾಚಿಸಿದ ಸಚಿನ್,ಏನು ನಡೆದಿತ್ತು ಎನ್ನುವುದನ್ನು ವಿವರಿಸಿದ್ದಾನೆ ಎಂದು ಎಫ್ಐ ಆರ್ನಲ್ಲಿ ಹೇಳಲಾಗಿದೆ.

‘ನಾನು ದೊಡ್ಡ ರಾಜಕಾರಣಿಯಾಗಲು ಬಯಸಿದ್ದೆ. ನಾನೋರ್ವ ನಿಜವಾದ ದೇಶಭಕ್ತ ಎಂದು ನಾನು ಭಾವಿಸಿದ್ದೇನೆ. ಉವೈಸಿಯವರ ಭಾಷಣಗಳು ದೇಶಕ್ಕೆ ಹಾನಿಕರ ಎಂದು ನಾನು ತಿಳಿದಿದ್ದೆ. ನನ್ನ ಮನಸ್ಸಿನಲ್ಲಿ ಅವರ ವಿರುದ್ಧ ದ್ವೇಷ ಬೆಳೆದಿತ್ತು. ಉವೈಸಿಯವರ ಭೇಟಿಗಳ ಬಗ್ಗೆ ತಿಳಿದುಕೊಳ್ಳಲು ನಾನು ಎಐಎಂಐಎಂನ ದಸ್ನಾ ಘಟಕದ ಅಧ್ಯಕ್ಷರೊಂದಿಗೆ ಸಂಪರ್ಕ ಹೊಂದಿದ್ದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉವೈಸಿ ಮೇಲೆ ದಾಳಿ ನಡೆಸಲು ನಿರ್ಧರಿಸಿದ್ದೆ. ಬಳಿಕ ತನಗೆ ಹಲವಾರು ವರ್ಷಗಳಿಂದಲೂ ಪರಿಚಿತನಾಗಿರುವ ಸಹಾರನ್ಪುರ ನಿವಾಸಿ ಶುಭಮ್ನನ್ನು ಸಂಪರ್ಕಿಸಿದ್ದೆ ’ಎಂದು ಸಚಿನ್ ಪೊಲೀಸರಿಗೆ ತಿಳಿಸಿದ್ದಾನೆ.

‘ನನ್ನ ಕರೆಯ ಮೇರೆಗೆ ಶುಭಂ ಘಾಜಿಯಾಬಾದ್ ಗೆ ಆಗಮಿಸಿದ್ದ ಮತ್ತು ಜ.28ರಂದು ವೇವ್ ಸಿಟಿ ಬಳಿ ನಾವಿಬ್ಬರೂ ಭೇಟಿಯಾಗಿದ್ದೆವು. ಶುಭಂ ತನ್ನ ಸ್ನೇಹಿತನೊಂದಿಗೆ ಉಳಿದುಕೊಂಡಿದ್ದ. ಉವೈಸಿಯನ್ನು ಕೊಲ್ಲಲು ನಿರ್ಧರಿಸಿದ ನಾವು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದೆವು ’ಎಂದು ಸಚಿನ್ ಪೊಲೀಸರಿಗೆ ತಿಳಿಸಿದ್ದಾಗಿ ಎಫ್ಐಆರ್ನಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X