Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಜಾಬ್ ವಿವಾದದ ಹಿಂದಿನ ಹಿಡನ್‌...

ಹಿಜಾಬ್ ವಿವಾದದ ಹಿಂದಿನ ಹಿಡನ್‌ ಅಜೆಂಡಾವನ್ನು ಸರಕಾರ ಬಗ್ಗು ಬಡಿಯಲಿದೆ: ಸಚಿವ ಸುನೀಲ್ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ6 Feb 2022 9:35 PM IST
share
ಹಿಜಾಬ್ ವಿವಾದದ ಹಿಂದಿನ ಹಿಡನ್‌ ಅಜೆಂಡಾವನ್ನು ಸರಕಾರ ಬಗ್ಗು ಬಡಿಯಲಿದೆ: ಸಚಿವ ಸುನೀಲ್ ಕುಮಾರ್‌

ಉಡುಪಿ, ಫೆ. 6: ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಸಂಬಂಧ ರಾಜ್ಯ ಸರಕಾರ ಕಾನೂನು ಮಾಡಿದೆ. ಈ ಕಾನೂನನ್ನು ಎಲ್ಲರು ಗೌರವಿಸಬೇಕು. ಇಲ್ಲದಿದ್ದರೆ ಇದರ ಹಿಂದೆ ಯಾವುದೋ ದೊಡ್ಡ ಪ್ರಮಾಣದ ಹಿಡನ್ ಅಜೆಂಡಾ ಇದೆ ಎಂಬುದು ಅರ್ಥ. ಆ ಹಿಡನ್ ಅಜೆಂಡಾವನ್ನು ಸರಕಾರ ಬಗ್ಗು ಬಡಿಯಲಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ನೆಲದ ಕಾನೂನನ್ನು ಗೌರವಿಸಬೇಕಾಗಿರುವುದು ಎಲ್ಲ ಕರ್ತವ್ಯವಾಗಿದೆ. ಅದನ್ನು ಯಾರು ಗೌರವಿಸುವುದಿಲ್ಲವೋ ಅವರು ಈ ನೆಲದಲ್ಲಿ ಇರಲು ಅನರ್ಹರು. ಸುತ್ತೋಲೆ, ಕಾನೂನುಗಳಿಗಿಂತ ಹೆಚ್ಚಾಗಿ, ಶಾಲಾ ಕಾಲೇಜುಗಳಲ್ಲಿ ಎಲ್ಲರೂ ಒಟ್ಟಾಗಿ ಸಮಾನತೆಯಿಂದ ಶಿಕ್ಷಣ ಕಲಿಯಬೇಕು ಎಂಬುದು ನಮ್ಮ ಪರಂಪರೆಯಲ್ಲಿಯೇ ಇದೆ. ಇದರಲ್ಲಿ ಮತೀಯ ಸಂಗತಿಗಳು ವಿಜೃಂಭಿಸುವುದು ಒಳ್ಳೆಯದಲ್ಲ ಎಂದರು. ಕರ್ನಾಟಕವನ್ನು ಹಿಡನ್ ಅಜೆಂಡಾ ಮೂಲಕ ಏನೋ ಮಾಡುತ್ತೇವೆ. ಕಾಂಗ್ರೆಸ್ ಟೂಲ್‌ಕಿಟ್ ಭಾಗವಾಗಿ ಇನ್ನೇನೋ ಮಾಡುತ್ತೇವೆ ಎಂಬುದನ್ನು ನಮ್ಮ ಸರಕಾರ ಸಹಿಸಲು ಸಾಧ್ಯವಿಲ್ಲ. ಪೋಷಕರು ಕೂಡ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮುಸ್ಲಿಮ್ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರುವಂತೆ ನಾನು ಕರೆ ಕೊಡುತ್ತೇನೆ. ಇಲ್ಲಿಯವರೆಗೆ ಅಲ್ಲಿರುವ ವ್ಯವಸ್ಥೆ ನಿಮ್ಮನ್ನು ಬಗ್ಗುಬಡಿಯುವ ಹಾಗೂ ಮುಸುಕಿನಲ್ಲಿ ಇರಿಸುವ ಪ್ರಯತ್ನ ಮಾಡಿತ್ತು. ತ್ರಿಪಲ್ ತಲಾಕ್ ರದ್ದು ಪಡಿಸುವ ಮೂಲಕ ಮುಸ್ಲಿಮ್ ಮಹಿಳೆಯರಿಗೆ ಸರಕಾರ ಭದ್ರತೆಯನ್ನು ನೀಡಿದೆ. ಹಾಗಾಗಿ ಮುಖ್ಯವಾಹಿನಿಗೆ ಬನ್ನಿ ಎಂದು ಕರೆಕೊಡುತ್ತೇವೆ ಎಂದರು.

ಜಗತ್ತಿನ ಯಾವುದೇ ದೇಶದಲ್ಲಿ ಇರದ ಅನಿಷ್ಠ ಪದ್ಧತಿ ಈ ದೇಶದಲ್ಲಿ ಇಂದಿಗೂ ಮುಂದುವರಿಯುತ್ತಿದೆ. ಅದನ್ನು ಬಿಟ್ಟು ಹೊರಗೆ ಬರುವ ಪ್ರಯತ್ನ ಮಾಡಿದರೆ ಈ ಸಮಾಜದಲ್ಲಿ ಗೌರವದಿಂದ ನಡೆದು ಕೊಳ್ಳಲು ಸಾಧ್ಯವಾಗುತ್ತದೆ. ಆ ರೀತಿಯ ಜಾಗೃತಿ ಅವರ ಮನೆಯಲ್ಲಿಯೇ ಆಗಬೇಕು ಎಂದು ಸಚಿವರು ಹೇಳಿದರು.

ಹೈಕೋರ್ಟ್ ತೀರ್ಪು ಬರುವ ಮೊದಲೇ ತರಾತುರಿಯಲ್ಲಿ ಕಾನೂನು ಮಾಡಿರುವುದು ಮುಸ್ಲಿಮ್ ಹೆಣ್ಣು ಮಕ್ಕಳ ಶಿಕ್ಷಣ ತಪ್ಪಿಸಿರುವ ಹುನ್ನಾರ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಎರಡು ದಿನ ವಿಳಂಬವಾಗಿರು ವುದಕ್ಕೆ ಸುತ್ತೋಲೆ ನೀಡಿಲ್ಲ ಎಂದು ಹೇಳುತ್ತಾರೆ. ಸುತ್ತೋಲೆ ಕೊಟ್ಟರೆ ತರಾತುರಿ ಎಂದು ಹೇಳುತ್ತಾರೆ. ಹಾಗಾಗಿ ನಾನು ಸುತ್ತೋಲೆ ಬಗ್ಗೆ ಮಾತನಾಡುವುದಿಲ್ಲ. ಇಂದಿನ ಸರಕಾರಿ ಶಾಲೆಗಳಲ್ಲಿ ಇರುವ ಪದ್ಧತಿಯ ಪ್ರಕಾರವೇ ಎಲ್ಲ ತರಗತಿಗೆ ಬರಬೇಕು ಎಂದರು.

ನಾಳೆ ನಮಗೆ ಆ ಭಾಷೆ ಅರ್ಥ ಆಗುವುದಿಲ್ಲ ಉರ್ದುವಿನಲ್ಲಿ ಪಾಠ ಮಾಡಿ ಹೇಳಿದರೆ, ಉರ್ದುವಿನಲ್ಲಿ ಪಾಠ ಮಾಡಲು ಆಗುತ್ತದೆಯೇ ? ಹಾಗೆ ಮಾಡಲು ಆಗುವುದಿಲ್ಲ. ಒಂದು ವ್ಯವಸ್ಥೆ ಎಂಬುದು ಇದೆ. ಅದರ ಅಡಿಯಲ್ಲಿ ಎಲ್ಲವೂ ನಡೆಯಬೇಕು. ವ್ಯಕ್ತಿ ಸ್ವಾತಂತ್ರ ಇದೆ ಎಂದು ಮಧ್ಯಾಹ್ನ ಬಿಸಿಯೂಟದಲ್ಲಿ ನಿಂತು, ಮಲಗಿ ಊಟ ಮಾಡುತ್ತೇನೆ ಎಂದು ಹೇಳಿದರೆ ಆಗುತ್ತದೆಯೇ? ಸಂಪ್ರದಾಯ ಪ್ರಕಾರ ಎಲ್ಲರು ಕುಳಿತೇ ಊಟ ಮಾಡಬೇಕು. ಅದಕ್ಕೆ ಶಿಸ್ತು ಎಂದು ಹೇಳುತ್ತಾರೆ. ಅದೇ ರೀತಿ ಸಮವಸ್ತ್ರದಲ್ಲಿಯೂ ನಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಕೇಸರಿ ಶಾಲು ಧರಿಸುವವರ ಬಗ್ಗೆ ಪ್ರತ್ರಿಯಿಸಿದ ಅವರು, ವಸ್ತ್ರ ಸಂಹಿತೆ ಎಂಬುದು ಒಂದು ಗುಂಪಿಗೆ, ಒಂದು ಸಮಾಜಕ್ಕೆ ಅಲ್ಲ. ಶಾಲೆಯ ಒಳಗೆ ಸಮವಸ್ತ್ರ ಹಾಕಿಕೊಂಡು ಬರಬೇಕು ಎಂಬುದು ಎಲ್ಲರಿಗೂ ಅನ್ವಯ. ಕೇವಲ ಒಂದು ಗುಂಪಿಗೆ ಎಂದು ನಾನು ಹೇಳುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X