Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಾಶ್ಮೀರ ಕುರಿತ ಸಾಕ್ಷ್ಯಚಿತ್ರಕ್ಕೂ...

ಕಾಶ್ಮೀರ ಕುರಿತ ಸಾಕ್ಷ್ಯಚಿತ್ರಕ್ಕೂ ರಶ್ಯಾ ಸರಕಾರಕ್ಕೂ ಸಂಬಂಧವಿಲ್ಲ: ರಾಯಭಾರ ಕಚೇರಿ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ6 Feb 2022 11:33 PM IST
share

ಮಾಸ್ಕೊ, ಫೆ.6: ರಶ್ಯಾ ಬೆಂಬಲಿತ ಎಂದು ಹೇಳಲಾದ ಡಿಜಿಟಲ್ ಸಂಸ್ಥೆಯೊಂದು ಕಾಶ್ಮೀರ ಕುರಿತ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿರುವ ವಿವಾದಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ಭಾರತದಲ್ಲಿನ ರಶ್ಯಾ ರಾಯಭಾರ ಕಚೇರಿ, ಈ ಸಾಕ್ಷ್ಯಚಿತ್ರಕ್ಕೂ ರಶ್ಯಾ ಸರಕಾರಕ್ಕೂ ಸಂಬಂಧವಿಲ್ಲ ಎಂದಿದೆ. ಕಾಶ್ಮೀರವು ಹೊಸ ಪೆಲೆಸ್ತೀನ್ ಆಗುತ್ತಿದೆ ಎಂದು ಸಾಕ್ಷ್ಯಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಶ್ಯಾದ ರಾಯಭಾರ ಕಚೇರಿ, ಈ ಪ್ರದೇಶದ ವಿವಾದವು ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿವಾದವಾಗಿದೆ ಎಂದು ಹೇಳಿದೆ. 

‘ಕಾಶ್ಮೀರ್: ಹೊಸ ಪೆಲೆಸ್ತೀನ್‌ನ ಹಾದಿಯಲ್ಲಿ’ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದ ಕುರಿತು ಜರ್ಮನ್ ಮೂಲದ ಡಿಜಿಟಲ್ ವೀಡಿಯೊ ಸಂಸ್ಥೆ ರೆಡ್‌ಫಿಶ್ ಮೀಡಿಯಾ ವೀಡಿಯೊ ಮೂಲಕ ಮಾಹಿತಿ ನೀಡಿದ್ದು, ಈ ಸಾಕ್ಷ್ಯಚಿತ್ರದ ಟ್ರೇಲರ್‌ನಲ್ಲಿ ‘ಕಾಶ್ಮೀರವು ವಸಾಹತುಶಾಹಿ ರಾಜ್ಯವಾಗುವತ್ತ ಧಾವಿಸುತ್ತಿದೆ’ ಎಂದು ಪ್ರತಿಪಾದಿಸಲಾಗಿದೆ. ಈ ಸಾಕ್ಷ್ಯಚಿತ್ರವನ್ನು ಫೆಬ್ರವರಿ 9ರಂದು 9:30ಕ್ಕೆ(ಭಾರತೀಯ ಕಾಲಮಾನ) ಪ್ರಸಾರ ಮಾಡುವುದಾಗಿ ಸಂಸ್ಥೆ ಹೇಳಿದೆ. ಜತೆಗೆ, ರೆಡ್‌ಫಿಶ್ ಮೀಡಿಯಾವು ರಶ್ಯಾ ಬೆಂಬಲಿತ ಸಂಸ್ಥೆ ಎಂದೂ ಹೇಳಲಾಗಿತ್ತು. ಶನಿವಾರ ಮತ್ತೊಂದು ಟ್ರೇಲರ್ ಬಿಡುಗಡೆಗೊಳಿಸಿದ ರೆಡ್‌ಫಿಶ್ ಮೀಡಿಯಾ, ಸಾಕ್ಷ್ಯಚಿತ್ರವು ‘ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯ ದೃಷ್ಟಿಕೋನ’ವನ್ನೂ ಒಳಗೊಂಡಿದೆ ಎಂದು ಘೋಷಿಸಿತ್ತು. ಇದು ತಪ್ಪು ಹಾದಿಗೆ ಎಳೆಯುವ ಮಾಹಿತಿ ಎಂದು ರಶ್ಯಾದ ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ. ರೆಡ್‌ಫಿಶ್ ಸ್ವತಂತ್ರ ಸಂಪಾದಕೀಯ ಕಾರ್ಯನೀತಿಯನ್ನು ಹೊಂದಿದ್ದರೂ, ಈ ಪ್ರಸ್ತಾವಿತ ಸಾಕ್ಷ್ಯಚಿತ್ರವು ಕಾಶ್ಮೀರದ ವಿಷಯದ ಸಂಕೀರ್ಣ, ಐತಿಹಾಸಿಕ ಹಿನ್ನೆಲೆಯನ್ನು ಗಮನಿಸಿ ಸಮತೋಲಿತ ಅನುಸಂಧಾನವನ್ನು ಅನುಸರಿಸಲಿದೆ ಎಂಬ ವಿಶ್ವಾಸವಿದೆ. ವೃತ್ತಿಪರ ಮಾಧ್ಯಮ ಸಂಸ್ಥೆಯಿಂದ ಇಂತಹ ಉಪಕ್ರಮವನ್ನು ನಿರೀಕ್ಷಿಸುವುದಾಗಿ ರಶ್ಯಾ ರಾಯಭಾರ ಕಚೇರಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X