Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್ ಲಸಿಕೆ ವಿರುದ್ಧ ಟ್ರಕ್ ಚಾಲಕರ...

ಕೋವಿಡ್ ಲಸಿಕೆ ವಿರುದ್ಧ ಟ್ರಕ್ ಚಾಲಕರ ಪ್ರತಿಭಟನೆ: ಕೆನಡಾದ ಒಟ್ಟಾವದಲ್ಲಿ ತುರ್ತು ಪರಿಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ7 Feb 2022 11:43 PM IST
share
ಕೋವಿಡ್ ಲಸಿಕೆ ವಿರುದ್ಧ ಟ್ರಕ್ ಚಾಲಕರ ಪ್ರತಿಭಟನೆ: ಕೆನಡಾದ ಒಟ್ಟಾವದಲ್ಲಿ ತುರ್ತು ಪರಿಸ್ಥಿತಿ

ಟೊರಂಟೊ, ಫೆ.7: ಕೋವಿಡ್ ಲಸಿಕೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಕೆನಡಾದ ರಾಜಧಾನಿ ಒಟ್ಟಾವದಲ್ಲಿ ಟ್ರಕ್ ಚಾಲಕರು ನಡೆಸುತ್ತಿರುವ ಪ್ರತಿಭಟನೆ ನಿಯಂತ್ರಣ ತಪ್ಪಿದೆ ಎಂದು ಒಟ್ಟಾವದ ಮೇಯರ್ ಹೇಳಿದ್ದು, ನಗರದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿರುವುದಾಗಿ ರವಿವಾರ ಘೋಷಿಸಿದ್ದಾರೆ.

 ಕೋವಿಡ್ ಲಸಿಕೆ ಕಡ್ಡಾಯವನ್ನು ವಿರೋಧಿಸಿರುವ ಟ್ರಕ್ ಡ್ರೈವರ್ಗಳು ನಡೆಸಿದ ಜಾಥಾ ಜನವರಿ 29ರಂದು ಒಟ್ಟಾವ ತಲುಪಿತ್ತು. ಅಲ್ಲಿ ರಸ್ತೆಯ ಮೇಲೆ ತಮ್ಮ ಟ್ರಕ್ಗಳನ್ನು ನಿಲ್ಲಿಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ್ದ ಪ್ರತಿಭಟನಾಕಾರರು, ರಸ್ತೆಯ ಬದಿಯಲ್ಲಿಯೇ ತಾತ್ಕಾಲಿಕ ಡೇರೆ ಹಾಕಿಕೊಂಡು ಮುಷ್ಕರ ನಡೆಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು. ಪೊಲೀಸ್ ಸಿಬಂದಿಗಳಿಂತ ಹಲವು ಪಟ್ಟು ಹೆಚ್ಚು ಪ್ರತಿಭಟನಾಕಾರರು ನೆರೆದಿರುವುದರಿಂದ ಪರಿಸ್ಥಿತಿ ನಿಯಂತ್ರಣ ತಪ್ಪಿದೆ. ಈ ಯುದ್ಧದಲ್ಲಿ ನಮಗೆ ಹಿನ್ನಡೆಯಾಗಿರುವುದು ಸ್ಪಷ್ಟವಾಗಿದೆ. ಈ ಸ್ಥಿತಿ ಮುಂದುವರಿಯಲು ಬಿಡಬಾರದು. ನಗರ ಮತ್ತೆ ಮೊದಲಿನ ಸ್ಥಿತಿಗೆ ಮರಳಬೇಕು. ಜನಜೀವನ ಸಹಜ ಸ್ಥಿತಿಗೆ ಮರಳಬೇಕು ಎಂಬ ನಿಟ್ಟಿನಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಲಾಗಿದೆ ಎಂದು ಒಟ್ಟಾವದ ಮೇಯರ್ ಜಿಮ್ ವಾಟ್ಸನ್ ಘೋಷಿಸಿದ್ದಾರೆ.

  ಭಾವನಾಶೂನ್ಯತೆ ಹೊಂದಿರುವ ಟ್ರಕ್ ಚಾಲಕರು ನಿರಂತರ ಹಾರ್ನ್ , ಸೈರನ್ ಮೊಳಗಿಸುತ್ತಾ, ಪಟಾಕಿ ಸಿಡಿಸುತ್ತಾ ನಗರದ ನೆಮ್ಮದಿಯನ್ನು ಕೆಡಿಸಿ ಮೋಜಿನ ಕೂಟವನ್ನಾಗಿಸಿದ್ದಾರೆ ಎಂದು ವಾಟ್ಸನ್ ಖಂಡಿಸಿದ್ದಾರೆ. ಟ್ರಕ್ಗಳು ಅಮೆರಿಕ-ಕೆನಡಾ ಗಡಿ ದಾಟಬೇಕಿದ್ದರೆ ಚಾಲಕರು ಕೋವಿಡ್ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂಬ ನಿಯಮವನ್ನು ವಿರೋಧಿಸಿ ಪ್ರತಿಭಟನೆ ಆರಂಭವಾಗಿತ್ತು. ಇದರ ಜತೆ ಕೊರೋನ ನಿರ್ಬಂಧ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ಹಾಗೂ ಪ್ರಧಾನಿ ಜಸ್ಟಿನ್ ಟ್ರೂಡೊ ಸರಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ಸೇರಿಕೊಂಡು ವ್ಯಾಪಕ ರೀತಿಯಲ್ಲಿ ಪ್ರತಿಭಟನೆ ಮುಂದುವರಿದಿದೆ.
 
ಈ ಮಧ್ಯೆ, ಪ್ರತಿಭಟನಾ ನಿರತರಿಗೆ ಗ್ಯಾಸ್, ನೀರು ಮತ್ತಿತರ ಸವಲತ್ತುಗಳನ್ನು ಒದಗಿಸದಂತೆ ಪೊಲೀಸರು ರವಿವಾರ ಸ್ಥಳೀಯರನ್ನು ಎಚ್ಚರಿಸಿದ್ದು ಪ್ರತಿಭಟನಾ ನಿರತರಿಗೆ ನೆರವಾಗುವವರನ್ನು ಬಂಧಿಸಲಾಗುವುದು ಎಂದು ಘೋಷಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X