Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಭಾರೀ ವಿರೋಧದ ಮಧ್ಯೆ...

ಮೈಸೂರು: ಭಾರೀ ವಿರೋಧದ ಮಧ್ಯೆ ರಾತ್ರೋರಾತ್ರಿ ಎನ್.ಟಿ.ಎಂ ಶಾಲೆ ಕಟ್ಟಡ ನೆಲಸಮ

ಪ್ರತಿಭಟನಾಕಾರರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Feb 2022 11:01 AM IST
share
ಮೈಸೂರು: ಭಾರೀ ವಿರೋಧದ ಮಧ್ಯೆ ರಾತ್ರೋರಾತ್ರಿ ಎನ್.ಟಿ.ಎಂ ಶಾಲೆ ಕಟ್ಟಡ ನೆಲಸಮ

ಮೈಸೂರು: ಭಾರೀ ವಿರೋಧದ ನಡುವೆಯೇ ನಗರದ ಎನ್.ಟಿ.ಎಂ ಮಹರಾಣಿ ಹೆಣ್ಣು ಮಕ್ಕಳ ಶಾಲೆಯನ್ನು ಸೋಮವಾರ ತಡರಾತ್ರಿ  ನೆಲಸಮಗೊಳಿಸಲಾಯಿತು. ಇದಕ್ಕೆ ವಿರೋಧಿಸಿ ಪ್ರತಿಭಟನೆಗೆ ಇಳಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಸೋಮವಾರ ರಾತ್ರಿ 11.30 ಗಂಟೆ ಸುಮಾರಿಗೆ ಶಾಲೆ ಗೆ ಸೇರಿದ ರಸ್ತೆಗೆ ನಾಕಾ ಬಂದಿ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಯಿತು.

ವಿಷಯ ತಿಳಿದು ಹೋರಾಟಗಾರರಾದ ಸ.ರಾ.ಸುದರ್ಶನ್, ಉಗ್ರನರಸಿಂಹೇಗೌಡ, ಚಂದ್ರಶೇಖರ ಮೇಟಿ, ಕರುಣಾಕರ್, ಮೋಹನ್ ಕುಮಾರ್ ಗೌಡ, ರೈತ ಸಂಘದ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ ಸೇರಿದಂತೆ ಹಲವರು ಶಾಲೆ ನೆಲಸಮಗೊಳಿಸದಂತೆ ತಡೆದರು. ಇದಕ್ಕೆ ಪೊಲೀಸರು ನ್ಯಾಯಾಲಯದ ಆದೇಶವಾಗಿದೆ. ಇದು ಖಾಸಗಿ ಜಾಗ ಎಂದು ಹೇಳಿದರು. ಆದೇಶ ಪ್ರತಿ ತೋರಿಸುವಂತರ ಪ್ರತಿಭಟನಾಕಾರರು ಒತ್ತಾಯಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನಬಚಕಮಕಿ ನಡೆಯಿತು.

ನಾಲ್ಕು ಜೆಸಿಬಿ ಗಳು ಶಾಲೆ ನೆಲಸಮಗೊಳಿಸಲು ಆಗಮಿಸುತ್ತುಇದ್ದಂತೆ ಜೆಸಿಬಿಗೆ ಅಡ್ಡಲಾಗಿ ಮಲಗಿದ ಮೋಹನ್ ಕುಮಾರ್ ಗೌಡ, ಉಗ್ರನರಸಿಂಹೇಗೌಡ, ಸ.ರಾ.ಸುದರ್ಶನ್, ಕರುಣಾಕರ್, ಹೊಸಕೋಟೆ ಬಸವರಾಜು, ಚಂದ್ರಶೇಖರ ಮೇಟಿ, ಪಿ.ಮರಂಕಯ್ಯ ಅವರನ್ನು ಪೊಲೀಸರು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭನಾಕಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ವಿರೋಧದ ನಡುವೆಯೂ ಎನ್.ಟಿ.ಎಂ‌. ಶಾಲೆಯನ್ನು ನೆಲಸಮಗೊಳಿಸಿದರು.

ಬಹಳ ಹಳೆಯದಾದ ಎನ್.ಟಿ.ಎಂ ಶಾಲೆ ಆವರಣದಲ್ಲಿ ಒಂದೂ ವರೆ ದಶಕದ ಹಿಂದೆ ವಿವೇಕಾನಂದರು ಬಂದು ವಾಸ್ತವ್ಯ ಹೂಡಿದ್ದರು ಎಂದು ಈ ಜಾಗವನ್ನು ರಾಮಕೃಷ್ಣ ಆಶ್ರಮಕ್ಕೆ 2013 ರಲ್ಲಿಯೇ ಸರ್ಕಾರ ಹಸ್ತಾಂತರಿಸಿತ್ತು. ಆದರೆ ಕನ್ನಡಪರ ಹೋರಾಟಗಾರರು, ಪ್ರಗತಿಪರ, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು  ಶಾಲೆ ತೆರವುಗೊಳಿಸದಂತೆ ಹೋರಾಟ ತಡೆಯೊಡ್ಡಿದ್ದರು.

ಈಗ್ಗೆ ಮೂರು ದಿನಗಳ ಹಿಂದೆ ಈ ಶಾಲೆಯನ್ನು ಎದುರಿಗೆ ಇರುವ ಮಹರಾಣಿ ಬಿಎಡ್ ಕಾಲೇಜಿನ ಆವರಣಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆ ಸಂದರ್ಭದಲ್ಲೂ ಹೋರಾಟಗಾರರು ಪ್ರತಿಭಟಸಿ ಸ್ಥಳಾಂತರ ಮಾಡದಂತೆ ರಸ್ತೆಗೆ ಅಡ್ಡಲಾಗೆ ಮಲಗಿದ್ದರು.

ಆದರೆ ಇದೀಗ ಬಹಳ ಹಳೆಯದಾದ ಎನ್.ಟಿ.ಎಂ.ಹೆಣ್ಣುಮಕ್ಕಳ ಶಾಲೆಯೊಂದು ನೆಲಸಮಗೊಂಡು ಇತಿಹಾಸದ ಪುಟ ಸೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X