Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ’ನಮಸ್ತೆ ಟ್ರಂಪ್’ ಕಾರ್ಯಕ್ರಮ...

ಪ್ರಧಾನಿಯ ’ನಮಸ್ತೆ ಟ್ರಂಪ್’ ಕಾರ್ಯಕ್ರಮ ದೇಶದಲ್ಲಿ ಕೋವಿಡ್ ಹರಡಲು ಪ್ರಮುಖ ಕಾರಣವಾಗಿತ್ತು: ಎನ್ ಸಿಪಿ

ವಾರ್ತಾಭಾರತಿವಾರ್ತಾಭಾರತಿ8 Feb 2022 10:19 PM IST
share
ಪ್ರಧಾನಿಯ ’ನಮಸ್ತೆ ಟ್ರಂಪ್’ ಕಾರ್ಯಕ್ರಮ ದೇಶದಲ್ಲಿ ಕೋವಿಡ್ ಹರಡಲು ಪ್ರಮುಖ ಕಾರಣವಾಗಿತ್ತು: ಎನ್ ಸಿಪಿ

ಮುಂಬೈ,ಫೆ.8: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರತಿಪಕ್ಷಗಳು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳುವಂತಾಗಲು ಅವರಲ್ಲಿ ಭೀತಿಯನ್ನು ಸೃಷ್ಟಿಸಿದ್ದವು ಎಂದು ಸೋಮವಾರ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಆರೋಪಕ್ಕೆ ಮಂಗಳವಾರ ತಿರುಗೇಟು ನೀಡಿರುವ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರು, ಮೋದಿಯವರು ಆಯೋಜಿಸಿದ್ದ ‘ನಮಸ್ತೆ ಟ್ರಂಪ್’ ದೇಶದಲ್ಲಿ ಕೋವಿಡ್ ಹರಡಲು ಕಾರಣವಾಗಿತ್ತು ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಿಷೇಧಿಸುವಂತೆ ಮಹಾರಾಷ್ಟ್ರ ಸರಕಾರವು ಕೇಳಿಕೊಂಡಿತ್ತು. ಆಗಿನ ನಿಮ್ಮದೇ (ಮೋದಿ) ಆರೋಗ್ಯ ಸಚಿವ ಡಾ.ಹರ್ಷವರ್ಧನ್ಅವರು ಕೋವಿಡ್ ಸೋಂಕು ಹರಡುವುದಿಲ್ಲ ಎಂದು ಒತ್ತಿ ಹೇಳಿದ್ದರು ಎಂದು ಹೇಳಿದ ಎನ್ಸಿಪಿ ಮುಖ್ಯವಕ್ತಾರರೂ ಆಗಿರುವ ಮಲಿಕ್,ಮೋದಿ ‘ನಮಸ್ತೆ ಟ್ರಂಪ್ ’ ಕಾರ್ಯಕ್ರಮಕ್ಕೆ ವಿಶ್ವಾದ್ಯಂತದ ಜನರನ್ನು ಭಾರತಕ್ಕೆ ಆಹ್ವಾನಿಸಿದ್ದರು ಮತ್ತು ಆ ಕಾರ್ಯಕ್ರಮವು ದೇಶದ ಎಲ್ಲ ಭಾಗಗಳಲ್ಲಿ ಕೋವಿಡ್ ಸೋಂಕನ್ನು ಹರಡಿತ್ತು ಎಂದರು.

ದೇಶದಲ್ಲಿ ಕೋವಿಡ್ ಹರಡುವಿಕೆಗೆ ಪ್ರಧಾನಿ ಮೋದಿಯವರೇ ಹೊಣೆಯಾಗಿದ್ದಾರೆ ಎಂದು ಅವರು ಆರೋಪಿಸಿದರು.

‘ವಲಸೆ ಕಾರ್ಮಿಕರಿಗೆ ನಾವು ಟಿಕೆಟ್ ಹಣವನ್ನು ಕೊಟ್ಟಿದ್ದೆವು ಎಂದು ನೀವು (ಮೋದಿ) ಹೇಳಿದ್ದೀರಿ. ಅದು ನಿಜ,ಆದರೆ ನೀವು ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದ್ದಿರಿ ಮತ್ತು ನಾವು ಟಿಕೆಟ್ಗಳಿಗೆ ಹಣ ನೀಡಿದ್ದೆವು. ನೀವು ವಲಸೆ ಕಾರ್ಮಿಕರಿಂದ ಹಣವನ್ನು ಸಂಗ್ರಹಿಸಲು ಬಯಸಿದ್ದೀರಿ,ಹೀಗಾಗಿ ನಾವು ಬಡ ಕಾರ್ಮಿಕರ ರೈಲ್ವೆ ಟಿಕೆಟ್ಗಳ ಖರ್ಚನ್ನು ಭರಿಸಿದ್ದೆವು ’ಎಂದು ನವಾಬ್ ಹೇಳಿದರು.

ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರು ಮನೆ ತಲುಪುವಂತಾಗಲು ಉ.ಪ್ರದೇಶ ಸರಕಾರವು ಮೊದಲ ಬಾರಿಗೆ ಬಸ್ಗಳ ವ್ಯವಸ್ಥೆಯನ್ನು ಮಾಡಿತ್ತು. ಬಿಹಾರ ಸರಕಾರವು ಕೂಡ ಈ ಕೆಲಸವನ್ನು ಮಾಡಿತ್ತು. ಲಾಕ್ಡೌನ್ ಹೇರಿದಾಗ ನೀವು ತಟ್ಟೆಗಳನ್ನು ಬಡಿಯುವಂತೆ ಜನರಿಗೆ ಸೂಚಿಸಿದ್ದೀರಿ ಎಂದು ಬೆಟ್ಟು ಮಾಡಿದ ಮಲಿಕ್,‘ತನ್ನ ನಿರ್ಧಾರದ ಪರಿಣಾಮಗಳ ಬಗ್ಗೆ ಯೋಚಿಸದೆ ಮೋದಿ ಲಾಕ್ಡೌನ್ ಘೋಷಿಸಿದ್ದರು ಮತ್ತು ಈ ನಿರ್ಧಾರದಿಂದಾಗಿ ಕೋಟ್ಯಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಮಹಾರಾಷ್ಟ್ರ ಸರಕಾರವು ವಲಸೆ ಕಾರ್ಮಿಕರಿಗೆ ಆಹಾರ,ಕುಡಿಯುವ ನೀರು ಒದಗಿಸುವ ಜೊತೆಗೆ ಅವರ ಟಿಕೆಟ್ಗಳಿಗೂ ಹಣ ಪಾವತಿಸಿತ್ತು. ನೀವೇನೂ ಉಚಿತವಾಗಿ ರೈಲು ಸೇವೆಯನ್ನು ಒದಗಿಸಿರಲಿಲ್ಲ. ವಲಸೆ ಕಾರ್ಮಿಕರು ತಮ್ಮ ಊರುಗಳನ್ನು ಸೇರುವಂತಾಗಲು ನಾವು ವಿಶೇಷ ಬಸ್ ಗಳನ್ನೂ  ಓಡಿಸಿದ್ದೆವು. ವಲಸೆ ಕಾರ್ಮಿಕರ ಬೆನ್ನಿಗೆ ನಿಂತಿದ್ದು ನಾವೇ ಆಗಿದ್ದೆವು ’ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X