Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸಾವರ್ಕರ್ ಕವಿತೆ ಓದಿರುವುದಕ್ಕೆ ಲತಾ...

"ಸಾವರ್ಕರ್ ಕವಿತೆ ಓದಿರುವುದಕ್ಕೆ ಲತಾ ಮಂಗೇಶ್ಕರ್ ಸಹೋದರನನ್ನು ಎಐಆರ್ ನಿಂದ ವಜಾಗೊಳಿಸಲಾಗಿತ್ತು"

ಕಾಂಗ್ರೆಸ್ ಗೆ ಮೋದಿ ತರಾಟೆ

ವಾರ್ತಾಭಾರತಿವಾರ್ತಾಭಾರತಿ8 Feb 2022 11:00 PM IST
share
ಸಾವರ್ಕರ್ ಕವಿತೆ ಓದಿರುವುದಕ್ಕೆ ಲತಾ ಮಂಗೇಶ್ಕರ್ ಸಹೋದರನನ್ನು ಎಐಆರ್ ನಿಂದ ವಜಾಗೊಳಿಸಲಾಗಿತ್ತು

 ಹೊಸದಿಲ್ಲಿ, ಫೆ. 8: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದ ವಂದನಾ ನಿರ್ಣಯಕ್ಕೆ ತನ್ನ ಪ್ರತಿಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾವರ್ಕರ್ ಅವರ ಕವಿತೆಯನ್ನು ಆಲ್ ಇಂಡಿಯಾ ರೇಡಿಯೊದಲ್ಲಿ ಓದಿದ ಲತಾ ಮಂಗೇಶ್ಕರ್ ಅವರ ಸಹೋದರನನ್ನು ಕಾಂಗ್ರೆಸ್ ಸರಕಾರ ಹೇಗೆ ವಜಾಗೊಳಿಸಿತು ಎಂಬುದನ್ನು ನಾನು ನಿಮಗೆ ನೆನಪಿಸಲು ಬಯಸುತ್ತೇನೆ ಎಂದು ಪ್ರಧಾನಿ ಅವರು ಹೇಳಿದರು. 

‘‘ವ್ಯಕ್ತಿ ಸ್ವಾತಂತ್ರದ ಕುರಿತು ಮಾತನಾಡುವವರ ಚರಿತ್ರೆಯನ್ನು ನಾನು ಬಹಿರಂಗಗೊಳಿಸುತ್ತಿದ್ದೇನೆ. ಲತಾ ಮಂಗೇಶ್ಕರ್ ಅವರ ಕುಟುಂಬ ಗೋವಾದಲ್ಲಿ ನೆಲೆಸಿತ್ತು. ಆದರೆ, ಅವರ ಕುಟುಂಬದೊಂದಿಗೆ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಎಂಬುದನ್ನು ದೇಶ ತಿಳಿಯಬೇಕು. ಅವರ ಕಿರಿಯ ಸಹೋದರ ಹೃದಯನಾಥ್ ಮಂಗೇಶ್ಕರ್ ಅವರನ್ನು ಆಲ್ ಇಂಡಿಯಾ ರೇಡಿಯೊದಿಂದ ವಜಾಗೊಳಿಸಲಾಗಿತ್ತು. ಅವರು ಮಾಡಿದ ತಪ್ಪೆಂದರೆ, ವೀರ ಸಾವರ್ಕರ್ ಅವರ ದೇಶ ಪ್ರೇಮದ ಕವಿತೆಯನ್ನು ಪ್ರಸ್ತುತಪಡಿಸಿರುವುದು’’ ಎಂದು ಪ್ರಧಾನಿ ಅವರು ಸದನದಲ್ಲಿ ಹೇಳಿದರು.

‘‘ಇದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ’’ ಎಂದು ಅವರು ಹೇಳಿದರು. ‘‘ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅನೇಕ ಅನ್ಯಾಯಗಳು ನಡೆದಿವೆ. ಹೃದಯನಾಥ್ ಜಿ ಅವರಿಗೆ ಮಾತ್ರ ಅನ್ಯಾಯ ಆಗಿರುವುದಲ್ಲ. ಈ ಪಟ್ಟಿ ಬಹಳ ದೊಡ್ಡದಿದೆ’’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ‘‘ನೆಹರೂ ಅವರನ್ನು ಟೀಕಿಸಿರುವುದಕ್ಕೆ ಮಜ್ರೂಹ ಸುಲ್ತಾನಪುರಿ ಹಾಗೂ ಪಾಧ್ಯಾಪಕ ಧರ್ಮಪಾಲ್ ಅವರನ್ನು ಜೈಲಿಗೆ ತಳ್ಳಲಾಯಿತು. ತುರ್ತು ಪರಿಸ್ಥಿತಿ ಸಂದರ್ಭ ಕಿಶೋರ್ ಕುಮಾರ್ ಅವರು ಇಂದಿರಾ ಗಾಂಧಿ ಅವರಿಗೆ ತಲೆ ಬಾಗಿಲ್ಲ. ಅವರಿಗೆ ರೇಡಿಯೊಲ್ಲಿ ಹಾಡಲು ನಿಷೇಧ ಹೇರಲಾಯಿತು ಎಂದು ಅವರು ತಿಳಿಸಿದರು. ಇಂದಿರಾ ಗಾಂಧಿ ಕುಟುಂಬದ ನಿಲುವನ್ನು ಒಪ್ಪಿಕೊಳ್ಳದ ಜನರ ಅಭಿವ್ಯಕ್ತಿ ಸ್ವಾತಂತ್ರವನ್ನು ಹೇಗೆ ನಿಯಂತ್ರಿಸಲಾಯಿತು ಎಂಬುದನ್ನು ನಾವು ನೋಡಿದ್ದೇವೆ ಎಂದು ಮೋದಿ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X