Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚರ್ಚ್ ಗಳಲ್ಲಿ ಲೈಂಗಿಕ ದೌರ್ಜನ್ಯ ಹಗರಣ:...

ಚರ್ಚ್ ಗಳಲ್ಲಿ ಲೈಂಗಿಕ ದೌರ್ಜನ್ಯ ಹಗರಣ: ಕ್ಷಮೆ ನೀಡಲು ಮಾಜಿ ಪೋಪ್ ಬೆನೆಡಿಕ್ಟ್ ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2022 12:16 AM IST
share

ವ್ಯಾಟಿಕನ್ ಸಿಟಿ, ಫೆ.8: ತಾನು ಪೋಪ್ ಆಗಿದ್ದಾಗ ಚರ್ಚ್ ಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿದ್ದ ನಿಂದನೆ ಪ್ರಕರಣಗಳ ಹಗರಣಕ್ಕೆ ಸಂಬಂಧಿಸಿ ತನಗೆ ಕ್ಷಮೆ ನೀಡಬೇಕು ಎಂದು ಕೋರಿರುವ ಮಾಜಿ ಪೋಪ್ ಬೆನೆಡಿಕ್ಟ್, ಆದರೆ ಮ್ಯೂನಿಚ್ನ ಆರ್ಚ್ ಬಿಷಪ್ ಆಗಿದ್ದ ಸಂದರ್ಭ ಇಂತಹ ಪ್ರಕರಣಗಳನ್ನು ತಾನು ಮುಚ್ಚಿಹಾಕಲು ಪ್ರಯತ್ನಿಸಿದ್ದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

 ಲೈಂಗಿಕ ದೌರ್ಜನ್ಯದ ಎಲ್ಲಾ ಸಂತ್ರಸ್ತರಿಗೆ ನನ್ನ ಹೃದಯಾಂತರಾಳದ ದುಃಖ ಮತ್ತು ಕ್ಷಮಿಸಿಬಿಡುವಂತೆ ಹೃತ್ಪೂರ್ವಕ ಕೋರಿಕೆ ಮಾತ್ರ ಮಾಡಬಲ್ಲೆ ಎಂದು 94 ವರ್ಷದ ಮಾಜಿ ಪೋಪ್ ಹೇಳಿದ್ದಾರೆ. 1980ರಲ್ಲಿ ಚರ್ಚ್ ಗಳಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಆಗ ಪೋಪ್ ಆಗಿದ್ದ ಬೆನೆಡಿಕ್ಟ್ ನಿರ್ವಹಿಸಿದ ರೀತಿಯ ಬಗ್ಗೆ ಜರ್ಮನ್‌ ನ ತನಿಖಾ ಸಂಸ್ಥೆ ಕಳೆದ ತಿಂಗಳು ನಡೆಸಿದ ವಿಚಾರಣೆ ಸಂದರ್ಭ ಬೆನೆಡಿಕ್ಟ್ ಈ ಹೇಳಿಕೆ ನೀಡಿದ್ದಾರೆ. ನನಗೆ ಕ್ಯಾಥೊಲಿಕ್ ಚರ್ಚ್ ಗಳಲ್ಲಿ ಉನ್ನತ ಜವಾಬ್ದಾರಿಯಿತ್ತು. ನನ್ನ ಅಧಿಕಾರಾವಧಿಯಲ್ಲಿ ವಿವಿಧೆಡೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ತಪ್ಪುಗಳಿಗಾಗಿ ನನಗೆ ಇದಕ್ಕಿಂತ ಹೆಚ್ಚಿನ ನೋವಿದೆ ಎಂದವರು ಹೇಳಿದ್ದಾರೆ.
 1980ರಲ್ಲಿ ಮ್ಯೂನಿಚ್ನ ಆರ್ಚ್ ಬಿಷಪ್ ಆಗಿದ್ದ ಸಂದರ್ಭದಲ್ಲಿ , 4 ಪಾದ್ರಿಗಳು ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಮಾಹಿತಿ ಇದ್ದರೂ ಅದನ್ನು ತಡೆಯಲು ವಿಫಲವಾದ ಆರೋಪ ಬೆನೆಡಿಕ್ಟ್ ಮೇಲಿದೆ. 2013ರಲ್ಲಿ ಅವರು ಪೋಪ್ ಹುದ್ದೆಯಿಂದ ನಿರ್ಗಮಿಸಿದ್ದರು. ಈಗ ವೃದ್ಧಾಪ್ಯದ ಅನಾರೋಗ್ಯದಿಂದ ಬಳಲುತ್ತಿರುವ ಬೆನೆಡಿಕ್ಟ್ ಅವರಿಗೆ ವಿಚಾರಣಾ ಸಮಿತಿಯ ಎದುರು ಹಾಜರಾಗಲು ಸಹಾಯಕರ ತಂಡವನ್ನು ಒದಗಿಸಲಾಗಿದೆ. ಆರ್ಚ್ ಬಿಷಪ್ ಆಗಿದ್ದ ಬೆನೆಡಿಕ್ಟ್ ಅವರು ಲೈಂಗಿಕ ದೌರ್ಜನ್ಯ ಹಗರಣ ಮುಚ್ಚಿಹಾಕುವ ಯಾವುದೇ ಪ್ರಯತ್ನ ನಡೆಸಿಲ್ಲ ಅಥವಾ ಇಂತಹ ಕೃತ್ಯದಲ್ಲಿ ಶಾಮೀಲಾಗಿಲ್ಲ ಎಂಬ ಹೇಳಿಕೆಯನ್ನು ಸಹಾಯಕರ ತಂಡ ಓದಿ ಹೇಳಿತು.
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿದ್ದ ಪಾದ್ರಿ ಪೀಟರ್ ಹಲ್ಲರ್ಮನ್ ಅವರನ್ನು ಎಸ್ಸೆನ್ ನಗರದಿಂದ ಮ್ಯೂನಿಚ್ನ ಚರ್ಚ್‌ಗೆ ವರ್ಗಾವಣೆಗೊಳಿಸಿ ಮತ್ತೆ ಧರ್ಮಗುರುಗಳ ಹುದ್ದೆ ನೀಡಿದ ಪ್ರಕರಣದ ಬಗ್ಗೆ ವಿವರಣೆ ನೀಡಿದ ಬೆನೆಡಿಕ್ಟ್, ತಾನು ಪಾಲ್ಗೊಂಡಿದ್ದ ಸಭೆಯಲ್ಲಿ ಹಲ್ಲರ್ಮನ್ ಅವರನ್ನು ಧರ್ಮಗುರು ಆಗಿ ಮರು ನಿಯೋಜಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ ಎಂದರು.
 ಲೈಂಗಿಕ ಹಗರಣಗಳ ತನಿಖೆ ನಡೆಸಿದ ಯಾವುದೇ ಸಮಿತಿಯೂ ಬೆನೆಡಿಕ್ಟ್ ಅವರು ಪಾದ್ರಿಗಳು ನಡೆಸುವ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದಿದ್ದರು ಅಥವಾ ಈ ಬಗ್ಗೆ ಸಂಶಯ ಹೊಂದಿದ್ದರು ಎಂದು ಉಲ್ಲೇಖಿಸಿಲ್ಲ ಎಂದು ಬೆನೆಡಿಕ್ಟ್ ಅವರ ತಂಡ ಹೇಳಿಕೆ ನಿೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X