Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018-20ರ ನಡುವೆ ನಿರುದ್ಯೋಗ,ಸಾಲದಿಂದಾಗಿ...

2018-20ರ ನಡುವೆ ನಿರುದ್ಯೋಗ,ಸಾಲದಿಂದಾಗಿ 25,000ಕ್ಕೂ ಹೆಚ್ಚು ಭಾರತೀಯರ ಆತ್ಮಹತ್ಯೆ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ9 Feb 2022 8:38 PM IST
share
2018-20ರ ನಡುವೆ ನಿರುದ್ಯೋಗ,ಸಾಲದಿಂದಾಗಿ 25,000ಕ್ಕೂ ಹೆಚ್ಚು ಭಾರತೀಯರ ಆತ್ಮಹತ್ಯೆ: ಕೇಂದ್ರ ಸರಕಾರ

ಹೊಸದಿಲ್ಲಿ,ಫೆ.9: ನಿರುದ್ಯೋಗ ಸಮಸ್ಯೆಯ ಕುರಿತು ಸಂಸತ್ತಿನಲ್ಲಿ ನಡೆಯುತ್ತಿರುವ ಚರ್ಚೆಗಳ ನಡುವೆಯೇ ಕೇಂದ್ರ ಸರಕಾರವು 2018 ಮತ್ತು 2020ರ ನಡುವಿನ ಅವಧಿಯಲ್ಲಿ ದೇಶದಲ್ಲಿ 25,000ಕ್ಕೂ ಅಧಿಕ ಜನರು ನಿರುದ್ಯೋಗ ಮತ್ತು ಸಾಲದ ಹೊರೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ. ಈ ಅವಧಿಯಲ್ಲಿ ನಿರುದ್ಯೋಗದಿಂದಾಗಿ 9,140 ಮತ್ತು ದಿವಾಳಿತನ ಅಥವಾ ಋಣಭಾರದಿಂದಾಗಿ 16,091 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಈ ವಿಷಯ ಕುರಿತು ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ಒದಗಿಸಿರುವ ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು,ಸರಕಾರದ ಅಂಕಿಅಂಶಗಳು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ (ಎನ್ಸಿಆರ್ಬಿ)ದ ದತ್ತಾಂಶಗಳನ್ನು ಆಧರಿಸಿವೆ ಎಂದು ತಿಳಿಸಿದರು.

ಎನ್ಸಿಆರ್ಬಿ ದತ್ತಾಂಶಗಳಂತೆ ನಿರುದ್ಯೋಗಿಗಳ ಆತ್ಮಹತ್ಯೆಗಳು ಹೆಚ್ಚುತ್ತಿದ್ದು,2020ನೇ ಸಾಂಕ್ರಾಮಿಕ ವರ್ಷದಲ್ಲಿ ಗರಿಷ್ಠ (3,548)ವನ್ನು ತಲುಪಿದ್ದವು. 2018ರಲ್ಲಿ 2,741 ಮತ್ತು 2019ರಲ್ಲಿ 2,851 ಜನರು ನಿರುದ್ಯೋಗದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.
2018ರಲ್ಲಿ ದಿವಾಳಿತನದಿಂದಾಗಿ 4,970 ಜನರು ಆತ್ಮಹತ್ಯೆಗೆ ಶರಣಾಗಿದ್ದರೆ,2019ರಲ್ಲಿ ಈ ಸಂಖ್ಯೆ 5,908ಕ್ಕೆ ಏರಿತ್ತು. ಆದರೆ 2020ರಲ್ಲಿ ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 5,213ಕ್ಕೆ ಇಳಿಕೆಯಾಗಿತ್ತು.

ಹಾಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷ ಸಂಸದರು ನಿರುದ್ಯೋಗ ಸಮಸ್ಯೆಯನ್ನು ಹಲವಾರು ಸಲ ಎತ್ತಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ದೇಶವು ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ನಿಭಾಯಿಸಲು ಬಜೆಟ್ನಲ್ಲಿ ಹೆಚ್ಚಿನ ಗಮನವನ್ನು ನೀಡಲಾಗಿಲ್ಲ ಎಂದು ಈ ಸಂಸದರು ಆರೋಪಿಸಿದ್ದಾರೆ.
ಮಾನಸಿಕ ಆರೋಗ್ಯದ ಮೇಲೆ ಗಮನವನ್ನು ಕೇಂದ್ರೀಕರಿಸುವ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಲು ಸರಕಾರವು ಪ್ರಯತ್ನಿಸುತ್ತಿದೆ ಎಂದು ಹೇಳಿದ ರಾಯ್, ಮಾನಸಿಕ ಅಸ್ವಸ್ಥತೆಗಳ ಹೊರೆಯನ್ನು ತಗ್ಗಿಸಲು ಸರಕಾರವು ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ ಮತ್ತು ಕಾರ್ಯಕ್ರಮದಡಿ ದೇಶದ 692 ಜಿಲ್ಲೆಗಳಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಜಾರಿಯನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದರು.

ಆತ್ಮಹತ್ಯೆಗಳನ್ನು ತಡೆಯುವ ಸೇವೆಗಳು,ಕೆಲಸದ ಸ್ಥಳಗಳಲ್ಲಿಯ ಒತ್ತಡದ ನಿರ್ವಹಣೆ,ಜೀವನ ಕೌಶಲ್ಯ ತರಬೇತಿ,ಶಾಲಾಕಾಲೇಜುಗಳಲ್ಲಿ ಆಪ್ತ ಸಮಾಲೋಚನೆಗಳನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಸರಕಾರವು ಉದ್ಯೋಗ ಮತ್ತು ಆದಾಯ ಸೃಷ್ಟಿಗಾಗಿ ಆತ್ಮನಿರ್ಭರ ಭಾರತ ರೋಜಗಾರ್ ಯೋಜನೆ, ಪ್ರಧಾನ ಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮ, ನರೇಗಾ, ಪಂ.ದೀನದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇತ್ಯಾದಿಗಳ ಮೂಲಕ ಹಲವಾರು ಕಾರ್ಯಕ್ರಮಗಳನ್ನು ಆರಂಭಿಸಿದೆ ಎಂದು ತಿಳಿಸಿದ ರಾಯ್,ಮೇಕ್ ಇನ್ ಇಂಡಿಯಾ,ಡಿಜಿಟಲ್ ಇಂಡಿಯಾ,ಸ್ವಚ್ಛ ಭಾರತ ಅಭಿಯಾನ, ಸ್ಮಾರ್ಟ್ ಸಿಟಿ ಅಭಿಯಾನ,ಎಲ್ಲರಿಗೂ ವಸತಿ,ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ಕಾರಿಡಾರ್ಗಳಂತಹ ಸರಕಾರದ ಮುಂಚೂಣಿ ಕಾರ್ಯಕ್ರಮಗಳು ಉತ್ಪಾದಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ತಿಳಿಸಿದರು.
ಭಾರತದ ತಯಾರಿಕೆ ಸಾಮರ್ಥ್ಯಗಳು ಮತ್ತು ರಫ್ತುಗಳನ್ನು ಹೆಚ್ಚಿಸಲು ಪ್ರಮುಖ ಕ್ಷೇತ್ರಗಳಲ್ಲಿ ಉತ್ಪಾದನೆ ಆಧಾರಿತ ಪ್ರೋತ್ಸಾಹನಗಳು ಸಹ ಉದ್ಯೋಗಾವಕಾಶಗಳು ಸೃಷ್ಟಿಸುತ್ತವೆ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X