Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐದು ವರ್ಷಗಳಲ್ಲಿ 4,844 ವಿದೇಶಿಯರಿಗೆ...

ಐದು ವರ್ಷಗಳಲ್ಲಿ 4,844 ವಿದೇಶಿಯರಿಗೆ ಭಾರತೀಯ ಪೌರತ್ವ ಮಂಜೂರು: ಕೇಂದ್ರ ‌

ಒಂದು ವರ್ಷದ ಅಂತರದಲ್ಲಿ ಮೂರು ಪಟ್ಟು ಏರಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2022 8:44 PM IST
share
ಐದು ವರ್ಷಗಳಲ್ಲಿ 4,844 ವಿದೇಶಿಯರಿಗೆ ಭಾರತೀಯ ಪೌರತ್ವ ಮಂಜೂರು: ಕೇಂದ್ರ ‌

ಹೊಸದಿಲ್ಲಿ,ಫೆ.9: ಕಳೆದ ಐದು ವರ್ಷಗಳಲ್ಲಿ 4,844 ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಮಂಜೂರು ಮಾಡಲಾಗಿದೆ ಎಂದು ಸರಕಾರವು ಲೋಕಸಭೆಯಲ್ಲಿ ತಿಳಿಸಿದೆ. 2020ಕ್ಕೆ ಹೋಲಿಸಿದರೆ 2021ರಲ್ಲಿ ಮೂರು ಪಟ್ಟು ಭಾರತೀಯ ಪೌರತ್ವಗಳನ್ನು ಮಂಜೂರು ಮಾಡಲಾಗಿದೆ ಎಂದೂ ಅದು ತಿಳಿಸಿದೆ.

ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು ಪ್ರಶ್ನೆಯೊಂದಕ್ಕೆ ನೀಡಿರುವ ಉತ್ತರದಲ್ಲಿಯ ಅಂಕಿಅಂಶಗಳಂತೆ 2017ರಲ್ಲಿ 817,2018ರಲ್ಲಿ 628,2019ರಲ್ಲಿ 987,2020ರಲ್ಲಿ 639 ಮತ್ತು 2021ರಲ್ಲಿ 1,773 ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಮಂಜೂರು ಮಾಡಲಾಗಿದೆ.
ಭಾರತೀಯ ಪೌರತ್ವವು 1955ರ ಪೌರತ್ವ ಕಾಯ್ದೆಯ ನಿಬಂಧನೆಗಳಿಗೆ ಒಳಪಟ್ಟಿದೆ.
ಪೌರತ್ವ ಕಾಯ್ದೆ 1955ರ ಕಲಂ 5ರಡಿ ನೋಂದಣಿ,ಕಲಂ 6ರಡಿ ದೇಶಿಕರಣ ಅಥವಾ ಕಲಂ 7ರಡಿ ಪ್ರದೇಶ ಸೇರ್ಪಡೆ ಮೂಲಕ ಅರ್ಹ ವಿದೇಶಿಯರಿಗೆ ಪೌರತ್ವವನ್ನು ಮಂಜೂರು ಮಾಡಲಾಗುತ್ತದೆ. ಪೌರತ್ವ ಕಾಯ್ದೆ 1955ರ ನಿಬಂಧನೆಗಳು ಮತ್ತು ಅದರಡಿಯಲ್ಲಿ ರಚಿಸಲಾಗಿರುವ ನಿಯಮಗಳಿಗೆ ಒಳಪಟ್ಟು ಭಾರತೀಯ ಪೌರತ್ವವನ್ನು ಪಡೆಯಲು ಕಾರಣಗಳು ಪ್ರತಿ ಅರ್ಜಿದಾರರ ನಿರ್ದಿಷ್ಟ ಸಂದರ್ಭಗಳಿಗೆ ತಕ್ಕಂತೆ ಭಿನ್ನವಾಗಿರುತ್ತವೆ ಎಂದು ರಾಯ್ ಉತ್ತರದಲ್ಲಿ ತಿಳಿಸಿದರು.
 ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಗೆ ನಿಯಮಗಳನ್ನು ಇನ್ನೂ ರೂಪಿಸಬೇಕಿದ್ದರೂ,ಈ ಹಿಂದೆ ಸಂಸತ್ತಿನಲ್ಲಿ ಮಂಡಿಸಲಾಗಿದ್ದ ಸರಕಾರಿ ದತ್ತಾಂಶಗಳಂತೆ 2018ರಿಂದ ಭಾರತೀಯ ಪೌರತ್ವವನ್ನು ಪಡೆದುಕೊಂಡವರಲ್ಲಿ ಪಾಕಿಸ್ತಾನ,ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಹಾಗೂ ಹಿಂದು, ಸಿಖ್, ಜೈನ್ ಮತ್ತು ಕ್ರೈಸ್ತ ಧರ್ಮಗಳಿಗೆ ಸೇರಿದವರಾಗಿದ್ದಾರೆ. ಈ ಮೂರು ರಾಷ್ಟ್ರಗಳಲ್ಲಿಯ ಈ ಸಮುದಾಯಗಳಿಗೆ ಸೇರಿದ 8,244 ಜನರು ಭಾರತೀಯ ಪೌರತ್ವವನ್ನು ಕೋರಿ ಅರ್ಜಿ ಸಲ್ಲಿಸಿದ್ದರು ಮತ್ತು ಡಿಸೆಂಬರ್ 2021ರವರೆಗೆ 3,117 ಜನರಿಗೆ ಪೌರತ್ವ ಮಂಜೂರು ಮಾಡಲಾಗಿದೆ ಎಂದು ರಾಯ್ ತಿಳಿಸಿದರು.
ಈ ಮೊದಲು ಭಾರತೀಯ ಪೌರತ್ವವನ್ನು ಪಡೆದುಕೊಂಡಿರುವವರ ಒಟ್ಟು ಸಂಖ್ಯೆಯ ಕುರಿತು ಪ್ರಶ್ನೆಗೆ ರಾಯ್,2016 ಮತ್ತು 2020ರ ನಡುವೆ 4,177 ಜನರಿಗೆ ಭಾರತೀಯ ಪೌರತ್ವವನ್ನು ಮಂಜೂರು ಮಾಡಲಾಗಿದೆ. ಈ ಪೈಕಿ 2018ರಲ್ಲಿ 628,2019ರಲ್ಲಿ 987 ಮತ್ತು 2020ರಲ್ಲಿ 639 ಭಾರತೀಯ ಪೌರತ್ವಗಳನ್ನು ಮಂಜೂರು ಮಾಡಲಾಗಿತ್ತು ಎಂದು ಉತ್ತರಿಸಿದರು.

ಕಳೆದ ವರ್ಷದ ಡಿ.14ಕ್ಕೆ ಇದ್ದಂತೆ ಸರಕಾರದ ಬಳಿ ಭಾರತೀಯ ಪೌರತ್ವವನ್ನು ಕೋರಿ 10,635 ಅರ್ಜಿಗಳು ಬಾಕಿಯಿವೆ. ಈ ಪೈಕಿ 7,306 ಜನರು ಪಾಕಿಸ್ತಾನಕ್ಕೆ,1,152 ಅಫ್ಘಾನಿಸ್ತಾನಕ್ಕೆ ಮತ್ತು 161 ಬಾಂಗ್ಲಾದೇಶಕ್ಕೆ ಸೇರಿದವರಾಗಿದ್ದಾರೆ. ರಾಷ್ಟ್ರರಹಿತ ಜನರ ಒಟ್ಟು 428 ಅರ್ಜಿಗಳೂ ಬಾಕಿಯಿವೆ ಎಂದರು. 2019ರಲ್ಲಿ ಸಿಎಎ ಅಂಗೀಕಾರದ ಬಳಿಕ ಮಾಧ್ಯಮ ಸಂದರ್ಶನವೊಂದರಲ್ಲಿ ಗೃಹಸಚಿವ ಅಮಿತ್ ಶಾ ಅವರು,2014ರಿಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳ ಸುಮಾರು 600 ಮುಸ್ಲಿಮರಿಗೆ ಭಾರತೀಯ ಪೌರತ್ವ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X