Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಜಾಬ್ ವಿವಾದ: ಬಿಜೆಪಿಯನ್ನು ತರಾಟೆಗೆ...

ಹಿಜಾಬ್ ವಿವಾದ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮಹಾರಾಷ್ಟ್ರ ಸಚಿವ

ವಾರ್ತಾಭಾರತಿವಾರ್ತಾಭಾರತಿ10 Feb 2022 2:07 AM IST
share
ಹಿಜಾಬ್ ವಿವಾದ: ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಮಹಾರಾಷ್ಟ್ರ ಸಚಿವ

ಮುಂಬೈ: ನೆರೆಯ ಕರ್ನಾಟಕದಲ್ಲಿ ಭುಗಿಲೆದ್ದ ಹಿಜಾಬ್ ವಿವಾದದ ನಡುವೆ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್ ಮಲ್ಲಿಕ್, ದೇಶದಲ್ಲಿ ಓರ್ವ ಏನನ್ನು ತಿನ್ನಬೇಕು ಹಾಗೂ ಏನನ್ನು ಧರಿಸಬೇಕು ಎಂದು ಸಂಘ ಪರಿವಾರ ಹಾಗೂ ಬಿಜೆಪಿ ನಿರ್ಧರಿಸುತ್ತಿದೆಯೇ ಎಂದು ಬುಧವಾರ ಪ್ರಶ್ನಿಸಿದ್ದಾರೆ. ಅಲ್ಲದೆ, ಇದು ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದಿದ್ದಾರೆ.

‘‘ದೇಶದಲ್ಲಿ ಏನನ್ನು ತಿನ್ನಬೇಕು ಹಾಗೂ ಏನನ್ನು ಧರಿಸಬೇಕು ಎಂದು ಬಿಜೆಪಿ ಹಾಗೂ ಸಂಘ ಪರಿವಾರ ನಿರ್ಧರಿಸುತ್ತಿದೆಯೇ? ಇದು ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ. ಮುಸ್ಲಿಂ ಬಾಲಕಿಯರು ಶಿಕ್ಷಣ ಪಡೆಯಲು ಶಾಲೆ ಹಾಗೂ ಕಾಲೇಜುಗಳಿಗೆ ಹೋಗುತ್ತಿದ್ದಾರೆ. ಇದು ಸಮಸ್ಯೆಯೇ? ಭೇಟಿ ಪಡಾವೊ ಘೋಷಣೆ ಏನಾಯಿತು’’ ಎಂದು ಮಲ್ಲಿಕ್ ಅವರು ಟ್ವಿಟ್ಟರ್‌ನಲ್ಲಿ ಹಿಂದಿಯಲ್ಲಿ ಪ್ರಶ್ನಿಸಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ಅವರು, ಶಿಕ್ಷಣ ಸಂಸ್ಥೆಗಳು ಸಹಿಷ್ಣುತೆ, ಸಮಾನತೆ, ಏಕತೆಯನ್ನು ಕಲಿಸುವ ಕೇಂದ್ರವಾಗಬೇಕು ಎಂದಿದ್ದಾರೆ. ಮುಸ್ಲಿಂ ಮಹಿಳೆಯೋರ್ವರು ತನ್ನ ಹಕ್ಕುಗಳಿಗಾಗಿ ಘೋಷಣೆ ಕೂಗುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

ಈ ಚಿತ್ರವನ್ನು ಪ್ರಭಾವಶಾಲಿ ಎಂದು ಭಾವಿಸಲಾಗಿದೆ. ಯಾಕೆಂದರೆ ಶಿಕ್ಷಣದ ಹಕ್ಕಿಗಾಗಿ ಹಾಗೂ ಬಟ್ಟೆಯ ಆಯ್ಕೆಗಾಗಿ ಸಶಕ್ತೀಕರಣಗೊಂಡ ಮಹಿಳೆ ಹೋರಾಟ ನಡೆಸುತ್ತಿರುವುದನ್ನು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.

‘‘ಬಿಜೆಪಿ ತನ್ನ ಆಯ್ಕೆಯನ್ನು ಹೇರಲು ಪ್ರಯತ್ನಿಸುತ್ತಿದೆ. ಉತ್ತರದಲ್ಲಿ ಪರ್ದಾವನ್ನು ಬಳಸುತ್ತಾರೆ. ಅದನ್ನು ತೆಗೆಯಲು ಸಾಧ್ಯವೇ? ಇದು ಬಹುಸಂಖ್ಯಾತರ ರಾಜಕೀಯ’’ ಎಂದು ನವಾಬ್ ಮಲ್ಲಿಕ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X