Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಜಾಬ್ ವಿವಾದ; ಕಳೆದ ವರ್ಷವೇ ವ್ಯೂಹ...

ಹಿಜಾಬ್ ವಿವಾದ; ಕಳೆದ ವರ್ಷವೇ ವ್ಯೂಹ ರಚನೆ, ಎನ್‌ಐಎ ತನಿಖೆಗೆ ಒತ್ತಾಯ: ಶಾಸಕ ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ11 Feb 2022 7:50 PM IST
share
ಹಿಜಾಬ್ ವಿವಾದ; ಕಳೆದ ವರ್ಷವೇ ವ್ಯೂಹ ರಚನೆ, ಎನ್‌ಐಎ ತನಿಖೆಗೆ ಒತ್ತಾಯ: ಶಾಸಕ ರಘುಪತಿ ಭಟ್

ಉಡುಪಿ, ಫೆ.11: ಹಿಜಾಬ್ ವಿವಾದಕ್ಕೆ ಸಂಬಂಧಿಸಿ 2021 ನವೆಂಬರ್‌ನಲ್ಲಿ ವ್ಯೂಹ ರಚನೆ ಮಾಡಲಾಗಿದೆ. ಎಲ್ಲ ಯೋಜನೆ ಮಾಡಿ ಹೋರಾಟ ಗಲಭೆ ಎಬ್ಬಿಸಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಈ ಪ್ರಕರಣ ವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿಯಲ್ಲಿ ಆರಂಭವಾದ ವಿವಾದ ಇಡೀ ರಾಷ್ಟ್ರಕ್ಕೆ ವ್ಯಾಪಿಸಿದೆ. ಇದರ ಹಿಂದೆ ಅಂತರಾಷ್ಟ್ರೀಯ ಸಂಚು ಇರುವ ಬಗ್ಗೆ ಗುಮಾನಿ ಇದೆ. ಈ ಬಗ್ಗೆ ಗೃಹಸಚಿವ ಅರಗ ಜ್ಞಾನೆಂದ್ರ ಅವರಿಗೆ ಪತ್ರ ಬರೆದು ದೂರು ನೀಡಲಾಗುವುದು. ಈ ವಿಚಾರದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ತಿಳಿಸಿದರು.

ಹೈದರಾಬಾದ್‌ನಿಂದ ಕೆಲವರು ಇಲ್ಲಿಗೆ ಬಂದು ಮಾಡಲು ಏನಿದೆ. ಹೊರರಾಜ್ಯಗಳಿಂದ ತರಬೇತುದಾರರು ಬಂದಿರುವ ಬಗ್ಗೆ ಮಾಹಿತಿ ಇದೆ. ಉಡುಪಿಗೆ ಹೈದರಾಬಾದ್‌ನಿಂದ ಕೆಲವರು ಬಂದು ಇಲ್ಲಿ ಓಡಾಡಿದ್ದಾರೆ. ರಾಜ್ಯ ಸರಕಾರಕ್ಕೆ ನಾನು ಈಗಾಗಲೇ ಪತ್ರವನ್ನು ಕೊಟ್ಟಿದ್ದೇನೆ. ಹಿಜಾಬ್ ವಿವಾದವನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದೇನೆ ಎಂದರು.

ಉಡುಪಿ ಜಿಲ್ಲೆಯ ಮುಸ್ಲಿಮ್ ಮುಖಂಡರು ನಮ್ಮ ಜೊತೆ ಉತ್ತಮ ಬಾಂಧ್ಯವದಲ್ಲಿ ಇದ್ದಾರೆ. ಜಿಲ್ಲಾ ಮುಸ್ಲಿಂ ಮುಖಂಡರ ಜೊತೆ ಹಲವಾರು ಸಭೆಗಳು ನಡೆದಿವೆ. ಇದರ ಹಿಂದೆ ಒಂದು ಅಂತಾರಾಷ್ಟ್ರೀಯ ಷಡ್ಯಂತ್ರ ಇರೋದು ಗೊತ್ತಾಗಿದೆ, ಈ ಬಗ್ಗೆ ಸಮಗ್ರ ತನಿಖೆ ಆಗಬೇಕಾಗಿದೆ. ಪಿಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಸುಪ್ರೀಂ ಕೋರ್ಟ್ ವಿರುದ್ಧ ಟ್ವೀಟ್ ಮಾಡಿದ್ದಾರೆ. ವಿದ್ಯಾರ್ಥಿನಿಯರು ಇದಕ್ಕೆ ರೀ ಟ್ವೀಟ್ ಮಾಡಿದ್ದಾರೆ. ಹೀಗೆ ಇವರು ಕೂಡ ಸುಪ್ರೀಂ ಕೋರ್ಟ್ ವಿರುದ್ಧವಾಗಿ ಟ್ವೀಟ್ ಮಾಡಿದ್ದಾರೆ. ಅಯೋಧ್ಯೆ ಯಲ್ಲಿ ರಾಮ ಮಂದಿರ ನಿರ್ಮಾಣ ಕಾನೂನು ಬಾಹಿರ ಎಂದು ಬರೆದು ಕೊಂಡಿದ್ದಾರೆ. ಸಿಎಫ್‌ಐ ಪಿಎಫ್‌ಐ ಸಂಘಟನೆ ವಿದ್ಯಾರ್ಥಿಗಳನ್ನು ದಾಳ ಮಾಡಲಾಗಿದೆ. ತುಕಡೆ ಗ್ಯಾಂಗ್ ದೇಶ ಒಡೆಯುವಂತಹ ಗ್ಯಾಂಗ್. ತುಕಡೆ ಗ್ಯಾಂಗ್ ಇಷ್ಟೆಲ್ಲಾ ರಾದ್ಧಾಂತ ಸೃಷ್ಟಿ ಮಾಡಿದೆ ಎಂದು ಅವರು ರಘುಪತಿ ಭಟ್ ಆರೋಪಿಸಿದ್ದಾರೆ.

ಹಿಜಾಬ್ ಹೋರಾಟಕ್ಕೆ ಇಷ್ಟು ದಿನ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಂಬಲ ನೀಡಿತ್ತು. ಪ್ರಕರಣಕ್ಕೆ ಸಿದ್ದರಾಮಯ್ಯ ಎಂಟ್ರಿಯಾಗುವ ಮೂಲಕ ಕಾಂಗ್ರೆಸ್ ಬೆಂಬಲ ನೀಡಿದೆ. ಈಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ.ವಿ.ಶ್ರೀನಿವಾಸ್ ಸುಪ್ರೀಂಕೋರ್ಟಿಗೆ ಹೋಗಿದ್ದಾರೆ. ರಾಜ್ಯದ ಜನಕ್ಕೆ ಕಾಂಗ್ರೆಸ್‌ನ ನಿಲುವು ಏನು ಎಂಬುದು ಗೊತ್ತಾಗಿದೆ. ನಾವು ಹಿಜಾಬ್ ಸಂಪೂರ್ಣ ಬ್ಯಾನ್ ಮಾಡಲು ಮುಂದಾಗಿಲ್ಲ. ತರಗತಿಗೆ ಹಿಜಾಬ್ ಧರಿಸಿ ಬರುವುದು ಬೇಡ ಎಂಬುದು ಮಾತ್ರ ನಮ್ಮ ನಿಲುವು ಎಂದು ರಘುಪತಿ ಭಟ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X