ಉಡುಪಿ ತಾಲೂಕು ಮಟ್ಟದ ಶಿವಲಿಂಗ ಚಿತ್ರಕಲಾ ಸ್ಪರ್ಧೆ
ಉಡುಪಿ, ಫೆ.11: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮಣಿಪಾಲ ಶಾಖೆಯ ವತಿಯಿಂದ ಮಹಾ ಶಿವರಾತ್ರಿಯ ಪ್ರಯುಕ್ತ ಶಾಲಾ ಮಕ್ಕಳಿಗೆ ತಾಲೂಕು ಮಟ್ಟದಲ್ಲಿ ಶಿವಲಿಂಗ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಯು ಒಟ್ಟು ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಶಿವಲಿಂಗದ ರೇಖಾಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಶಿವಲಿಂಗದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯು ಫೆ.19ರ ಶನಿವಾರ ಸಂಜೆ 5 ರಿಂದ 6 ಗಂಟೆಯವರೆಗೆ ನಡೆಯಲಿದೆ.
ಇನ್ನು ಮೂರರಿಂದ ಐದನೇ ತರಗತಿಯ ಮಕ್ಕಳಿಗೆ ಹಾಗೂ ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ‘ಶಿವರಾತ್ರಿ- ಕತ್ತಲ್ಲಿಂದ ಬೆಳಕಿನೆಡೆಗೆ ದಾರಿ ತೋರುವ ಶಿವ ಪರಮಾತ್ಮ’ ಎಂಬ ವಿಷಯದ ಮೇಲೆ ಚಿತ್ರ ರಚನಾ ಸ್ಪರ್ಧೆಯು ಫೆ.20ರ ರವಿವಾರ ಸಂಜೆ 5 ರಿಂದ 6 ಗಂಟೆಯವರೆಗೆ ನಡೆಯಲಿದೆ.
ಸ್ಪರ್ಧೆಯು ಮಣಿಪಾಲ-ಪೆರಂಪಳ್ಳಿ ರಸ್ತೆಯಲ್ಲಿರುವ ಗ್ರೀನ್ ಫಾರ್ಚೂನ್ ಅಪಾರ್ಟ್ಮೆಂಟ್ಸ್ನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಕಚೇರಿಯಲ್ಲಿ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಫೆ.17ರ ಒಳಗೆ ತಮ್ಮ ಹೆಸರನ್ನು ದೂರವಾಣಿ ಮೂಲಕ ನೊಂದಾಯಿಸಿಕೊಳ್ಳಬಹುದು. ಸ್ಪರ್ಧೆಗೆ ಬೇಕಾದ ಪರಿಕರಗಳನ್ನು (ಡ್ರಾಯಿಂಗ್ ಶೀಟ್ ಬಿಟ್ಟು) ಸ್ಪರ್ಧಾಳುಗಳೇ ತರಬೇಕು. ವಿಜೇತರಿಗೆ ಆಕರ್ಷಕ ಬಹುಮಾನವಿದೆ. ಸ್ಪರ್ಧೆಗಾಗಿ ಹೆಸರು ನೊಂದಾಯಿಸಲು ಮೊಬೈಲ್ ನಂ.: 9845127034, 9986211034, 9972202019, 9449245020ನ್ನು ಸಂಪರ್ಕಿಸಬಹುದು ಎಂದು ಪ್ರಜಾಪಿತ ಬ್ರಹ್ಮಾಕುಮಾರಿ ಪ್ರಕಟಣೆ ತಿಳಿಸಿದೆ.