ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಖ್ಯಮಂತ್ರಿ ಪುಷ್ಕರ್ ಧಾಮಿ

ಹೊಸದಿಲ್ಲಿ: ಉತ್ತರಾಖಂಡದಲ್ಲಿ ಶೀಘ್ರವೇ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದರಿಂದ ರಾಜ್ಯದ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ದೊರೆಯಲಿವೆ ಎಂದು ಮುಖ್ಯಮಂತ್ರಿ ಪುಷ್ಕರ್ ಎಸ್ ಧಾಮಿ ಹೇಳಿದ್ದಾರೆ.
ಹೊಸ ಬಿಜೆಪಿ ಸರಕಾರ ರಚನೆಯಾದ ತಕ್ಷಣ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸಲಿದೆ ಎಂದು ಅವರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.
ಈ ಏಕರೂಪ ನಾಗರಿಕ ಸಂಹಿತೆಯು ಮದುವೆಗಳು, ವಿಚ್ಛೇದನ, ಭೂಮಿ-ಆಸ್ತಿ ಮತ್ತು ಎಲ್ಲಾ ಜನರಿಗೆ ಅವರ ನಂಬಿಕೆಯನ್ನು ಲೆಕ್ಕಿಸದೆ ಉತ್ತರಾಧಿಕಾರದ ಬಗ್ಗೆ ಒಂದೇ ರೀತಿಯ ಕಾನೂನುಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದರು.
ಕಾನೂನು ಸಾಮಾಜಿಕ ಸಾಮರಸ್ಯವನ್ನು ಹೆಚ್ಚಿಸುತ್ತದೆ, ಮಹಿಳಾ ಸಬಲೀಕರಣವನ್ನು ಬಲಪಡಿಸುತ್ತದೆ ಮತ್ತು "ರಾಜ್ಯದ ಅಸಾಧಾರಣ ಸಾಂಸ್ಕೃತಿಕ-ಆಧ್ಯಾತ್ಮಿಕ ಗುರುತು ಮತ್ತು ಪರಿಸರವನ್ನು" ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಧಾಮಿ ಹೇಳಿದ್ದಾರೆ.
Next Story





