Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಿಜಾಬ್ ವಿಷಯ ನ್ಯಾಯಾಂಗದಲ್ಲಿರುವ...

ಹಿಜಾಬ್ ವಿಷಯ ನ್ಯಾಯಾಂಗದಲ್ಲಿರುವ ಹಿನ್ನೆಲೆಯಲ್ಲಿ ಅನಗತ್ಯ ಚರ್ಚೆ ಬೇಡ : ವಿಶ್ವೇಶ್ವರ ಹೆಗಡೆ ಕಾಗೇರಿ

ವಾರ್ತಾಭಾರತಿವಾರ್ತಾಭಾರತಿ12 Feb 2022 4:07 PM IST
share
ಹಿಜಾಬ್ ವಿಷಯ ನ್ಯಾಯಾಂಗದಲ್ಲಿರುವ ಹಿನ್ನೆಲೆಯಲ್ಲಿ ಅನಗತ್ಯ ಚರ್ಚೆ ಬೇಡ : ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು : ಹಿಜಾಬ್ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.

ವಿಧಾನ ಮಂಡಲದ ಸಮಿತಿ ಕೊಠಡಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಧರ್ಮದಂತಹ ಸೂಕ್ಷ್ಮ ವಿಚಾರಗಳ ಕುರಿತು ವಾದ-ವಿವಾದಗಳು ನಡೆದಾಗ ಸಂದರ್ಭದ ದುರುಪಯೋಗ ಮಾಡಿಕೊಳ್ಳುವವರು ಹಾಗೂ ದುರ್ಲಾಭ ಪಡೆಯುವವರು ಇರುತ್ತಾರೆ ಎಂಬ ಬಗ್ಗೆ ಎಚ್ಚರ ಮತ್ತು ಜಾಗೃತಿ ನಮ್ಮಲ್ಲಿ ಇರಬೇಕು. ನ್ಯಾಯಾಂಗದ ವ್ಯವಸ್ಥೆಯಲ್ಲಿ ಗೌರವವಿಟ್ಟು ನ್ಯಾಯಾಲಯದ ತೀರ್ಪ ಹೊರ ಹೊಮ್ಮುವವರೆಗೂ ತಾಳ್ಮೆ ಮತ್ತು ಸಂಯಮ ಕಾಯ್ದುಕೊಳ್ಳುವುದು ರಾಜ್ಯದ ಹಾಗೂ ರಾಷ್ಟ್ರದ ದೃಷ್ಠಿಯಿಂದ ಒಳಿತು ಎಂದು ಅವರು ಹಿತ ನುಡಿದರು.

ಫೆಬ್ರವರಿ 14 ರಂದು ಜಂಟಿ ಅಧಿವೇಶನ : ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ 

ರಾಜ್ಯದ 15 ನೇ ವಿಧಾನ ಸಭೆಯ 12 ನೇ ಅಧಿವೇಶನವು  ಫೆಬ್ರವರಿ 14 ರಿಂದ 25 ರವರೆಗೆ ಬೆಂಗಳೂರಿನ ವಿಧಾನ ಸೌಧದ ವಿಧಾನ ಸಭಾ ಸಭಾಂಗಣದಲ್ಲಿ ನಡೆಯಲಿದೆ. ಅಲ್ಲದೆ, ಸಂಪ್ರದಾಯದಂತೆ ವರ್ಷದ ಈ ಮೊದಲ ಅಧಿವೇಶನದ ಸಂದರ್ಭದಲ್ಲಿ ಫೆಬ್ರವರಿ 14 ರಂದು ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂದು ಸಭಾಧ್ಯಕ್ಷರು ಪ್ರಕಟಿಸಿದರು.

ರಾಜ್ಯಪಾಲರ ಭಾಷಣದ ನಂತರ ಮತ್ತೆ ಸದನವು ಸಮಾವೇಶಗೊಂಡು ಕಳೆದ ಅಧಿವೇಶನದ ನಂತರ ಹಾಗೂ ಪ್ರಸಕ್ತ ಅಧಿವೇಶನದ ಅವಧಿಯಲ್ಲಿ ಮೃತರಾದ ಸದನದ ಸದಸ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಗಣ್ಯರಿಗೆ ಸಂತಾಪ ಸೂಚಿಸಲಿದೆ. ಮರುದಿನದಿಂದ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ಚರ್ಚೆ ಸರ್ಕಾರದ ಉತ್ತರ ಮತ್ತು  ವಂದನಾ ನಿರ್ಣಯದ ಅಂಗೀಕಾರ, ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆಗಳು, ನಿಯಮ 69ರ ಮೇಲಿನ ಸೂಚನೆಗಳು, ಖಾಸಗಿ ಸದಸ್ಯರ ಕಾರ್ಯಕಲಾಪಗಳನ್ನು ಹಾಗೂ ಇತರೆ ಪ್ರಾಮುಖ್ಯ ವಿಷಯಗಳ ಚರ್ಚೆಗೆ ಎಂದಿನಂತೆ ಅವಕಾಶವಿರುತ್ತದೆ ಎಂದು ಅವರು ಹೇಳಿದರು.

ಪ್ರಶ್ನೆಗಳ ಸ್ವೀಕಾರ : ರಾಜ್ಯ ವಿಧಾನ ಸಭೆಯಲ್ಲಿ ಈ ದಿನದ ವರೆಗೆ 2062 ಪ್ರಶ್ನೆಗಳು ಸ್ವೀಕಾರವಾಗಿವೆ.ಅಲ್ಲದೆ, 81 ಗಮನಸೆಳೆಯುವ ಸೂಚನೆಗಳು ಹಾಗೂ ನಿಯಮ 351 ಅಡಿಯಲ್ಲಿ 31 ಸೂಚನೆಗಳು ಸ್ವೀಕೃತವಾಗಿವೆ.

ಸದನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿಯವನ್ನೊಳಗೊಂಡಂತೆ ಎಲ್ಲಾ ಸಚಿವರು ಹಾಗೂ ಪ್ರತಿಪಕ್ಷದ ಎಲ್ಲಾ ಮುಖಂಡರೂ ಸೇರಿದಂತೆ ಎಲ್ಲಾ ಸದಸ್ಯರೂ ಮುಖಗವಸು ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದೂ ಸೇರಿದಂತೆ ಕೋವಿಡ್ ಶಿಷ್ಠಾಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ವಾಸ್ಥ್ಯ ಕಾಪಾಡುವ ದೃಷ್ಠಿಯಿಂದ  ಈ ನಿಯಮಗಳು ಆಡಳಿತ ಯಂತ್ರಕ್ಕೆ ನೆರವು ಒದಗಿಸುವ ಅಧಿಕಾರಿ ಮತ್ತು ಸಿಬ್ಬಂದಿಗೂ ಹಾಗೂ ಸದನ ಕಲಾಪ ವರದಿ ಮಾಡಲು ಆಗಮಿಸುವ ಮಾಧ್ಯಮದವರಿಗೂ ಅನ್ವಯಿಸುತ್ತದೆ ಎಂದು ಕಾಗೇರಿ ಅವರು ತಿಳಿಸಿದರು.

ವೈಭವೋಪೇತ ಮೆಟ್ಟಿಲುಗಳಿಂದ ರಾಜ್ಯಪಾಲರ ಪ್ರವೇಶ !

ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸುವ ರಾಜ್ಯಪಾಲರು ವಿಧಾನ ಸೌಧದ ಪೂರ್ವದ್ವಾರದ ಆಕರ್ಷಣೆಗಳಲ್ಲೊಂದಾದ ವೈಭವೋಪೇತ ಮೆಟ್ಟಿಲುಗಳ ಮೂಲಕ ವಿಧಾನ ಸಭೆಯ ಸಭಾಂಗಣವನ್ನು ಪ್ರವೇಶಿಸಲಿದ್ದಾರೆ. ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ರಾಜ್ಯಪಾಲರು ಏರುತೇರು (ಲಿಫ್ಟ್) ಮೂಲಕ ಆಗಮಿಸುತ್ತಿದ್ದರು.

ರಾಜ್ಯ ವಿಧಾನ ಪರಿಷತ್ ಸಭಾಪತಿಯವರ ಜೊತೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾವು ಭೇಟಿಯಾಗಿ ಈ ಬಗ್ಗೆ ವಿನಂತಿಸಿಕೊಂಡಾಗ ಜಂಟಿ ಅಧಿವೇಶನ ಭಾಷಣ ಮಾಡಲು ವೈಭವೋಪೇತ ಮೆಟ್ಟಿಲುಗಳನ್ನೇರಿ ವಿಧಾನ ಸಭೆಯ ಸಭಾಂಗಣಕ್ಕೆ ಪ್ರವೇಶಿಸಲು ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ ಎಂದು ಸಭಾಧ್ಯಕ್ಷರು ವಿವರಿಸಿದರು.

ಕಲಾಪ ವೀಕ್ಷಣೆಗೆ ಮತ್ತೆ ಸಾರ್ವಜನಿಕರಿಗೆ ಅವಕಾಶ

ಕೋವಿಡ್-19ರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದ್ದ ಸದನ ಕಲಾಪ ವೀಕ್ಷಣೆಗೆ ಮತ್ತೆ ಅವಕಾಶ ಕಲ್ಪಿಸಿರುವುದು ಈ ಬಾರಿಯ ಅಧಿವೇಶನದ ಗಮನಾರ್ಹ ವಿಷಯಗಳಲ್ಲೊಂದಾಗಿದೆ.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ. ಕೆ. ವಿಶಾಲಾಕ್ಷಿ ಅವರೂ ಸೇರಿದಂತೆ ವಿಧಾನ ಸಭಾ ಸಚಿವಾಲಯದ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X