Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್‍ಇಪಿಯಿಂದ ದೇಶದ ಪರಿಪೂರ್ಣ ಸಬಲೀಕರಣ...

ಎನ್‍ಇಪಿಯಿಂದ ದೇಶದ ಪರಿಪೂರ್ಣ ಸಬಲೀಕರಣ ಸಾಧ್ಯ: ಸಚಿವ ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ12 Feb 2022 8:29 PM IST
share
ಎನ್‍ಇಪಿಯಿಂದ ದೇಶದ ಪರಿಪೂರ್ಣ ಸಬಲೀಕರಣ ಸಾಧ್ಯ: ಸಚಿವ ಡಾ.ಅಶ್ವತ್ಥನಾರಾಯಣ

ಕಲಬುರಗಿ, ಫೆ. 12: ಮೂವತ್ತು ನಾಲ್ಕು ವರ್ಷಗಳ ದೀರ್ಘ ಅಂತರದ ನಂತರ ಜಾರಿಗೆ ಬರುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‍ಇಪಿ) ರಾಜ್ಯ ಮತ್ತು ದೇಶದ ಪರಿಪೂರ್ಣ ಸಬಲೀಕರಣದ ಕನಸನ್ನು ನನಸಾಗಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ಇಲ್ಲಿನ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ ಸಂಸ್ಥೆಯ 45ನೆ ವಾರ್ಷಿಕೋತ್ಸವ ಮತ್ತು 115 ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, `ದೇಶವನ್ನು ಸದೃಢವಾಗಿ ಕಟ್ಟುವುದೇನಿದ್ದರೂ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ. ಇದಕ್ಕೆ ಬೇರೆ ಉಪಕ್ರಮ ಸಾಟಿಯಾಗಲಾರವು. ಇದನ್ನು ಮನಗಂಡೇ ಎನ್‍ಇಪಿ ಜಾರಿಗೆ ತರಲಾಗಿದೆ. ಇಂತಹ ಸಂದರ್ಭದಲ್ಲಿ ಇಲ್ಲಿನ ಪ್ರಕಾಶನ ಸಂಸ್ಥೆಯು ಇದಕ್ಕೆ ಅನುಗುಣವಾಗಿ ಪಠ್ಯ ಮತ್ತು ಪರಾಮರ್ಶನಾ ಗ್ರಂಥಗಳನ್ನು ಪ್ರಕಟಿಸುತ್ತಿರುವುದು ಸ್ವಾಗತಾರ್ಹ' ಎಂದು ಅವರು ಪ್ರಶಂಸಿಸಿದರು.

`ಇಂದು ಕಲಿಕೆಯು ಆಧುನಿಕ ತಂತ್ರಜ್ಞಾನವನ್ನು ಆಧರಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಇದನ್ನು ಅಳವಡಿಸಿಕೊಂಡಿದ್ದು, ಯುವಜನರಿಗೆ ಅಗತ್ಯ ಶಿಕ್ಷಣ ಮತ್ತು ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಕನ್ನಡದಂತಹ ಭಾಷೆಗಳಲ್ಲೂ ಇವತ್ತು ಉನ್ನತ ಶಿಕ್ಷಣವನ್ನು ನಿರಾತಂಕವಾಗಿ ಕೊಡಬಹುದಾಗಿದೆ. ಈ ಮೂಲಕ ಕರ್ನಾಟಕವು ಉಜ್ವಲ ಅವಕಾಶಗಳ ರಾಜ್ಯವಾಗಿದೆ' ಎಂದು ಅವರು ನುಡಿದರು.

`ಎನ್‍ಇಪಿ ನೀತಿಯು ಶಿಕ್ಷಣದಲ್ಲಿ ಸ್ವಾತಂತ್ರ್ಯ ಮತ್ತು ಸ್ವಾಯತ್ತತೆಗಳನ್ನು ಮುನ್ನೆಲೆಗೆ ತರುತ್ತಿದೆ. ಇದರಿಂದ ಯುವಜನರು ಉದ್ಯೋಗಕ್ಕೆ ಬೇಕಾದ ಅರ್ಹತೆಗಳನ್ನು ಗಳಿಸಿಕೊಳ್ಳುತ್ತಿದ್ದು, ಸಮಾನತೆಯನ್ನು ಆಧರಿಸಿದ ಸಮಾಜವು ಸೃಷ್ಟಿಯಾಗಲಿದೆ. ಗ್ರಾಮಾಂತರ ಭಾಗದ ಮಕ್ಕಳಿಗೆ ಕನ್ನಡದಲ್ಲೇ ಪಠ್ಯ ಸಂಪನ್ಮೂಲಗಳು ಸಿಕ್ಕಿದರೆ ಅವರು ಪ್ರಗತಿ ಸಾಧಿಸುತ್ತಾರೆ. ಆದುದರಿಂದ, ಕನ್ನಡದಲ್ಲೇ ಹೆಚ್ಚಿನ ಪುಸ್ತಕಗಳನ್ನು ಹೊರತರುತ್ತಿರುವುದು ಗಮನಾರ್ಹವಾಗಿದೆ. ಎನ್‍ಇಪಿ ದೇಶಭಾಷೆಗಳ ಸಂವರ್ಧನೆಗೆ ಒತ್ತು ಕೊಡುತ್ತಿದೆ' ಎಂದು ಅಶ್ವತ್ಥನಾರಾಯಣ ನುಡಿದರು.

ಕಾರ್ಯಕ್ರಮದಲ್ಲಿ ಸಿದ್ಧರಾಮಸ್ವಾಮಿ, ಗುಲಬರ್ಗ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ, ಪ್ರೊ.ಎಚ್.ಟಿ.ಪೋತೆ, ಪತ್ರಕರ್ತ ಹರಿಪ್ರಕಾಶ ಕೋಣೆಮನೆ, ಪರಿಷತ್ ಸದಸ್ಯ ಶಶಿಲ್ ನಮೋಶಿ, ಶಾಸಕ ದತ್ತಾತ್ರೇಯ ರೇವೂರ, ಲೇಖಕರಾದ ಡಾ.ಸ್ವಾಮಿರಾವ್ ಕುಲಕರ್ಣಿ, ಡಾ.ಶ್ರೀಶೈಲ ನಾಗರಾಳ. ಡಾ.ಗವಿಸಿದ್ಧಪ್ಪ ಪಾಟೀಲ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X