Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಟ್ಟುಗೋಲು ಹಾಕಿದ ಅಫ್ಘಾನ್ ಸಂಪತ್ತಿನ...

ಮುಟ್ಟುಗೋಲು ಹಾಕಿದ ಅಫ್ಘಾನ್ ಸಂಪತ್ತಿನ ಅರ್ಧಾಂಶ ಹಣ 9/11 ಸಂತ್ರಸ್ತರಿಗೆ ಬಿಡುಗಡೆ: ಬೈಡನ್ ಆದೇಶ‌

ಅಫ್ಘಾನಿಸ್ತಾನದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Feb 2022 10:58 PM IST
share
ಮುಟ್ಟುಗೋಲು ಹಾಕಿದ ಅಫ್ಘಾನ್ ಸಂಪತ್ತಿನ ಅರ್ಧಾಂಶ ಹಣ 9/11 ಸಂತ್ರಸ್ತರಿಗೆ ಬಿಡುಗಡೆ: ಬೈಡನ್ ಆದೇಶ‌

ವಾಶಿಂಗ್ಟನ್, ಫೆ.12: ಅಮೆರಿಕದ ಬ್ಯಾಂಕಿಂಗ್ ವ್ಯವಸ್ಥೆಯಿಂದ ಮುಟ್ಟುಗೋಲು ಹಾಕಲಾಗಿದ್ದ ಅಫ್ಘಾನ್ ಸೆಂಟ್ರಲ್ ಬ್ಯಾಂಕ್ ನ 7 ಶತಕೋಟಿ ಡಾಲರ್ ಸಂಪತ್ತನ್ನು ಬಿಡುಗಡೆಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ಸಹಿಹಾಕಿದ್ದಾರೆ.

ಬಿಡುಗಡೆಗೊಳಿಸಲಾದ ಹಣದ ಅರ್ಧಾಂಶವನ್ನು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಮಾನವೀಯ ನೆರವಿನ ಕಾರ್ಯಗಳಿಗೆ ನೀಡಲಾಗುವುದು ಹಾಗೂ ಉಳಿದ ಆರ್ಧಾಂಶವನ್ನು ಅಮೆರಿಕದಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಟ್ರಸ್ಟ್ ನಿಧಿಯೊಂದನ್ನು ಸ್ಥಾಪಿಸಲು ಬಳಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಆದರೆ ಈ ಹಣವನ್ನು ತಕ್ಷಣವೇ ಬಿಡುಗಡೆಗೊಳಿಸಲಾಗುವುದಿಲ್ಲ. ಅಫ್ಘಾನಿಸ್ತಾನದಲ್ಲಿ ಪರಿಹಾರ ಹಾಗೂ ಮೂಲಭೂತ ಅವಶ್ಯಕತೆಗಳಿಗಾಗಿ ನೀಡಲಾಗುವ 3.5 ಶತಕೋಟಿ ಡಾಲರ್ ಹಣವನ್ನು ಮಂಜೂರು ಮಾಡುವುದಕ್ಕೆ ಅಮೆರಿಕದ ಆರ್ಥಿಕ ಸಂಸ್ಥೆಗಳಿಗೆ ಪ್ರತ್ಯೇಕ ಆದೇಶವೊಂದನ್ನು ಜಾರಿಗೊಳಿಸಬೇಕಾಗುತ್ತದೆ. ಉಳಿದ 3.5 ಶತಕೋಟಿ ಡಾಲರ್ ಹಣವು ಅಮೆರಿಕದಲ್ಲಿಯೇ ಉಳಿಯಲಿದೆ ಹಾಗೂ ಅದನ್ನು ಭಯೋತ್ಪಾದನೆಯಿಂದ ಸಂತ್ರಸ್ತರಾದ ಅಮೆರಿಕನ್ನರು ನಡೆಸುತ್ತಿರುವ ಕಾನೂನು ಸಮರದಲ್ಲಿ ಪರಿಹಾರವಾಗಿ ನೀಡಲು ಬಳಸಲಾಗುವುದು ಎಂದವರು ಹೇಳಿದರು.

ಈ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿಕೆಯೊಂದನ್ನು ನೀಡಿದ್ದು, ಅಫ್ಘಾನಿಸ್ತಾನದ ಜನತೆ ಅಗಾಧವಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಭೀಕರವಾದ ಬರಗಾಲ, ಕೋವಿಡ್19 ಹಾಗೂ ವ್ಯಾಪಕವಾದ ಭ್ರಷ್ಟಾಚಾರದ ಪಿಡುಗು ಮತ್ತು ಹಲವಾರು ದಶಕಗಳಿಂದ ಅಂತಾರಾಷ್ಟ್ರೀಯ ನೆರವನ್ನೇ ಅವಲಂಭಿಸಿದ್ದ ಪರಿಣಾಮವಾಗಿ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಫ್ಘಾನ್ ಸೆಂಟ್ರಲ್ ಬ್ಯಾಂಕ್ಗೆ ಸೇರಿದ 3.5 ಶತಕೋಟಿ ಡಾಲರ್ ಸಂಪತ್ತನ್ನು ಅಫ್ಘಾನ್ ಜನತೆಯ ಪ್ರಯೋಜನಕ್ಕಾಗಿ ಬಳಸುವ ಕಾರ್ಯಕಾರಿ ಆದೇಶಕ್ಕೆ ಅಧ್ಯಕ್ಷ ಬೈಡೆನ್ ಸಹಿಹಾಕಿದ್ದಾರೆಂದು ತಿಳಿಸಿದ್ದಾರೆ.
 
‘‘ಇದರ ಜೊತೆಗೆ ಸೆಪ್ಟೆಂಬರ್ 11,2001ರ ಭಯೋತ್ಪಾದಕ ದಾಳಿಯಲ್ಲಿ ಸಂತ್ರಸ್ತರಾದವರು ,ಸೆಂಟ್ರಲ್ ಬ್ಯಾಂಕ್ ನ ಉಳಿದ ಸಂಪತ್ತಿಗೆ ಸಂಬಂಧಿಸಿ ತಾಲಿಬಾನ್ ವಿರುದ್ಧ ಫೆಡರಲ್ ನ್ಯಾಯಾಲಯದಲ್ಲಿ ಹೂಡಿರುವ ದಾವೆಗಳನ್ನು ಕೂಡಾ ನಾವು ಮಾನ್ಯ ಮಾಡುತ್ತೇವೆ ಎಂದವರು ಹೇಳಿದ್ದಾರೆ.
 
ಎರಡು ದಶಕಗಳ ಕಾಲ ಜೊತೆಯಾಗಿ ಕೆಲಸ ಮಾಡುವ ಮೂಲಕ ನಿರ್ಮಾಣವಾಗಿರುವ ಅಫ್ಘಾನಿಸ್ತಾನದ ಜೊತೆಗೆ ಅಮೆರಿದ ಬಾಂಧವ್ಯಗಳು ಸ್ಥಿರವಾಗಿ ಹಾಗೂ ಧಾರಣಾಶೀಲವಾಗಿದೆಯೆಂದು ಬ್ಲಿಂಕೆನ್ ಹೇಳಿದ್ದಾರೆ.

ಅಫ್ಘಾನ್ ಸೆಂಟ್ರಲ್ ಬ್ಯಾಂಕ್ನ ಸಂಪತ್ತಿನಲ್ಲಿ 3.5 ಶತಕೋಟಿ ಡಾಲರ್ ಹಣವನ್ನು 9/11 ಸಂತ್ರಸ್ತರಿಗೆ ನೀಡುವ ಬೈಡೆನ್ ಆದೇಶವು, ‘ಕಳ್ಳತನ’ವೆಂದು ತಾಲಿಬಾನ್ ಸರಕಾರದ ವಕ್ತಾರರೊಬ್ಬರು ಖಂಡಿಸಿದ್ದಾರೆ.

► ಅಫ್ಘಾನಿಸ್ತಾನದಲ್ಲಿ ಪ್ರತಿಭಟನೆ

ಅಮೆರಿಕದಲ್ಲಿ ಸ್ತಂಭನಗೊಳಿಸಲಾಗಿರುವ ಅಫ್ಘಾನಿಸ್ತಾನದ ಸಂಪತ್ತಿನಲ್ಲಿ 3.5 ಶತಕೋಟಿ ಡಾಲರ್ಗಳನ್ನು 9/11 ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ನೀಡುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆದೇಶದ ವಿರುದ್ಧ ಕಾಬೂಲ್ನಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಕಾಬೂಲ್ ನ ಪ್ರಧಾನ ಈದ್ಗಾ ಮಸೀದಿಯ ಹೊರಭಾಗದಲ್ಲಿ ಜಮಾಯಿಸಿದ ಪ್ರತಿಭಟನಕಾರರು, 20 ವರ್ಷಗಳ ಅಫ್ಘಾನ್ ಸಮರದಲ್ಲಿ ಸಾವನ್ನಪ್ಪಿದ ಸಾವಿರಾರು ಅಫ್ಘನ್ನರಿಗೆ ಆರ್ಥಿಕ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದರು.

ಅಫ್ಘಾನಿಸ್ತಾನದಲ್ಲಿ ಹಿಂದಿನ ಅಮೆರಿಕ ಬೆಂಬಲಿತ ಸರಕಾರದ ಆರ್ಥಿಕ ಸಲಹೆಗಾರರಾಗಿದ್ದ ತೊರೆಕ್ ಫರ್ಹಾದಿ ಅವರು ಬೈಡೆನ್ ರ ಆದೇಶವನ್ನು ಟೀಕಿಸಿದ್ದಾರೆ.ಅಫ್ಘಾನ್ ಸೆಂಟ್ರಲ್ ಬ್ಯಾಂಕ್ನ ನಿಧಿಯು ಅಫ್ಘಾನಿಸ್ತಾನದ ಜನತೆಗೆ ಸೇರಿದ್ದಾಗಿದೆಯೇ ಹೊರತು ತಾಲಿಬಾನ್ನದ್ದಲ್ಲ. ಬೈಡನ್ ಅವರ ನಿರ್ಧಾರವು ಏಕಪಕ್ಷೀಯವಾಗಿದೆ ಹಾಗೂ ಅಂತಾರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿಲ್ಲವೆಂದು ಫರ್ಹಾದಿ ತಿಳಿಸಿದ್ದಾರೆ. ಈ ಪ್ರಪಂಚದಲ್ಲಿರುವ ಯಾವುದೇ ದೇಶ ಕೂಡಾ ಇನ್ನೊಂದು ದೇಶದ ಸಂಪತ್ತನ್ನು ವಶಪಡಿಸಿಕೊಳ್ಳುವ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲವೆಂದು ಫರ್ಹಾದಿ ಹೇಳಿದ್ದಾರೆ.
 
ಸಾಗರೋತ್ತರ ದೇಶಗಳಲ್ಲಿ ಅಫ್ಘಾನಿಸ್ತಾನವು 9 ಶತಕೋಟಿ ಡಾಲರ್ ಸಂಪತ್ತನ್ನು ಹೊಂದಿದೆ. ಅಮೆರಿಕದಲ್ಲಿ 7 ಶತಕೋಟಿ ಡಾಲರ್ ಇದ್ದರೆ, ಉಳಿದ ಹಣ ಬಹುತೇಕವಾಗಿ ಜರ್ಮನಿ, ಯುಎಇ ಹಾಗೂ ಸ್ವಿಟ್ಛಝರ್ಲ್ಯಾಂಡ್ನಲ್ಲಿ ಇರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X