Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರವು ಕಾರ್ಮಿಕರ ಕಡೆ ಗಮನ ಹರಿಸಲಿ:...

ಸರಕಾರವು ಕಾರ್ಮಿಕರ ಕಡೆ ಗಮನ ಹರಿಸಲಿ: ಸಿಐಟಿಯು

ವಾರ್ತಾಭಾರತಿವಾರ್ತಾಭಾರತಿ13 Feb 2022 10:04 PM IST
share

ಬೆಂಗಳೂರು, ಫೆ. 13: ‘ನಗರದ ಹೂಡಿಯಲ್ಲಿ ಶಾಂತಿನಿಕೇತನ್ ಸಮೀಪವಿರುವ ಸ್ಯಾಸ್‍ಮೋಸ್ ಕಾರ್ಖಾನೆಯು ಹತ್ತು ತಿಂಗಳ ಹಿಂದೆ 119 ಕಾರ್ಮಿಕರಿಗೆ ಕೆಲಸವನ್ನು ನಿರಾಕರಿಸಿದೆ. ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಕಾರ್ಮಿಕರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಆದರೆ ಸರಕಾರವು ಇತ್ತ ಗಮನ ಹರಿಸುತ್ತಿಲ್ಲ' ಎಂದು ಸಿಐಟಿಯು ಅಸಮಾಧಾನ ವ್ಯಕ್ತಪಡಿಸಿದೆ. 

ರವಿವಾರದಂದು ಸಿಐಟಿಯುನ ಮುಖಂಡ ಗೋಪಾಲ್ ಗೌಡ ಮಾತನಾಡಿ, ‘ಎಪ್ರಿಲ್ ತಿಂಗಳಿನಲ್ಲಿ 119 ಕಾರ್ಮಿಕರನ್ನು ಯಾವುದೇ ಪೂರ್ವಭಾವಿ ನೋಟಿಸ್ ಅನ್ನು ನೀಡದೆ ಕೆಲಸದಿಂದ ವಜಾಗೊಳಿಸಿದೆ. ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟನೆಯ ಅಗತ್ಯವಿರುತ್ತದೆ. ಹಾಗಾಗಿ ಕಾರ್ಮಿಕರು ಒಗ್ಗೂಡಿ ಸಂಘವನ್ನು ಸೇರಿಕೊಡಿದ್ದು, ಅಪರಾಧ ಎಂದು ಭಾವಿಸಿರುವ ಸ್ಯಾಸ್‍ಮೋಸ್ ಕಾರ್ಖಾನೆಯು ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದೆ' ಎಂದು ದೂರಿದರು. 

‘ಕೇವಲ 2ಕೋಟಿ ರೂ.ಗಳಲ್ಲಿ ಸ್ಥಾಪಿತವಾಗಿರುವ ಖಾಸಗಿ ಒಡೆತನದ ಸ್ಯಾಸ್‍ಮೋಸ್ ಕಾರ್ಖಾನೆಯು ಇಂದು 600 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟನ್ನು ನಡೆಸುತ್ತಿದೆ. ಆದರೆ, ಇಂತಹ ಅಪೂರ್ವ ಯಶಸ್ಸಿಗಾಗಿ ಶ್ರಮಿಸಿದ ಕಾರ್ಮಿಕರನ್ನು ಬೀದಿಪಾಲು ಮಾಡಿರುವುದು, ಖಂಡನಾರ್ಹವಾಗಿದೆ. ಅಲ್ಲದೆ, ಕಾರ್ಮಿಕರನ್ನು ಕೇವಲ ಗುತ್ತಿಗೆ ಆಧಾರದಲ್ಲಿಯೇ ಮುಂದುವರೆಯುವಂತೆ ಮಾಡಿ, ಖಾಯಂಗೊಳಿಸಿದೆ, ಕಾರ್ಮಿಕರನ್ನು ಕಡೆಗಣಿಸಲಾಗಿದೆ. ಇನ್ನು ಕಾರ್ಮಿಕರನ್ನು ಕಾರ್ಖಾನೆಗೆ ಪೂರೈಕೆ ಮಾಡುವ ಕಂಪನಿಯು ಯಾವುದೇ ರೀತಿಯ ಲೇಸೆನ್ಸ್ ಅನ್ನು ಹೊಂದಿರುವಂತಿಲ್ಲ' ಎಂದು ಅವರು ಮಾಹಿತಿ ನೀಡಿದರು. 

‘ಕಾನೂನುಬಾಹಿರವಾಗಿ ಕೆಲಸ ನಿರಾಕರಿಸಿದನ್ನು ಪ್ರಶ್ನಿಸಿ, ಕಾರ್ಮಿಕರು ಪ್ರಾದೇಶಿಕ ಆಯುಕ್ತರ ಬಳಿ ದೂರು ಸಲ್ಲಿಸಿದರು. ಇದನ್ನು ಪರಿಷ್ಕರಿಸಿದ ಬಳಿಕ ಸ್ಯಾಸ್‍ಮೋಸ್ ಕಾರ್ಖಾನೆಯು ಕಾರ್ಮಿಕರಿಗೆ ಕೆಲಸ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಪುಣೆಯಲ್ಲಿರುವ ಕಂಪನಿಗೆ ಕಾರ್ಮಿಕರನ್ನು ವರ್ಗಾಹಿಸುವ ಹುನ್ನಾರ ನಡೆಸಿತ್ತು. ಪುಣೆಯಲ್ಲಿ ಸ್ಯಾಸ್‍ಮೋಸ್ ಕಾರ್ಖಾನೆಯ ಬ್ರಾಂಚ್ ಇಲ್ಲದ ಕಾರಣ ಕಾರ್ಮಿಕರು ಇದನ್ನು ತಿರಸ್ಕರಿಸಿದರು' ಎಂದು ಸ್ಪಷ್ಟಪಡಿಸಿದರು.

ಪ್ರಾದೇಶಿಕ ಕಾರ್ಮಿಕ ಆಯುಕ್ತರ ಬಳಿ ವಿಚಾರಣೆ ನಡೆಯುತ್ತಿರುವ ಕಾರಣ ಕಾರ್ಖಾನೆಯಲ್ಲಿ, ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು. ಪ್ರಕರಣ ಇತ್ಯಾರ್ಥವಾಗಿ ಕಾರ್ಮಿಕರನ್ನು ವಜಾ ಮಾಡಿದ ಆಡಳಿತ ಮಂಡಳಿಯ ಪರವಾಗಿ ತೀರ್ಪು ಬಂದಲ್ಲಿ ಕಾರ್ಮಿಕರು ಪ್ರತಿಭಟನೆಯನ್ನು ಬಿಟ್ಟು ಹೊರಡುತ್ತಾರೆ. ಅಲ್ಲಿಯವರೆಗೂ ಕಾರ್ಮಿಕರಿಗೆ ಕೆಲಸವನ್ನು ನೀಡಬೇಕು ಎಂದು ಅವರು ಮನವಿ ಮಾಡಿದರು. 

ಸ್ಯಾಸ್‍ಮೋಸ್ ಕಾರ್ಖಾನೆಯಲ್ಲಿ ಏರೋಸ್ಪೆಸ್ ಸಂಬಂಧಿಸಿದಂತೆ ಬಿಡಿಭಾಗಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆಲಸಕ್ಕೆ ಸೇರಿ ವರ್ಷಗಳೇ ಕಳೆದರೂ, ಕನಿಷ್ಟ ವೇತನವನ್ನೇ ಪಾವತಿ ಮಾಡುತ್ತಿದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಸಂಘವನ್ನು ಪ್ರಾರಂಭಿಸಬೇಕಾಯಿತು. ಇದನ್ನು ನೆಪವಾಗಿರಿಕೊಂಡು ಕೆಲಸವನ್ನು ನಿರಾಕರಿಸಿದೆ. ಕಾರ್ಮಿಕರನ್ನು ವಿಕಲಚೇತನರು ಸೇರಿದಂತೆ ಮಹಿಳೆಯರು ಇದ್ದಾರೆ. ಕೆಲಸವಿಲ್ಲದ ಕಾರಣ ಕುಟುಂಬ ಪೋಷಣೆಯು ಕಷ್ಟವಾಗಿದೆ. ಹಾಗಾಗಿ ಕೆಲಸವನ್ನು ಮರಳಿ 119 ಕಾರ್ಮಿರಿಗೂ ನೀಡಬೇಕು. 

-ರಾಜು, ಸ್ಯಾಸ್‍ಮೋಸ್ ಕಾರ್ಖಾನೆಯ ವಜಾಗೊಂಡ ಕಾರ್ಮಿಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X