Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 29 ಮಹಿಳೆಯರು ತಾಲಿಬಾನ್ ಬಂಧನದಲ್ಲಿ:...

29 ಮಹಿಳೆಯರು ತಾಲಿಬಾನ್ ಬಂಧನದಲ್ಲಿ: ಅಮೆರಿಕ ಪ್ರತಿನಿಧಿ

ವಾರ್ತಾಭಾರತಿವಾರ್ತಾಭಾರತಿ13 Feb 2022 11:54 PM IST
share

ಕಾಬೂಲ್ ನಲ್ಲಿ 29 ಮಹಿಳೆಯರು ಹಾಗೂ ಅವರ ಕುಟುಂಬದವರನ್ನು ತಾಲಿಬಾನ್ ಬಂಧನದಲ್ಲಿಟ್ಟಿದೆ. ಶುಕ್ರವಾರ ವಶಕ್ಕೆ ಪಡೆದಿದ್ದ 40 ಮಂದಿಯಲ್ಲಿ ಇವರೂ ಸೇರಿದ್ದರು ಎಂದು ಅಫ್ಗಾನ್ನ ಮಹಿಳೆ, ಬಾಲಕಿಯರು ಮತ್ತು ಮಾನವ ಹಕ್ಕುಗಳ ವಿಶೇಷ ಪ್ರತಿನಿಧಿ ರೀನಾ ಅಮೀರಿ ಹೇಳಿದ್ದಾರೆ.

ಇಂತಹ ಅನ್ಯಾಯದ ಬಂಧನಗಳು ಸಮಾಪ್ತಿಯಾಗಬೇಕು ಎಂದು ಅವರು ಟ್ವೀಟ್ ಮಾಡಿದ್ದು ಬಳಿಕ ಅದನ್ನು ಡಿಲೀಟ್ ಮಾಡಲಾಗಿದೆ. ಆದರೆ ಕಾಬೂಲ್ನಲ್ಲಿ ಹಲವು ಮಹಿಳೆಯರು ಬಂಧನದಲ್ಲಿರುವುದನ್ನು ಹಲವು ಮೂಲಗಳು ದೃಢಪಡಿಸಿವೆ. ಅಫ್ಗಾನ್ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಬಂಧನಕ್ಕೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಅಫ್ಗಾನಿಸ್ತಾನದಲ್ಲಿ ನಾಪತ್ತೆಯಾಗಿರುವ ಮಹಿಳಾ ಕಾರ್ಯಕರ್ತೆಯರ ಯೋಗಕ್ಷೇಮದ ವಿಷಯದಲ್ಲಿ ನನಗೆ ಹೆಚ್ಚಿನ ಆತಂಕವಿದೆ. ಇದರಲ್ಲಿ ಹಲವರು ಕಣ್ಮರೆಯಾಗಿದ್ದು ಹಲವ ದಿನಗಳಿಂದ ಅವರ ಬಗ್ಗೆ ಯಾವುದೇ ಮಾಹಿತಿಯಿಲ್ಲ . ಅವರ ಸುರಕ್ಷತೆಯನ್ನು ಖಾತರಿಪಡಿಸಿ ಅವರು ಮನೆಗೆ ಮರಳುವಂತೆ ತಾಲಿಬಾನ್ ಅನ್ನು ಆಗ್ರಹಿಸುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಹೇಳಿದ್ದಾರೆ.

 ಪ್ರತಿರೋಧ ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಿ ಪ್ರತಿಭಟನಾಕಾರರನ್ನು ಬಂಧನದಲ್ಲಿಡುವ ಎಲ್ಲಾ ಹಕ್ಕು ತಮಗಿದೆ ಎಂದು ಜನವರಿಯಲ್ಲಿ ತಾಲಿಬಾನ್ ಆಡಳಿತ ಹೇಳಿತ್ತು. ಕಾಬೂಲ್ನಲ್ಲಿನ ಮನೆಯಿಂದ ಮಹಿಳಾ ಹಕ್ಕುಗಳ ಕಾರ್ಯಕರ್ತರಾದ ತಮನ್ನಾ ಝರ್ಯಾಬಿ ಮತ್ತು ಪರ್ವಾನಾ ಇಬ್ರಾಹಿಂಖೆಲ್ರನ್ನು ಅಪಹರಿಸಲಾಗಿದೆ ಎಂದು ಸುದ್ಧಿಸಂಸ್ಥೆ ವರದಿ ಮಾಡಿತ್ತು. ಆದರೆ ಈ ವರದಿಯನ್ನು ನಿರಾಕರಿಸಿದ್ದ ತಾಲಿಬಾನ್ ಸರಕಾರದ ವಕ್ತಾರ ಝಬೀಹುಲ್ಲಾ ಮುಜಾಹಿದ್, ಕಾನೂನು ಉಲ್ಲಂಘಿಸಿ, ಪ್ರತಿಭಟನೆ ನಡೆಸುವ ಮೂಲಕ ಶಾಂತಿ ಕದಡುವ ಮತ್ತು ದೊಂಬಿಗೆ ಪ್ರಯತ್ನಿಸುವ ವ್ಯಕ್ತಿಗಳನ್ನು ಬಂಧಿಸುವ ಎಲ್ಲಾ ಹಕ್ಕು ಸರಕಾರಕ್ಕಿದೆ ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X