Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗ, ಕಪ್ಪು ಹಣದ ಕುರಿತು ಕೇಂದ್ರ...

ನಿರುದ್ಯೋಗ, ಕಪ್ಪು ಹಣದ ಕುರಿತು ಕೇಂದ್ರ ಸರಕಾರಕ್ಕೆ ರಾಹುಲ್ ಗಾಂಧಿ ತರಾಟೆ

ವಾರ್ತಾಭಾರತಿವಾರ್ತಾಭಾರತಿ14 Feb 2022 10:09 PM IST
share
ನಿರುದ್ಯೋಗ, ಕಪ್ಪು ಹಣದ ಕುರಿತು ಕೇಂದ್ರ ಸರಕಾರಕ್ಕೆ ರಾಹುಲ್ ಗಾಂಧಿ ತರಾಟೆ

ಹೋಶಿಯಾರ್ಪುರ, ಫೆ. 14: ನಿರುದ್ಯೋಗ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಅವರು ತನ್ನ ಚುನಾವಣಾ ಭಾಷಣದಲ್ಲಿ ನಿರುದ್ಯೋಗ ಹಾಗೂ ಕಪ್ಪು ಹಣದ ಬಗ್ಗೆ ಮಾತನಾಡುತ್ತಿಲ್ಲ ಎಂದಿದ್ದಾರೆ.

ಇಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯೀಕರಣ ಹಾಗೂ ಜಿಎಸ್ಟಿ ಕುರಿತು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡರು ಹಾಗೂ ಇದರಿಂದ ಇಬ್ಬರು ಮೂವರು ಶತ ಕೋಟ್ಯಧೀಶರಿಗೆ ಮಾತ್ರ ಲಾಭವಾಗಿದೆ ಎಂದರು. ತನ್ನ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರಣ್ಜಿತ್ ಸಿಂಗ್ ಚನ್ನಿ ಅವರಿಗೆ ಬಡತನ ಅರ್ಥವಾಗುತ್ತದೆ ಎಂದು ಹೇಳಿದ ರಾಹುಲ್ ಗಾಂಧಿ, ಬಡಜನರ, ರೈತರ, ಸಣ್ಣ ಹಾಗೂ ಮಧ್ಯಮ ವ್ಯಾಪಾರಸ್ಥರ ಸರಕಾರದ ನೇತೃತ್ವವನ್ನು ಚನ್ನಿ ವಹಿಸಲಿದ್ದಾರೆ ಎಂದರು. ‘‘ನಮ್ಮ ಮುಂದೆ ಪಂಜಾಬ್ ಚುನಾವಣೆ ಇದೆ.

ಇದು ಸಾಮಾನ್ಯ ಚುನಾವಣೆ ಅಲ್ಲ. ನೀವು ನೂತನ ಸರಕಾರವನ್ನು ಆಯ್ಕೆ ಮಾಡಬೇಕು. ಇಂದು ದೇಶದಲ್ಲಿ, ಪ್ರತಿ ರಾಜ್ಯದಲ್ಲಿ ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದೆ’’ ಎಂದು ರಾಹುಲ್ ಗಾಂಧಿ ಹೇಳಿದರು. ಇದು ಕಪ್ಪು ಹಣದ ವಿರುದ್ಧ ಹೋರಾಟ ಎಂದು ನೋಟು ಅಮಾನ್ಯೀಕರಣದ ಸಂದರ್ಭ ಮೋದಿ ಸರಕಾರ ಹೇಳಿತ್ತು. ಆದರೆ, ಸಣ್ಣ ವ್ಯಾಪಾರಸ್ಥರು ಹಾಗೂ ರೈತರ ಕಿಸೆಯಿಂದ ಹಣವನ್ನು ಹೊರಗೆಳೆಯಲಾಯಿತು ಹಾಗೂ ಮೂರ್ನಾಲ್ಕು ಮಂದಿ ಶತ ಕೋಟ್ಯಾಧಿಪತಿಗಳಿಗೆ ನೀಡಲಾಯಿತು ಎಂದು ಅವರು ಹೇಳಿದರು. ‘‘ಮೋದಿ ಜಿ ಅವರು ಪ್ರತಿ ಬಾರಿ ಮಾತನಾಡುವಾಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ವರ್ಗಾಯಿಸಲಾಗುವುದು, ಯುವ ಜನರಿಗೆ 2 ಕೋಟಿ ಉದ್ಯೋಗಗಳನ್ನು ನೀಡಲಾಗುವುದು ಎಂದು ಹೇಳುತ್ತಿದ್ದರು’’ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು ಕೂಡ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ‘‘ಆಪ್ ಪಂಜಾಬ್ ಅನ್ನು ಅರ್ಥ ಮಾಡಿಕೊಂಡಿಲ್ಲ ಹಾಗೂ ಆ ರಾಜ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮಾತ್ರ ಪಂಜಾಬ್ ಅನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಹಾಗೂ ಮುಂದೆ ನಡೆಸಲು ಸಾಧ್ಯ’’ ಎಂದರು. ನಮ್ಮ ಸರಕಾರ ಇಬ್ಬರು ಮೂವರು ಶತ ಕೋಟ್ಯಧಿಪತಿಗಳದ್ದಲ್ಲ. ಹಾಗಿದ್ದರೆ, ಪಂಜಾಬ್ ನಲ್ಲಿ  ಕಾಂಗ್ರೆಸ್ ಕೃಷಿ ಕಾಯ್ದೆಯನ್ನು ಬೆಂಬಲಿಸುತ್ತಿರಲಿಲ್ಲ. ನಮ್ಮ ಸರಕಾರ ರೈತ ಪರ ಸರಕಾರವಾಗಿರುವ ಕಾರಣಕ್ಕೆ ನಾವು ರೈತರ ಪರ ನಿಂತೆವು ಎಂದು ರಾಹುಲ್ ಗಾಂಧಿ ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X