Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು: ಮಲ್ಲಾರು ಪರ್ಕೀಣಕಟ್ಟೆ ಉರ್ದು...

ಕಾಪು: ಮಲ್ಲಾರು ಪರ್ಕೀಣಕಟ್ಟೆ ಉರ್ದು ಶಾಲೆಯಲ್ಲಿ ಹಿಜಾಬ್ ಹಾಕಿಕೊಂಡು ಬಂದ ಮಕ್ಕಳಿಗೆ ತರಗತಿ ಪ್ರವೇಶ ನಿರಾಕರಣೆ

ಪೋಷಕರಿಂದ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 Feb 2022 5:55 PM IST
share
ಕಾಪು: ಮಲ್ಲಾರು ಪರ್ಕೀಣಕಟ್ಟೆ ಉರ್ದು ಶಾಲೆಯಲ್ಲಿ ಹಿಜಾಬ್ ಹಾಕಿಕೊಂಡು ಬಂದ ಮಕ್ಕಳಿಗೆ ತರಗತಿ ಪ್ರವೇಶ ನಿರಾಕರಣೆ

ಕಾಪು, ಫೆ.15: ಹೈಕೋರ್ಟ್ ಮಧ್ಯಂತರ ಆದೇಶವನ್ನು ಮುಂದಿಟ್ಟುಕೊಂಡು ಕಾಪು ತಾಲೂಕಿನ ಮಲ್ಲಾರು ಪಕೀರ್ಣಕಟ್ಟೆಯ ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯಲ್ಲಿ ಹಿಜಾಬ್ ಹಾಕಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ಆವರಣದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾರು ಇಲ್ಲಿ ಒಂದರಿಂದ ಏಳನೆ ತರಗತಿ ವರೆಗೆ ಒಟ್ಟು 51 ಮಕ್ಕಳಿದ್ದರೆ, ಸರಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಒಟ್ಟು 31 ಮಕ್ಕಳಿದ್ದಾರೆ. ಅದೇ ರೀತಿ ಇಲ್ಲಿ ಮೌಲಾನ ಆಜಾದ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರರಿಂದ 9ನೆ ತರಗತಿವರೆಗೆ ಒಟ್ಟು 144 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ ಪ್ರೌಢಶಾಲೆಯ 31ರಲ್ಲಿ ಇಬ್ಬರು ಮಾತ್ರ ಹಿಂದು ಮಕ್ಕಳಿದ್ದಾರೆ. ಉಳಿದಂತೆ ಶೇ.99ರಷ್ಟು ಮುಸ್ಲಿಮ್ ಮಕ್ಕಳೇ ಇದ್ದಾರೆ.

ತರಗತಿಗೆ ಪ್ರವೇಶ ನಿರ್ಬಂಧ

ಸೋಮವಾರ ಸಮವಸ್ತ್ರದ ಶಾಲನ್ನು ತಲೆಗೆ ಹಾಕಿಕೊಂಡು ಆಗಮಿಸಿದ ಪ್ರೌಢಶಾಲೆ ಮತ್ತು ಮೌಲಾನಾ ಆಜಾದ್ ಶಾಲೆಯ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶ ನಿರಾಕರಿಸಲಾಗಿತ್ತೆಂದು ಪೋಷಕರು ಆರೋಪಿಸಿದ್ದಾರೆ. ಪ್ರೌಢ ಶಾಲೆಯ 17 ವಿದ್ಯಾರ್ಥಿನಿಯರ ಪೈಕಿ 16 ಮಂದಿ ಮತ್ತು ಮೌಲಾನಾ ಆಜಾದ್ ಶಾಲೆಯ ಸುಮಾರು 20 ಮಕ್ಕಳು ಸಮವಸ್ತ್ರದ ಶಾಲನ್ನು ಹಾಕಿಕೊಂಡು ಬಂದಿದ್ದರು. ಇವರಿಗೆ ತರಗತಿ ಪ್ರವೇಶ ನಿರಾಕರಿಸಿ ಹೊರಗಡೆ ನಿಲ್ಲಿಸಲಾಗಿತ್ತು. ಬಳಿಕ ಎಸೆಸೆಲ್ಸಿ ಮಕ್ಕಳು ಶಾಲನ್ನು ತೆಗೆದು ಪೂರ್ವ ಸಿದ್ಧತಾ ಪರೀಕ್ಷೆಗೆ ಹಾಜರಾದರು. ಆಜಾದ್ ಶಾಲೆಯ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗಿತ್ತು ಎಂದು ತಿಳಿದುಬಂದಿದೆ. ಬಳಿಕ ಪೋಷಕರನ್ನು ಶಾಲೆಗೆ ಕರೆಸಿ ಸಭೆ ನಡೆಸಿ, ನಾಳೆಯಿಂದ ತಲೆಗೆ ಶಾಲು ಹಾಕಿಕೊಂಡು ಬಂದರೆ ತರಗತಿಗೆ ಪ್ರವೇಶ ನೀಡಲ್ಲ ಎಂದು ಪ್ರಾಂಶುಪಾಲರು ಸೂಚನೆ ನೀಡಿದ್ದರು. ಇದಕ್ಕೆ ಪೋಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಪೋಷಕರ ಜಮಾವಣೆ

ಪ್ರೌಢಶಾಲೆ ಮತ್ತು ಆಜಾದ್ ಶಾಲೆಯ ಮಕ್ಕಳು ಮಂಗಳವಾರ ಬೆಳಗ್ಗೆ ಹಿಂದಿನಂತೆ ಸಮವಸ್ತ್ರದ ಶಾಲನ್ನು ತಲೆಗೆ ಹಾಕಿಕೊಂಡು ಶಾಲೆಗೆ ಆಗಮಿಸಿದರು. ಆದರೆ ಮುಖ್ಯೋಪಾಧ್ಯಾಯರು ಹೈಕೋರ್ಟ್ ಮಧ್ಯಂತರ ಆದೇಶವನ್ನು ಮುಂದಿಟ್ಟುಕೊಂಡು ಮಕ್ಕಳಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡದೆ ಹೊರಗಡೆ ನಿಲ್ಲಿಸಲಾಯಿತು. ಈ ಹಿನ್ನೆಲೆಯಲ್ಲಿ ಶಾಲೆಗೆ ಆಗಮಿಸಿದ ಪೋಷಕರು, ಮುಖ್ಯೋಪಾಧ್ಯಾಯಿನಿ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಕ್ಕಳಿಗೆ ಸಮವಸ್ತ್ರದ ಶಾಲನ್ನು ಹಿಜಾಬ್ ಆಗಿ ಹಾಕಿಕೊಂಡು ಬರಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಇದರಿಂದ ಸ್ಥಳಕ್ಕೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಂಕರ ಮಡಿವಾಳ ಮೊದಲಾದವರು ಭೇಟಿ ನೀಡಿದರು.

ಎಸೆಸೆಲ್ಸಿ ಮಕ್ಕಳಿಗೆ ಪರೀಕ್ಷೆಗೆ ಅವಕಾಶ

ವಿವಾದದ ಹಿನ್ನೆಲೆಯಲ್ಲಿ ಶಾಲೆಗೆ ಆಗಮಿಸಿದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಂಕರ ಮಡಿವಾಳ, ಮುಖ್ಯೋಪಾಧ್ಯಾಯಿನಿ ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಿದರು. ಬಳಿಕ ಡಿಡಿಪಿಐ, ಸಮವಸ್ತ್ರದ ಶಾಲು ಧರಿಸಿಕೊಂಡು ಶಾಲೆಗೆ ಆಗಮಿಸಿದ ಎಸೆಸೆಲ್ಸಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟರು. ಬಳಿಕ ಪೋಷಕರನ್ನು ಕರೆಸಿ ಮಾತುಕತೆ ನಡೆಸಿದ ಅವರು, ಈ ವಿಚಾರದ ಬಗ್ಗೆ ಮನದಟ್ಟು ಮಾಡಿಸಿ ಗೊಂದಲ ನಿವಾರಿಸಿದರು.

ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶದ ಉಲ್ಲಂಘನೆ - ಶಿಕ್ಷಣ ಇಲಾಖೆಯ ಆಯಕ್ತರಿಗೆ ಪತ್ರ ಬರೆದ ಶಿಕ್ಷಣ ತಜ್ಞ ನಿರಂಜನಾರಾಧ್ಯ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X