Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು...

ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ದೂರಿದ್ದಕ್ಕೆ ಗ್ರಾಮಸ್ಥರ ಮೇಲೆ ಸಿ.ಟಿ.ರವಿ ಬೆಂಬಲಿಗರಿಂದ ಹಲ್ಲೆ; ಆರೋಪ

ಘಟನೆಯ ವಿಡಿಯೋ ವೈರಲ್: ತಡವಾಗಿ ಬೆಳಕಿಗೆ ಬಂದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 Feb 2022 8:53 PM IST
share
ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ದೂರಿದ್ದಕ್ಕೆ ಗ್ರಾಮಸ್ಥರ ಮೇಲೆ ಸಿ.ಟಿ.ರವಿ ಬೆಂಬಲಿಗರಿಂದ ಹಲ್ಲೆ; ಆರೋಪ

ಚಿಕ್ಕಮಗಳೂರು, ಫೆ.15: ಗ್ರಾಮದಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಕ್ಕೆ ಕುಪಿತರಾದ ಸಿ.ಟಿ.ರವಿ ಬೆಂಬಲಿಗರು ಗ್ರಾಮಸ್ಥರ ಮೇಲೆಯೇ ಹಲ್ಲೆ ಮಾಡಿದ್ದಾರೆನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಿಜೆಪಿ ಮುಖಂಡರು ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆ ಮಾಡಿರುವ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಲೂಕಿನ ತಿಗರಿಹಂಕಲ್ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ಗಾಳಿಪೂಜೆ ಗ್ರಾಮಕ್ಕೆ ರವಿವಾರ ಶಾಸಕ ಸಿ.ಟಿ.ರವಿ ಭೇಟಿ ನೀಡಿದ್ದು, ಈ ವೇಳೆ ಸರಕಾರದಿಂದ ಮಂಜೂರಾದ ರಸ್ತೆ ಕಾಮಗಾರಿಯ ಅಭಿವೃದ್ಧಿಯನ್ನು ಸಿ.ಟಿ.ರವಿ ಪರಿಶೀಲಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ರಸ್ತೆ ಕಾಮಗಾರಿಯನ್ನು ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಕಳಪೆ ಕಾಮಗಾರಿ ಮಾಡಿದ್ದು, ಕಾಮಗಾರಿ ಪೂರ್ಣವಾಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.

ಈ ವೇಳೆ ಸ್ಥಳದಲ್ಲಿದ್ದ ತಾಪಂ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ವೈ.ಜಿ.ಸುರೇಶ್ ಹಾಗೂ ಅವರ ಬೆಂಬಲಿಗರು ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರಿಗೆ ನಿಂದಿಸಿದಲ್ಲದೇ ಹಲ್ಲೆಯನ್ನೂ ಮಾಡಿದ್ದಾರೆಂದು ತಿಳಿದು ಬಂದಿದ್ದು, ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತೆಂದು ತಿಳಿದು ಬಂದಿದೆ.

ಸಿ.ಟಿ.ರವಿ ಬೆಂಬಲಿಗರು ಗ್ರಾಮಸ್ಥರ ಮೇಲೆ ನಡೆಸಿದ ಹಲ್ಲೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದ್ದು, ಅಮಾಯಕ ಗ್ರಾಮಸ್ಥರ ವಿರುದ್ಧ ದರ್ಪ ಮೆರೆದು ಹಲ್ಲೆ ನಡೆಸಿರುವ ಬಿಜೆಪಿ ಮುಖಂಡರ ವಿರುದ್ಧ ಪೊಲೀಸರು ಕಾನೂನು ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಅವರು ತಮ್ಮ ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ತಂದಿದ್ದೇನೆ ಎಂದು ಹೇಳುತ್ತಾರೆ. ಆದರೆ ಅನುದಾನ ಎಲ್ಲಿ ಹೋಗುತ್ತಿದೆಯೋ ಗೊತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಅವರ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳು ಕಳಪೆ ಕಾಮಗಾರಿಗಳಾಗಿವೆ. ಇಂತಹ ಕಾಮಗಾರಿಗಳ ವಿರುದ್ಧ ಆರೋಪ ಮಾಡುವ ಗ್ರಾಮಸ್ಥರಿಗೆ ರವಿವಾರ ಗಾಳಿಪೂಜೆ ಗ್ರಾಮದಲ್ಲಿ ಹಲ್ಲೆ ಮಾಡಲಾಗಿದೆ. ಸಿ.ಟಿ.ರವಿ ಬೆಂಬಲಿಗರೇ ಹಲ್ಲೆ ಮಾಡಿರುವ ಘಟನೆಯ ವಿಡಿಯೊ ವೈರಲ್ ಆಗಿದ್ದು, ಅಮಾಯಕ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿದ ಗೂಂಡಾಗಳ ಮೇಲೆ ಪೊಲೀಸರು ಕಾನೂನು ಕ್ರಮಕೈಗೊಳ್ಳಬೇಕು.

- ಸಂತೋಷ್, ಅಂಬೇಡ್ಕರ್ ಸೇನೆ ಮುಖಂಡ
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X