Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿಜಾಬ್ ನೆಪದಲ್ಲಿ ಪ್ರೌಢಶಾಲಾ ಮುಸ್ಲಿಮ್...

ಹಿಜಾಬ್ ನೆಪದಲ್ಲಿ ಪ್ರೌಢಶಾಲಾ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಮಾನಸಿಕ ಹಿಂಸೆ: ಝುಲೈಕಾ

ವಾರ್ತಾಭಾರತಿವಾರ್ತಾಭಾರತಿ16 Feb 2022 11:47 AM IST
share
ಹಿಜಾಬ್ ನೆಪದಲ್ಲಿ ಪ್ರೌಢಶಾಲಾ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಮಾನಸಿಕ ಹಿಂಸೆ: ಝುಲೈಕಾ

ಮಂಗಳೂರು, ಫೆ.16: ಪ್ರೌಢಶಾಲೆಯ ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಹಿಜಾಬ್ ನೆಪದಲ್ಲಿ ಮಾನಸಿಕವಾಗಿ ಹಿಂಸಿಸುತ್ತಿರುವ ಕೃತ್ಯ ಖಂಡನಾರ್ಹ ಎಂದು ನ್ಯಾಷನಲ್ ವಿಮೆನ್ಸ್ ಫ್ರಂಟ್ ಜಿಲ್ಲಾ ಅಧ್ಯಕ್ಷೆ ಝುಲೈಕಾ ಬಜ್ಪೆ ಹೇಳಿದ್ದಾರೆ.

ಸುದ್ದಿಗೋ಼‍ಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಮಾನಸಿಕವಾಗಿ ಹಿಂಸಿಸುತ್ತಿರುವ ಶಾಲಾ ಶಿಕ್ಷಕರು, ಶಾಲಾಡಳಿತ ಮಂಡಳಿಯ ವರ್ತನೆಯನ್ನು  ಖಂಡಿಸುತ್ತೇವೆ.  ಹಿಜಾಬ್ ನಿಷೇಧವನ್ನು ಪ್ರಶ್ನಿಸಿದ ಅರ್ಜಿಗಳು ಈಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿವೆ. ಈ ನಡುವೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದೆಯಾದರೂ, ಅದು ಪದವಿ ಪೂರ್ವ ಕಾಲೇಜುಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಸ್ಪಷ್ಟಪಡಿಸಿದೆ. ಆದರೆ ರಾಜ್ಯದ ಹಲವು ಕಡೆ ಪ್ರೌಢ ಶಾಲಾ ಶಿಕ್ಷಕಿಯರು ಮತ್ತು ಆಡಳಿತ ಮಂಡಳಿಯವರು ಇದೇ ಆದೇಶವನ್ನು ಹಿಡಿದುಕೊಂಡು ಪ್ರೌಢಶಾಲಾ ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಮತ್ತು ಶಿಕ್ಷಕಿಯರಿಗೆ ಸಾರ್ವಜನಿಕ ಪ್ರದೇಶದಲ್ಲಿ ಹಿಜಾಬ್ ಮತ್ತು ಬುರ್ಖಾ ಕಳಚಲು ಒತ್ತಾಯಪಡಿಸುತ್ತಿದ್ದಾರೆ ಎಂದು ದೂರಿದರು.

 ಶಿರವಸ್ತ್ರ ಧರಿಸಿ ಶಾಲೆಗೆ ಬಂದ ಮಡಿಕೇರಿ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ 32 ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿ ವಾಪಸ್ ಕಳುಹಿಸಿದೆ. ಶಿವಮೊಗ್ಗದ ಶಾಲೆಯೊಂದರಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಎಸೆಸೆಲ್ಸಿ ಪೂರ್ವ ತಯಾರಿ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ಶಿಕಾರಿಪುರದ 90 ವಿದ್ಯಾರ್ಥಿನಿಯರನ್ನು ವಾಪಸ್ ಕಳುಹಿಸಲಾಗಿದೆ. ಮಂಡ್ಯದ ಶಾಲೆಯೊಂದರಲ್ಲಿ ಶಾಲಾ ಶಿಕ್ಷಕಿಯ ಬುರ್ಖಾವನ್ನು ಗೇಟ್ ಹೊರಗಡೆಯ ಕಳಚುವಂತೆ ಮಾಡಲಾಗಿತ್ತು. ರಾಜ್ಯದ ವಿವಿಧ ಕಡೆಗೆ ಇಂತಹ ಹಲವಾರು ಘಟನೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಭೀತಿ, ಅಭದ್ರತೆಯ ಕಾರಣದಿಂದಾಗಿ ಹೆಣ್ಮಕ್ಕಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಬಹುದಾದ ಆತಂಕವಿದೆ. ಮಕ್ಕಳ ಶಿಕ್ಷಣದ ಮೂಲಭೂತ ಹಕ್ಕಿಗೆ ತಡೆ ಉಂಟು ಮಾಡುವ ಈ ರೀತಿಯ ಹೊಣೆಗೇಡಿತನದ ಕೃತ್ಯಗಳು ಯಾವುದೇ ಕಾರಣಕ್ಕೂ ಸ್ವೀಕಾರ್ಹವಲ್ಲ. ರಾಜ್ಯದಲ್ಲಿ ಸಂಭವಿಸುತ್ತಿರುವ ಇಂತಹ ಅನಾಗರಿಕ ಕೃತ್ಯಗಳಿಂದ ಇಡೀ ರಾಜ್ಯವೇ ದೇಶದ ಮುಂದೆ ತಲೆತಗ್ಗಿಸಿ ನಿಲ್ಲಬೇಕಾಗಿ ಬಂದಿದೆ ಎಂದವರು ಹೇಳಿದರು.

ರಾಜ್ಯದ ವಿವಿಧ ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವಾಗ ಸರಕಾರ ಮತ್ತು ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ಇಂತಹ ಘಟನೆಗಳ ಹಿಂದೆ ಅದರ ಪಾತ್ರವಿರುವುದನ್ನು ಸ್ಪಷ್ಟಪಡಿಸುತ್ತದೆ. ಪ್ರೌಢ ಶಾಲಾ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಮಾನಸಿಕವಾಗಿ ಹಿಂಸಿಸಿದ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಗೊಳ್ಳಬೇಕು. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಕಾರಣಕ್ಕೆ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆಗಳನ್ನು ತಡೆಯಲು ಸರಕಾರವು ಕೂಡಲೇ ಕಾರ್ಯ ಪ್ರವೃತ್ತವಾಗಬೇಕು ಎಂದು ವಿಮೆನ್‍ ಇಂಡಿಯಾ ಮೂವ್ ಮೆಂಟ್ ರಾಜ್ಯ ಅಧ್ಯಕ್ಷೆ ಶಾಹಿದಾ ತಸ್ನೀಂ ಆಗ್ರಹಿಸಿದ್ದಾರೆ.

ಹೈಕೋರ್ಟ್ ಆದೇಶವನ್ನು ಅರ್ಥೈಸಿಕೊಂಡು, ಶಿಕ್ಷಣ ಕೇಂದ್ರಗಳಲ್ಲಿ ಯಾವುದೇ ಬಿಕ್ಕಟ್ಟು ತಲೆದೋರದಂತೆ ನೋಡಿಕೊಂಡಿರುವ ದ.ಕ. ಜಿಲ್ಲೆಯ ಶಾಲಾ ಅಭಿವೃದ್ಧಿ ಮಂಡಳಿಗಳು ಮತ್ತು ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸುವುದಾಗಿ ಕರಾವಳಿ ಮಹಿಳಾ ಹಕ್ಕುಗಳ ವೇದಿಕೆ ಸಂಚಾಲಕಿ ಆಶಿಕಾ ಮಂಗಳೂರು ಹೇಳಿದ್ದಾರೆ.

ಯಾರ ಮೇಲೆಯೂ ಸ್ಕಾರ್ಫನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ. ಆದರೆ ಆಯ್ಕೆಯ ಸ್ವಾತಂತ್ರ್ಯ ಎಂಬ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಇಂದು ಸ್ಕಾರ್ಫ್ ನಿಷೇಧವನ್ನು ಪ್ರಶ್ನಿಸಿಯೇ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿರುವುದು. ಹಾಗಾಗಿ  ಹೆಣ್ಮಕ್ಕಳ ಆಯ್ಕೆಯ ಯಾವುದೇ ಸ್ವಾತಂತ್ರ್ಯವನ್ನು ತಡೆಹಿಡಿಯುವುದು ಸಂವಿಧಾನಬಾಹಿರವಾಗಿದೆ. ಹೈಕೋರ್ಟ್ ಮಧ್ಯಂತರ  ಆದೇಶದ ಬಗ್ಗೆ ನಮಗೆ ಆಕ್ಷೇಪಣೆ ಇದೆ. ಈ ಕಾರಣದಿಂದ ಹೈಕೋರ್ಟ್‌ ತನ್ನ ಆದೇಶವನ್ನು ಮರುಪರಿಶೀಲಿಸಿ ವಿದ್ಯಾರ್ಥಿಗಳ ಸಂವಿಧಾನದತ್ತ ಹಕ್ಕನ್ನು ಎತ್ತಿಹಿಡಿಯಬೇಕೆಂದೂ ನಾವು ಅಗ್ರಹಿಸುವುದಾಗಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮನಪಾ ಸದಸ್ಯೆ ಶಂಶಾದ್ ಅಬೂಬಕರ್, ಬಂಟ್ವಾಳ ಪುರಸಭೆ ಸದಸ್ಯೆ ಝೀನತ್ ಬಂಟ್ವಾಳ, ಮಮ್ತಾಝ್ ವಿಟ್ಲ, ಶಬೀನಾ ನಂದಾವರ, ಅಫ್ರೀನ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X