Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಈಶ್ವರಪ್ಪರನ್ನು ನಾಳೆ 11 ಗಂಟೆಯೊಳಗೆ...

''ಈಶ್ವರಪ್ಪರನ್ನು ನಾಳೆ 11 ಗಂಟೆಯೊಳಗೆ ಸಂಪುಟದಿಂದ ವಜಾ ಮಾಡದಿದ್ದರೆ ಉಭಯ ಸದನಗಳಲ್ಲಿ ಕಲಾಪ ಬಹಿಷ್ಕರಿಸುತ್ತೇವೆ''

ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Feb 2022 10:03 PM IST
share
ಈಶ್ವರಪ್ಪರನ್ನು ನಾಳೆ 11 ಗಂಟೆಯೊಳಗೆ ಸಂಪುಟದಿಂದ ವಜಾ ಮಾಡದಿದ್ದರೆ ಉಭಯ ಸದನಗಳಲ್ಲಿ ಕಲಾಪ ಬಹಿಷ್ಕರಿಸುತ್ತೇವೆ

ಬೆಂಗಳೂರು:  ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪನವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ ಬೆಳಗ್ಗೆ 11 ಗಂಟೆಯೊಳಗೆ ಸಂಪುಟದಿಂದ ವಜಾ ಮಾಡದಿದ್ದರೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತೇವೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,  ಬಿಜೆಪಿ ಮತ್ತು ಆರೆಸ್ಸೆಸ್ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬಿಜೆಪಿಗೆ ರಾಜಕೀಯದ ಅಸ್ತ್ರಗಳು. ಸಂವಿಧಾನ ಮತ್ತು ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದಾರೆ ಎಂದು ಕಿಡಿಗಾರಿದ್ದಾರೆ. 

ಸಚಿವ ಈಶ್ವರಪ್ಪನವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ತಮ್ಮ ಬಿಜೆಪಿ ಪಕ್ಷ ಮತ್ತು ಪರಿವಾರದ ಅಭಿಪ್ರಾಯವನ್ನೇ ಅವರು ಹೇಳಿದ್ದಾರೆ. ಅಂತರಂಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಆರೆಸ್ಸೆಸ್  ಸರಸಂಘ ಚಾಲಕ ಮೋಹನ್ ಭಾಗವತ್ ವರೆಗೆ ಎಲ್ಲರ ಅಭಿಪ್ರಾಯವೂ ಇದೇ ಆಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಕೃತ್ಯವನ್ನು ಈಶ್ವರಪ್ಪನವರು ಖಂಡಿಸಿ, ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಂಡಿದ್ದರೆ ವಿವಾದ ಶಾಂತಿಯುತವಾಗಿ ಬಗೆಹರಿಯುತ್ತಿತ್ತು. ಅವರು ‘”ಇವತ್ತಲ್ಲ ನಾಳೆ ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ” ಎಂದು ಅತ್ಯಂತ ಉಡಾಫೆಯಿಂದ ಮಾತನಾಡಿ ಪ್ರಚೋದಿಸಿದ್ದಾರೆ ಎಂದು ತಿಳಿಸಿದರು. 

ದೇಶದಲ್ಲಿ ಸರ್ಕಾರವನ್ನು ಟೀಕಿಸಿದ ವ್ಯಕ್ತಿಗಳ ಮೇಲೆಲ್ಲಾ ರಾಷ್ಟ್ರ ದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರದೋಹದ ಹೇಳಿಕೆ ಕೊಟ್ಟಿರುವ ಕೆ.ಎಸ್. ಈಶ್ವರಪ್ಪನವರ ಮೇಲೆ ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ. ದೇಶಪ್ರೇಮವೇ ತಮ್ಮ ಉಸಿರು ಎಂದು ಹೇಳುತ್ತಿರುವ ಭಾರತೀಯ ಜನತಾ ಪಕ್ಷ ಕನಿಷ್ಠ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಬಹುದಿತ್ತು. ಅದು ಸಚಿವರ ವೈಯಕ್ತಿಕ ಹೇಳಿಕೆ ಎಂದಾದರೂ ಹೇಳಬಹುದಿತ್ತು.  ಪಕ್ಷದ ಮೌನದ ಮೂಲಕ ಈಶ್ವರಪ್ಪನವರ ಹೇಳಿಕೆಗೆ  ಸಮ್ಮತಿ ಇದೆ ಎಂದು ಹೇಳಿದಂತಾಗುವುದಿಲ್ಲವೇ? ಎಂದು ಫ್ರಶ್ನಿಸಿದ್ದಾರೆ. 

ಬಿಜೆಪಿ ಅದರ ಪೂರ್ವಾಶ್ರಮದ ಜನಸಂಘ ಮತ್ತು ಆರೆಸ್ಸೆಸ್ ರಾಷ್ಟ್ರಧ್ವಜವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಭಗವಾಧ್ವಜವನ್ನೇ ರಾಷ್ಟ್ರಧ್ವಜ ಮಾಡುವುದೇ ಅವರ ಮೂಲ ಅಜೆಂಡಾ ಆಗಿದೆ ಎಂದರು.

ನಾಗಪುರದ ಆರ್ ಎಸ್ ಎಸ್  ಕಚೇರಿ ಮೇಲೆ ಭಾರತ ಗಣರಾಜ್ಯವಾದ 52 ವರ್ಷಗಳವರೆಗೆ ರಾಷ್ಟ್ರಧ್ವಜ ಆರೋಹಣ ಮಾಡಿರಲಿಲ್ಲ. ಕೊನೆಗೆ ಒಲ್ಲದ ಮನಸ್ಸಿನಿಂದ 2002 ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಿದರೂ ಅಂತರಂಗದ ವಿರೋಧ ಇದ್ದೇ ಇದೆ. ಅದು ಈಶ್ವರಪ್ಪನಂತಹವರ ಬಾಯಿಯಿಂದ ಆಗಾಗ ಹೊರಬರುತ್ತದೆ. ದೇಶಾದ್ಯಂತ ಆರೆಸ್ಸೆಸ್   ನಡೆಸುವ ಬೈಠಕ್ ಗಳಲ್ಲಿ ಅವರು ಭಗವಾದ್ವಜವನ್ನಷ್ಟೇ ಹಾರಿಸುತ್ತಿದ್ದಾರೆಯೇ ವಿನಹ ರಾಷ್ಟ್ರಧ್ವಜವನ್ನು ಹಾರಿಸುತ್ತಿರಲಿಲ್ಲ. ಈಗಲೂ ಆರೆಸ್ಸೆಸ್  ಬೈಠಕ್ ಗಳಲ್ಲಿ ನನಗೆ ತಿಳಿದ ಹಾಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿಲ್ಲ ಎಂದು ಹೇಳಿದರು.

ಸಂವಿಧಾನದ ಪರಿಚ್ಛೇದ-51 (ಎ) ರಲ್ಲಿ ಮೂಲಭೂತ ಕರ್ತವ್ಯಗಳನ್ನು ವಿವರಿಸಲಾಗಿದೆ. ಅದರಲ್ಲಿ ಮೊದಲನೆ ಕರ್ತವ್ಯವೇ ಸಂವಿಧಾನಕ್ಕೆ ಬದ್ಧವಾಗಿರುವುದು ಹಾಗೂ ಅದರ ಆದರ್ಶಗಳನ್ನು ಮತ್ತು ಸಂಸ್ಥೆಗಳನ್ನು, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರ ಗೀತೆಯನ್ನು ಗೌರವಿಸುವುದಾಗಿದೆ ಎಂದು ಹೇಳಿದೆ ಎಂದರು. 

ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಮತ್ತು ಸಂವಿಧಾನ ರಾಷ್ಟ್ರದ ಪ್ರಮುಖ ಸಂಕೇತಗಳು, ರಾಜರ ಕಾಲದಲ್ಲಿ ಬೆಳ್ಗೊಡೆ ಮತ್ತು ಸಿಂಹಾಸನಗಳು ರಾಜ ಪ್ರಭುತ್ವಗಳ ಲಾಂಛನಗಳಾದರೆ, ಹೊಸ ರಾಷ್ಟ್ರದಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ಸಂವಿಧಾನ ಮೂರು ಲಾಂಛನಗಳು. ಇವುಗಳಿಗೆ ಅವಮಾನ ಎಸಗುವ ಯಾವುದೆ ವ್ಯಕ್ತಿಯು ಕೃತ್ಯ ರಾಷ್ಟ್ರದ್ರೋಹದ್ದು. ಕಾಲಕಾಲಕ್ಕೆ ರಾಜಕೀಯದ ಲಾಭ ಪಡೆಯಲು ಇಲ್ಲವೇ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆ ಕಡೆ ಸೆಳೆಯಲು ರಾಷ್ಟ್ರಧ್ವಜದಂತಹ ವಿವಾದವನ್ನು ಬಿಜೆಪಿ ಹುಟ್ಟು ಹಾಕುತ್ತದೆ.

ಸಂವಿಧಾನವನ್ನು ವಿರೋಧಿಸುವವರು, ರಾಷ್ಟ್ರಧ್ವಜವನ್ನು ಒಪ್ಪದವರು ಎಂದೂ ದೇಶಪ್ರೇಮಿಯಾಗಲು ಸಾಧ್ಯವಿಲ್ಲ. ಮೂಲಭೂತವಾಗಿ ಬಿಜೆಪಿ ನಾಯಕರು ಸಂವಿಧಾನವನ್ನಾಗಲೀ, ರಾಷ್ಟ್ರಧ್ವಜವನ್ನಾಗಲಿ ಒಪ್ಪುವುದಿಲ್ಲ. ಇವರೇನಿದ್ದರೂ ನಕಲಿ ದೇಶಪ್ರೇಮಿಗಳು, ಇವರದ್ದೇನಿದ್ದರೂ ನಕಲಿ ದೇಶಪ್ರೇಮ ಎಂದು ಕಿಡಿಗಾರಿದರು.
 

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತೇವೆ.
1/13#ದೇಶದ್ರೋಹಿಈಶ್ವರಪ್ಪ #ದೇಶದ್ರೋಹಿಬಿಜೆಪಿ

— Siddaramaiah (@siddaramaiah) February 16, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X