Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಪ್ರಧಾನಿಯ ಐತಿಹಾಸಿಕ ಬಹ್ರೈನ್...

ಇಸ್ರೇಲ್ ಪ್ರಧಾನಿಯ ಐತಿಹಾಸಿಕ ಬಹ್ರೈನ್ ಭೇಟಿ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ16 Feb 2022 11:32 PM IST
share
ಇಸ್ರೇಲ್ ಪ್ರಧಾನಿಯ ಐತಿಹಾಸಿಕ ಬಹ್ರೈನ್ ಭೇಟಿ ಅಂತ್ಯ

ಮನಾಮ, ಫೆ.16: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರ 2 ದಿನಗಳ ಐತಿಹಾಸಿಕ ಬಹ್ರೈನ್ ಭೇಟಿ ಕಾರ್ಯಕ್ರಮ ಮಂಗಳವಾರ ಅಂತ್ಯಗೊಂಡಿದ್ದು ಉಭಯ ದೇಶಗಳು ಪರಸ್ಪರ ಸಹಕಾರ ಸಂಬಂಧ ವೃದ್ಧಿಗೊಳಿಸುವ ಸಂಕಲ್ಪ ಮಾಡಿವೆ ಎಂದು ಬಹ್ರೈನ್‌ನ ಬಿಎನ್‌ಎ ಸುದ್ಧಿಸಂಸ್ಥೆ ವರದಿ ಮಾಡಿದೆ.
     
ಉಭಯ ದೇಶಗಳು ದ್ವಿಪಕ್ಷೀಯ ಸಂಬಂಧವನ್ನು ಸಹಜ ಸ್ಥಿತಿಗೆ ತರುವ ಉದ್ದೇಶದಿಂದ 2020ರಲ್ಲಿ ನಡೆದ ಮಾತುಕತೆಯ ಮುಂದುವರಿದ ಭಾಗವಾಗಿ ಇಸ್ರೇಲ್ ಪ್ರಧಾನಿ ಬೆನೆಟ್ ಬಹ್ರೈನ್ ರಾಜಧಾನಿ ಮನಾಮಕ್ಕೆ ಭೇಟಿ ನೀಡಿದರು. ಮನಾಮದಲ್ಲಿ ಅಮೆರಿಕದ ನೌಕಾಪಡೆಯ ನೌಕಾನೆಲೆಯ ಸಹಿತ ಹಲವು ಅಂತರಾಷ್ಟ್ರೀಯ ನೌಕಾನೆಲೆಗಳಿವೆ. 

ಮಂಗಳವಾರ ಬಹ್ರೈನ್‌ನ ದೊರೆ ಹಮದ್ ಜತೆ ಮಾತುಕತೆ ನಡೆಸಿದ ಬೆನ್ನೆಟ್, ಪರಮಾಣು ಬೆದರಿಕೆ, ಭಯೋತ್ಪಾದಕರ ಚಟುವಟಿಕೆ, ಧಾರ್ಮಿಕ ತೀವ್ರವಾದ, ಬಡತನ, ಸಾಮಾಜಿಕ ಸಮಸ್ಯೆಗಳ ಸಹಿತ ಪ್ರಾದೇಶಿಕ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಉಭಯ ದೇಶಗಳ ನಡುವಿನ ತಂತ್ರಗಾರಿಕೆಯ ಮತ್ತು ಭದ್ರತಾ ಸಂಬಂಧವನ್ನು ಬಲಪಡಿಸುವ ಕುರಿತು ಚರ್ಚಿಸಿದರು. ಶಾಂತಿಯನ್ನು ಭದ್ರಪಡಿಸಲು ಮತ್ತು ಸಮೃದ್ಧಿಯನ್ನು ಸಾಧಿಸಲು ಉಭಯ ದೇಶಗಳ ನಡುವೆ ನಾಗರಿಕ, ಆರ್ಥಿಕ ಮತ್ತು ವಾಣಿಜ್ಯ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಸುದೀರ್ಘ ಮಾತುಕತೆ ನಡೆಸಲಾಗಿದೆ ಎಂದು ವರದಿ ಹೇಳಿದೆ.
        
ಉಭಯ ದೇಶಗಳ ಉತ್ತಮ ಹಿತಾಸಕ್ತಿಯನ್ನು ಸಾಧಿಸುವ ಸಂಯೋಜಿತ ಜಂಟಿ ಪ್ರಯತ್ನದ ಕುರಿತು ಬೆನೆಟ್ ಅವರ ದೃಢನಿಲುವು ಮತ್ತು ನಾಯಕತ್ವದ ಕಾರಣದಿಂದಾಗಿ ಇಸ್ರೇಲ್ ಪ್ರಧಾನಿಯ ಭೇಟಿ ಫಲಪ್ರದ ಮತ್ತು ಯಶಸ್ವಿಯಾಗಿದೆ ಎಂದು ದೊರೆ ಹಮದ್ ಹೇಳಿದ್ದಾರೆ. ಬಹ್ರೈನ್‌ಗೆ ನೀಡಿದ ಭೇಟಿಯು ಇರಾನ್ ವಿರುದ್ಧ ಹಾಗೂ ಹೌದಿ ಸೇರಿದಂತೆ ಅದರ ಮಿತ್ರರ ವಿರುದ್ಧದ ಸಾಮಾನ್ಯ ನಿಲುವನ್ನು ರೂಪಿಸುವ ಅವಕಾಶವಾಗಿದೆ ಎಂದು ಬೆನೆಟ್ ಪ್ರತಿಕ್ರಿಯಿಸಿದ್ದಾರೆ. ಭಯೋತ್ಪಾದನೆ ಮತ್ತು ದೊಂಬಿಯನ್ನು ಉತ್ತೇಜಿಸುವ ಶತ್ರುಗಳ ವಿರುದ್ಧ ಸೌಮ್ಯ ದೇಶಗಳ ಹೊಸ ಪ್ರಾದೇಶಿಕ ವ್ಯವಸ್ಥೆಯನ್ನು ರೂಪಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X