ಉಡುಪಿ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆ
ಉಡುಪಿ, ಫೆ.17: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಕಾರ್ಯಕ್ರಮ ನಡೆಸಲು ರಾಜ್ಯದ ಉಡುಪಿ, ಮೈಸೂರು, ಗುಲ್ಬರ್ಗ, ದಕ್ಷಿಣ ಕನ್ನಡ, ರಾಯಚೂರು ಹಾಗೂ ಕಾರವಾರ ಆಯ್ಕೆಯಾದ ನೊಡೆಲ್ ಕೇಂದ್ರಗಳು. ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ -ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿಯೇ ಸ್ಕೃಿನಿಂಗ್ ಮಾಡಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳನ್ನು ಉಡುಪಿಯಿಂದ ಆನ್ಲೈನ್ ಮೂಲಕ ಫೆಬ್ರವರಿ 23ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಜಿಲ್ಲೆಯನ್ನು ಪ್ರತಿನಿಧಿಸುವರು.
ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿಯಲ್ಲಿ ನಡೆಸಿ ಅವರ ಹೆಸರನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾ ಗುವುದು. ಈ ಕಾರ್ಯಕ್ರಮ ಜಿಲ್ಲಾ ಮಟ್ಟದಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಡೆಸಲಾಗುವುದು ಹಾಗೂ ರಾಷ್ಟ್ರ ಮಟ್ಟದಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಈ ಸ್ಪರ್ಧೆ ನಡೆಯಲಿರುವುದರಿಂದ ರಾಷ್ಟ್ರಮಟ್ಟದಲ್ಲಿ ಭಾಗವಹಿಲಿಚ್ಛಿಸುವ ಅಭ್ಯರ್ಥಿಗಳು ಇಂಗ್ಲೀಷ್ ಅಥವಾ ಹಿಂದಿ ಭಾಷೆಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು.
ಕಾರ್ಯಕ್ರಮದಲ್ಲಿ ಜಿಲ್ಲೆಯ ನಿವಾಸಿಯಾಗಿರುವ, 15ರಿಂದ 29 ವರ್ಷ ವಯೋಮಿತಿಯ ಯುವಕ ಹಾಗೂ ಯುವತಿಯರು ಮಾತ್ರ ಭಾಗವಹಿಸಲು ಅರ್ಹರಿರುವವರು. ನೊಡೆಲ್ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆನ್ಲೈನ್ (ವರ್ಚುವಲ್) ಮೂಲಕ ನಡೆಸಲಾಗುವುದು.
ಭಾಷಣ ವಿಷಯ:
ಹೊಸಾರತವಾಗಿರಿ ಮತ್ತು ಪರಿಹಾರಗಳನ್ನು ಕಂಡುಕೊಳ್ಳಿ ಮತ್ತು ಕೊಡುಗೆ ನೀಡಿ (ಕನ್ನಡ) ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಭಾಷಣ ರ್ಸ್ಪೆಯು ಫೆ.19ರಂದು ಅಪರಾಹ್ನ 1ರಿಂದ 4 ರವರೆಗೆ ಮಣಿಪಾಲ ಜಿಲ್ಲಾಧಿಕಾರಿಯ ಕಛೇರಿ ಆವರಣದ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ಸೈಟ್ -dyc.udupi@gmail.com - ಅಥವಾ ಜಿಲ್ಲಾ ಯುವ ಅಧಿಕಾರಿ, ನೆಹರು ಯುವ ಕೇಂದ್ರ, ರಜತಾದ್ರಿ, ಬಿ ಬ್ಲಾಕ್, ಜಿಲ್ಲಾಧಿಕಾರಿ ಕಚೇರಿ ಆವರಣ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574992, ಮೊ.ನಂ: 9958325151, ಲೆಕ್ಕಾಧಿಕಾರಿ ಮೊ.ನಂ: 8762114883 ಅನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.