ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ

ಉಡುಪಿ, ಫೆ.17: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಧರಣಿ ನಡೆಸಲಾಯಿತು.
ಈ ಕುರಿತು ಕಾರ್ಮಿಕ ಅಧಿಕಾರಿಗೆ ಮನವಿ ನೀಡಲಾಯಿತು. ಪ್ರತಿಭಟನೆ ಯಲ್ಲಿ ಕಟ್ಟಡ ಸಂಘದ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಶೇಖರ್ ಬಂಗೇರ, ಗೌರವ ಅಧ್ಯಕ್ಷ ದಯಾನಂದ ಕೋಟ್ಯಾನ್, ಖಂಜಾಚಿ ಗಣೇಶ್ ನಾಯಕ್, ಉಪಾಧ್ಯಕ್ಷ ಶಶಿಧರ್ ಗೊಲ್ಲ, ಸುಭಾಷ್ ನಾಯಕ್, ವಾಮನ ಪೂಜಾರಿ, ವಾಮನ ಅಮೀನ್, ರಾಮ ಸಾಲ್ಯಾನ್, ರಾಮ ಕಾರ್ಕಡ, ಸಿಐಟಿಯು ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಉಪಸ್ಥಿತರಿದ್ದರು.
Next Story