Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ದ.ಕ.ಜಿಲ್ಲಾ ಜಂಇಯ್ಯತುಲ್...

ಮಂಗಳೂರು: ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾದಿಂದ ಪ್ರತಿಭಟನೆ

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ18 Feb 2022 6:51 PM IST
share
ಮಂಗಳೂರು: ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾದಿಂದ ಪ್ರತಿಭಟನೆ

ಮಂಗಳೂರು, ಫೆ.18: ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿಕೊಂಡು ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶಿಸಲು ಅನುಮತಿ ನಿರಾಕರಿಸುತ್ತಿವ ಕ್ರಮವನ್ನು ಖಂಡಿಸಿ ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾ (ಇಮಾಮರುಗಳ ಒಕ್ಕೂಟ) ವತಿಯಿಂದ ಶುಕ್ರವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಹಿಜಾಬ್ ನನ್ನ ಧಾರ್ಮಿಕ ಹಕ್ಕು, ಸಂವಿಧಾನ ಕೊಟ್ಟ ಅವಕಾಶವಾಗಿದೆ. ಆ ಮೂಲಕ ಸಂವಿಧಾನವವನ್ನು ಕಾಪಾಡಿರಿ, ಶಿಕ್ಷಣ ನೀಡುವ ಶಿಕ್ಷಕರೇ ವಿದ್ಯಾರ್ಥಿಗಳ ಪಾಲಿಗೆ ತಂದೆಯ ಸಮಾನ ನೀವಾಗಿ. ಶಾಲೆ ನಮ್ಮ ಮೂಲ ಆಸ್ತಿ, ಅದೇ ನಮ್ಮ ದೇಶದ ಶಕ್ತಿ, ರಾಜಕೀಯ ಲಾಭಕ್ಕಾಗಿ ಹಿಂದೂ ಮುಸ್ಲಿಂ ಒಡೆದು ಆಳುವ ನೀತಿಯನ್ನು ನಿಲ್ಲಿಸಿ. ಶಿಕ್ಷಣ ಪಡೆಯುವ ಮಕ್ಕಳ ಮೇಲೆ ಕೋಮುವಾದ ಪ್ರಚೋದಿಸುವ ಕೆಲಸ ಮಾಡಬೇಡಿ ಇತ್ಯಾದಿ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾ (ಇಮಾಮರುಗಳ ಒಕ್ಕೂಟ)ದ ಅಧ್ಯಕ್ಷ ಮೌಲಾನಾ ಎಸ್‌ಬಿ ಮುಹಮ್ಮದ್ ದಾರಿಮಿ ಮನಮೋಹನ್ ಸಿಂಗ್ ಪೇಟಾ ಧರಿಸಿ ದೇಶವನ್ನು ಹತ್ತು ವರ್ಷ ಆಡಳಿತ ನಡೆಸಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂದಿ, ರಾಷ್ಟಪತಿ ಪ್ರತಿಭಾ ಪಾಟೀಲ್ ಕೂಡ ತಲೆವಸ್ತ್ರ ಧರಿಸುತ್ತಿದ್ದರು. ವಸ್ತ್ರ ಧರಿಸುವುದು ಭಾರತೀಯ ಸಂಸ್ಕೃತಿಯಾದರೆ ವಸ್ತ್ರ ಬಿಚ್ಚುವುದು ಪಾಶ್ಚಿಮಾತ್ಯ ಸಂಸ್ಕೃತಿ ಎಂಬುದನ್ನು ಹಿಜಾಬ್ ವಿರೋಧಿಗಳು ತಿಳಿದುಕೊಳ್ಳಬೇಕು. ಸನಾತನ ಸಂಸ್ಕ್ರತಿಯನ್ನು ಗುತ್ತಿಗೆ ಪಡಕೊಂಡ ರೀತಿಯಲ್ಲಿ ವರ್ತಿಸುವವರು ಈಗ ಮಾನ ಮುಚ್ಚುವ ಮುಗ್ದ ವಿದ್ಯಾರ್ಥಿನಿಗಳನ್ನು ಕಾಡುತ್ತಿರುವುದು ವಿಪರ್ಯಾಸ ಎಂದರು.

ಹಿಜಾಬ್ ಎಂಬುದು ಯಾವುದೋ ಅಪಾಯಕಾರಿ ವಸ್ತುವಿನಂತೆ ಬಿಂಬಿಸಲಾಗುತ್ತೆ. ಸಮವಸ್ತ್ರದ ಶಾಲನ್ನು ತಲೆಗೆ ಸರಿಸುವುದೇ ಹಿಜಾಬ್ ಆಗಿದೆ. ಇದಕ್ಕೆ ಅವಕಾಶ ನೀಡದಿರುವುದು ಅಮಾನವೀಯ ಮತ್ತು ಅಸಹಿಷ್ಣುತೆಯೂ ಆಗಿದೆ ಎಂದ ಎಸ್‌ಬಿ ದಾರಿಮಿ ಶಾಲಾ ಕಾಲೇಜುಗಳಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿನಿಯರು ಅನ್ಯೋನ್ಯವಾಗಿದ್ದಾರೆ. ಆದರೆ ಹೊರಗಿನ ರಾಜಕೀಯ ಶಕ್ತಿಗಳು ಅವರೆಡೆಯಲ್ಲಿ ಹುಳಿ ಹಿಂಡುವ ನೀಚ ಕೆಲಸ ಮಾಡುತ್ತಿದೆ. ಆದಾಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಉತ್ತಮ ತೀರ್ಪು ಬರುವ ನಿರೀಕ್ಷೆ ಇದೆ ಎಂದರು.

ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ ಮಾತನಾಡಿ, ರಾಷ್ಟ್ರಧ್ವಜವನ್ನು ಅವಮಾನಿಸಿದವರಿಗೆ ಸದನದಲ್ಲಿ ಪ್ರವೇಶವಿದೆ. ಆದರೆ ಹಿಜಾಬ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನೀಡದಿರುವುದು ಖಂಡನೀಯ. ಕೊರೋನದಿಂದ ಈಗಲೂ ನಾವು ಅರ್ಧ ಹಿಜಾಬ್‌ನಲ್ಲೇ ಇದ್ದೇವೆ. ಆದಾಗ್ಯೂ ಪೂರ್ಣ ಪ್ರಮಾಣದ ಹಿಜಾಬನ್ನು ಅವಮಾನಿಸುತ್ತಿರುವುದು ಯಾತಕ್ಕೆ ಎಂದು ಪ್ರಶ್ನಿಸಿದರು. ಅಲ್ಲದೆ ತ್ರಿವರ್ಣಧ್ವಜವನ್ನು ಒಪ್ಪದವರು, ಗೌರವಿಸದವರು ದೇಶ ಬಿಟ್ಟು ತೊಲಗಿ ಎಂದು ಒತ್ತಾಯಿಸಿದರು.

ಹಬೀಬುರ್ರಹ್ಮಾನ್ ತಂಙಳ್ ದುಆ ಮಾಡಿ, ಮಾತನಾಡಿದರು. ಇಸಾಕ್ ಪೈಝಿ ದೇರಳಕಟ್ಟೆ, ಬುರ್ಹಾನ್ ಪೈಝಿ ಅಡ್ಯಾರ್, ಇಸ್ಮಾಯಿಲ್ ಫೈಝಿ ಬಂಟ್ವಾಳ, ಇಬ್ರಾಹೀಂ ದಾರಿಮಿ ಕಡಬ, ಮುಸ್ತಫಾ ಯಮಾನಿ, ತಬೂಕ್ ದಾರಿಮಿ, ಇಕ್ಬಾಲ್ ಅಹ್ಮದ್ ಮುಲ್ಕಿ, ಮಜೀದ್ ಫೈಝಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ರಶೀದ್ ರಹ್ಮಾನಿ ಸ್ವಾಗತಿಸಿದರು. ನಝೀರ್ ಅಝ್ಹರಿ ಉಪ್ಪಿನಂಗಡಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X