Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಚಾರಣೆಯ ವಿಷಯವನ್ನು ಮೀರಿ ಸಾರ್ವತ್ರಿಕ...

ವಿಚಾರಣೆಯ ವಿಷಯವನ್ನು ಮೀರಿ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತಪಡಿಸದಂತೆ ಹೈಕೋರ್ಟ್ ಗಳಿಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Feb 2022 1:57 PM IST
share
ವಿಚಾರಣೆಯ ವಿಷಯವನ್ನು ಮೀರಿ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತಪಡಿಸದಂತೆ ಹೈಕೋರ್ಟ್ ಗಳಿಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ,ಫೆ.18: ತಮ್ಮ ಮುಂದಿರುವ ವಿಷಯದ ವ್ಯಾಪ್ತಿಯನ್ನು ಮೀರಿ ಸಾರ್ವತ್ರಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದನ್ನು ನಿವಾರಿಸುವಂತೆ ಸರ್ವೋಚ್ಚ ನ್ಯಾಯಾಲಯವು ಉಚ್ಚ ನ್ಯಾಯಾಲಯಗಳಿಗೆ ಸೂಚಿಸಿದೆ ಎಂದು Live Law ವರದಿ ಮಾಡಿದೆ.

ಜ.19ರ ದಿಲ್ಲಿ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರವು ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಈ ನಿರ್ದೇಶವನ್ನು ನೀಡಿದೆ. ಟೆಂಡರ್ಗಳನ್ನು ಅಂಗೀಕರಿಸುವ ಕೇಂದ್ರದ ಪ್ರಕ್ರಿಯೆಯಲ್ಲಿ ತಾರತಮ್ಯವನ್ನು ಆರೋಪಿಸಿ ಭಾರತ ಫ್ರಿಝ್ ವರ್ನರ್ ಲಿ. ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯವು ವಿಚಾರಣೆ ನಡೆಸಿತ್ತು.

ಉಚ್ಚ ನ್ಯಾಯಾಲಯವು ಕೆಲವು ಬಿಡ್ಗಳ ತಪ್ಪು ಮೌಲ್ಯಮಾಪನ ಮತ್ತು ಕೆಲವು ಬಿಡ್ಡರ್ಗಳಿಗೆ ತಾರತಮ್ಯ ಕುರಿತು ಪ್ರಧಾನಿಗಳಿಗೆ ಅಹವಾಲು ಸಲ್ಲಿಸಲು ಕಂಪನಿಗೆ ಅವಕಾಶವನ್ನು ನೀಡಿತ್ತು.

‘ಭಾರತ ಸರಕಾರವು ‘ಮೇಕ್ ಇನ್ ಇಂಡಿಯಾ’ಕ್ಕೆ ಒತ್ತು ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು,ಅರ್ಜಿದಾರರ ದೂರು ಸರಿಯಾಗಿರುವಂತೆ ಕಂಡು ಬರುತ್ತಿದೆ ಮತ್ತು ನಮ್ಮ ಅಭಿಪ್ರಾಯದಲ್ಲಿ ಉನ್ನತ ಮಟ್ಟದಲ್ಲಿ ಗಂಭೀರ ಪರಿಗಣನೆಯ ಅಗತ್ಯವಿದೆ ’ ಎಂದು ಉಚ್ಚ ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿತ್ತು.

 ಗುರುವಾರ ಮೇಲ್ಮನವಿಯ ವಿಚಾರಣೆ ಸಂದರ್ಭ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಬಿ.ವಿ.ನಾಗರತ್ನಾ ಅವರ ಪೀಠವು, ಉಚ್ಚ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರಲಿಲ್ಲ ಅಥವಾ ಅರ್ಹತೆಯ ಮೇಲೆ ಪ್ರಕರಣವನ್ನು ಪರಿಶೀಲಿಸುತ್ತಿರಲಿಲ್ಲ. ಒಂದು ಪ್ರಕರಣವನ್ನು ಆಧರಿಸಿ ‘ಭಾರತೀಯ ಬಿಡ್ಡರ್ಗಳಿಗೆ ತಾರತಮ್ಯವನ್ನು ಎಸಗಲಾಗುತ್ತಿದೆ’ ಎಂಬ ಸಾರ್ವತ್ರಿಕ ಅಭಿಪ್ರಾಯವನ್ನು ಉಚ್ಚ ನ್ಯಾಯಾಲಯವು ವ್ಯಕ್ತಪಡಿಸಬಾರದಿತ್ತು. ಇಂತಹ ಸಂದರ್ಭಗಳಲ್ಲಿ ಉಚ್ಚ ನ್ಯಾಯಾಲಯಗಳು ಇಂತಹ ಸಾರ್ವತ್ರಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ದೂರವಿರಬೇಕು ಮತ್ತು ಅವು ತಮ್ಮೆದುರು ಇರುವ ಕಕ್ಷಿದಾರರ ನಡುವಿನ ವಿವಾದಕ್ಕೆ ಮಾತ್ರ ಸೀಮಿತವಾಗಿರಬೇಕು. ಪ್ರಕರಣದಲ್ಲಿ ಅನಗತ್ಯವಾದ ಸಾರ್ವತ್ರಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸದಂತೆ ನಾವು ಉಚ್ಚ ನ್ಯಾಯಾಲಯಗಳಿಗೆ ಸಲಹೆ ನೀಡುತ್ತೇವೆ ಎಂದು ಹೇಳಿತು.

ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯವು ಅನುಮತಿಸಿತಾದರೂ ಅದಕ್ಕೂ ಮುನ್ನ ತಾರತಮ್ಯದ ಟೀಕೆಗಳನ್ನು ತೆಗೆದುಹಾಕಿತು.

ಇದನ್ನೂ ಓದಿ: ಕಾಂಗ್ರೆಸ್ ನದ್ದು ಊರಿಗೆ ಮನುಷ್ಯನಲ್ಲ, ಸ್ಮಶಾನಕ್ಕೆ ಹೆಣವೂ ಅಲ್ಲ ಎಂಬ ಸ್ಥಿತಿ - ಸಚಿವ ಅಶೋಕ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X